ನಟ ವಿನೋದ್ರಾಜ್ರ ಒಂದು ಲಕ್ಷ ರೂ. ಕಳ್ಳತನ
Team Udayavani, Sep 29, 2018, 6:20 AM IST
ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ನಟ ವಿನೋದ್ರಾಜ್ ಅವರು ಬ್ಯಾಂಕ್ನಿಂದ ಡ್ರಾ ಮಾಡಿಕೊಂಡು ಬಂದಿದ್ದ 1 ಲಕ್ಷ ರೂ.ಗಳನ್ನು ಕಳ್ಳರು ದೋಚಿದ್ದಾರೆ.
ನೆಲಮಂಗಲ ತಾಲೂಕಿನ ಗಡಿ ಭಾಗದಲ್ಲಿರುವ ಸೋಲದೇವನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ನಟ ವಿನೋದ್ರಾಜ್ ಅವರು ತಮ್ಮ ತಾಯಿ, ಕನ್ನಡ ಚಿತ್ರರಂಗದ ಹಿರಿಯ ನಟಿ ಡಾ. ಲೀಲಾವತಿ ಅವರೊಂದಿಗೆ ವಾಸವಾಗಿದ್ದಾರೆ.
ಶುಕ್ರವಾರ ಮಧ್ಯಾಹ್ನ ನೆಲಮಂಗಲ ಪಟ್ಟಣದ ಮುಖ್ಯರಸ್ತೆಯ ದ್ವಾರಕಾ ಪ್ಲಾಜಾದಲ್ಲಿರುವ ಇಂಡಸ್ಇಂಡ್ ಬ್ಯಾಂಕ್ಗೆ ಆಗಮಿಸಿದ ಅವರು 1 ಲಕ್ಷ ರೂ.ಗಳನ್ನು ಡ್ರಾ ಮಾಡಿಕೊಂಡು, ಹಣವನ್ನು ತಮ್ಮ ಕಾರಿನಲ್ಲಿಟ್ಟುಕೊಂಡು ಹೊರಟಿದ್ದರು. ಅವರ ಜೊತೆ ಸ್ನೇಹಿತ ರಾಮಾಂಜಿನಪ್ಪ ಕೂಡ ಬಂದಿದ್ದರು. ಆಗ ಅವರ ಕಾರಿನ ಬಳಿ ಬಂದ ಇಬ್ಬರು ವ್ಯಕ್ತಿಗಳು, “ಸರ್, ನಿಮ್ಮ ಕಾರಿನ ಟೈಯರ್ ಪಂಚರ್ ಆಗಿದೆ ನೋಡಿ’ ಎಂದರು.
ಇಬ್ಬರೂ ಕೆಳಗಿಳಿದು ಬಂದು ನೋಡುವಷ್ಟರಲ್ಲಿ ಕಾರಿನ ಮುಂದಿನ ಸೀಟಿನಲ್ಲಿ ಇಟ್ಟಿದ್ದ ಸೂಟ್ಕೇಸ್ನ್ನು ಕಳ್ಳರು ಹಣ ಸಮೇತ ದೋಚಿಕೊಂಡು ಪರಾರಿಯಾಗಿದ್ದಾರೆ. ನೆಲಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಅವರು ದೂರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು