ಹೆಬ್ಟಾಳ್ಕರ್ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ: ಬಿಎಸ್ವೈ
Team Udayavani, Oct 1, 2018, 7:00 AM IST
ಶಿವಮೊಗ್ಗ: “ಕೆಲವರು ಆಡೋ ಹಗುರ ಮಾತುಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ‘ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್ಗೆ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಹಣ ಹಾಗೂ ಸಚಿವ ಸ್ಥಾನದ ಆಫರ್ ನೀಡಲಾಗಿತ್ತು ಎಂಬುದೆಲ್ಲ ಸುಳ್ಳು. ಇವರ ಹಗುರ ಮಾತಿಗೆ ಕಿಮ್ಮತ್ತಿಲ್ಲ ಎಂದರು. ಲಕ್ಷ್ಮೀ ಹೆಬ್ಟಾಳ್ಕರ್ ಅವರಿಗೆ ಗೌರವದಿಂದ ಒಂದು ಮಾತು ಹೇಳುತ್ತೇನೆ. ನಿಮ್ಮನ್ನು ಯಾರು ಕೇಳಿದರು? ಯಾರು ಹಣ ಕೊಡ್ತೀವಿ ಅಂದ್ರು ಎಂಬುದನ್ನೆಲ್ಲ ಬಹಿರಂಗ ಪಡಿಸಿ. ಅಲ್ಲದೆ ಈ ವಿಷಯವಾಗಿ ಇಷ್ಟು ದಿನ ಯಾಕೆ ಸುಮ್ಮನಿದ್ರಿ ಎಂದು ಪ್ರಶ್ನೆಗೂ ಉತ್ತರ ಕೊಡಿ ಎಂದರು.
ಸತ್ಯ ರಾಜ್ಯದ ಜನರಿಗೆ ತಿಳಿಯಲಿ. ಲಕ್ಷ್ಮೀ ಹೆಬ್ಟಾಳ್ಕರ್ ವಿನಾಕಾರಣ ಗೊಂದಲ ಉಂಟು ಮಾಡುವ ಪ್ರಯತ್ನ ಮಾಡದೆ ಶೀಘ್ರವೇ ಎಲ್ಲ ವಿಷಯ ಬಹಿರಂಗಪಡಿಸಲಿ. ಅದು ಬಿಟ್ಟು ಕೇವಲ ಆರೋಪ ಮಾಡುವುದೇ ಕಾಂಗ್ರೆಸ್ ನಾಯಕರ ಉದ್ದೇಶವಾಗಿದ್ದರೆ ಅದಕ್ಕೆ ನನ್ನ ಅಭ್ಯಂತರವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ