ನಾವೆಲ್ಲರೂ ಅಮಾಯಕರು..: ಮಾಧ್ಯಮಗಳೆದುರು ಗೌರಿ ಹತ್ಯೆ ಆರೋಪಿಗಳು
Team Udayavani, Sep 29, 2018, 4:09 PM IST
ಬೆಂಗಳೂರು: ‘ನಾವು ಅಮಾಯಕರು, ನಮಗೂ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೂ ಯಾವುದೇ ಸಂಬಂಧವಿಲ್ಲ’ ಎಂದು ಪ್ರಮುಖ ಆರೋಪಿಗಳು ಶನಿವಾರ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.
ಪ್ರಮುಖ ಆರೋಪಿ ಪರಶುರಾಮ್ ವಾಗ್ಮೋರೆ ‘ನಾವು ನಿರಪರಾಧಿಗಳು, ನಮ್ಮನ್ನು ಸುಮ್ಮನೆ ಬಂಧಿಸಿ ಹಿಂಸೆ ನೀಡಲಾಗುತ್ತಿದೆ. ಹಣ ಕೊಡುತ್ತೇವೆ , ಒಪ್ಪಿಕೊಳ್ಳಿ ಎಂದು ಒತ್ತಾಯಿಸುತ್ತಿದ್ದಾರೆ’ ಎಂದು ಎಸ್ಐಟಿ ವಿರುದ್ಧ ಆರೋಪ ಮಾಡಿದ್ದಾರೆ.
‘ಕೊಲೆ ಒಪ್ಪಿಕೊಳ್ಳಿ ಇಲ್ಲವಾದಲ್ಲಿ ನಿಮ್ಮ ಅಣ್ಣ,ತಮ್ಮಂದಿರನ್ನು ಫಿಟ್ ಮಾಡುತ್ತೇವೆ’ ಎಂದು ಹೆದರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಇನ್ನೋರ್ವ ಆರೋಪಿ ಮನೋಹರ್ ಯಾವ್ಡೇ ಮಾತನಾಡಿ ‘ನಮಗೆ ಇಲ್ಲಿರುವವರ ಯಾರ ಪರಿಚಯವೂ ಇಲ್ಲ. ಗೌರಿ ಲಂಕೇಶ್ ಯಾರು ಅಂತಾನೇ ಗೊತ್ತಿರಲಿಲ್ಲ. ನಮ್ಮ ಮೇಲೆ ಎಸ್ಐಟಿ ಅಧಿಕಾರಿಗಳು ದಬ್ಬಾಳಿಕೆ ನಡೆಸುತ್ತಿದ್ದಾರೆ’ ಎಂದು ಹೇಳಿದ್ದಾರೆ.
ಆರೋಪಿಗಳ ನ್ಯಾಯಾಂಗ ಬಂಧನ ಮುಕ್ತಾಯವಾದ ಹಿನ್ನಲೆಯಲ್ಲಿ ಕೋಕಾ ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಕರೆದೊಯ್ಯುವ ವೇಳೆ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್