ಪಕ್ಷ ಸಂಘಟನೆಯಲ್ಲಿ ಸೊರಗಿದ ಜೆಡಿಎಸ್‌


Team Udayavani, Oct 1, 2018, 6:20 AM IST

jds.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಿರುವ ಜೆಡಿಎಸ್‌ ತಳಮಟ್ಟದಿಂದ ಪಕ್ಷ ಸಂಘಟನೆಯಲ್ಲಿ ಸೊರಗುತ್ತಿದೆ.
ಎಚ್‌.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ಆಡಳಿತ ನಡೆಸುವಲ್ಲಿ ಬ್ಯುಸಿಯಾಗಿದ್ದಾರೆ. ದೇವೇಗೌಡರ ಒತ್ತಾಯಕ್ಕೆ ಕಟ್ಟುಬಿದ್ದು ಒಲ್ಲದ ಮನಸ್ಸಿನಿಂದ ರಾಜ್ಯಾಧ್ಯಕ್ಷ ಸ್ಥಾನ ವಹಿಸಿಕೊಂಡ ಎಚ್‌.ವಿಶ್ವನಾಥ್‌ ಸಂಘಟನೆಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಕೊಂಡಿಲ್ಲ.

ನೂತನ ರಾಜ್ಯಾಧ್ಯಕ್ಷರ ನೇಮಕ ಬೆನ್ನಲ್ಲೇ ಸಮಗ್ರ ಬದಲಾವಣೆ ಹಾಗೂ ಪುನರ್‌ರಚನೆ ಹಿನ್ನೆಲೆಯಲ್ಲಿ ಹಿಂದಿನ ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಮತ್ತು ತಾಲೂಕು ಘಟಕಗಳ ಅಧ್ಯಕ್ಷರನ್ನು ತೆಗೆದುಹಾಕಲಾಗಿದೆ.

ಪಕ್ಷದ ವಿಚಾರ ಜೆಪಿ ಭವನಕ್ಕೆ ಸೀಮಿತ, ವಿಧಾನಸೌಧವರೆಗೂ ಯಾರೂ ಬರಬಾರದು ಎಂದು ಕುಮಾರಸ್ವಾಮಿಯವರು ತಾಕೀತು ಮಾಡಿದ್ದಾರೆ.ಹೀಗಾಗಿ, ಸರ್ಕಾರ ಇದ್ದರೂ ಜೆಡಿಎಸ್‌ ಕಾರ್ಯಕರ್ತರು ಒಂದು ರೀತಿಯಲ್ಲಿ “ಅನಾಥ’ ಎಂಬಂತಾಗಿದೆ.

ಅತ್ತ ಜೆಪಿ ಭವನಕ್ಕೂ ಪಕ್ಷದ ಕಾರ್ಯಕರ್ತರು ತಲೆ ಹಾಕುತ್ತಿಲ್ಲ. ದೇವೇಗೌಡರು ಅಥವಾ ಕುಮಾರಸ್ವಾಮಿ ಪಕ್ಷದ ಕಚೇರಿಗೆ ಬಂದಾಗ ಮಾತ್ರ ತುಂಬಿ ತುಳುಕುತ್ತದೆ. ಇಲ್ಲದಿದ್ದರೆ ಕಚೇರಿ ಸಿಬ್ಬಂದಿ ಬಿಟ್ಟರೆ ಯಾರೂ ಇರುವುದಿಲ್ಲ. ಜೆಡಿಎಸ್‌ನ ಸಚಿವರು ಪಕ್ಷದ ಕಚೇರಿಗೆ ಬಂದಾಗಲೂ ಅಹವಾಲು ಹೊತ್ತು ಬರುವವರು ಕಡಿಮೆಯೇ. ಇತ್ತೀಚೆಗೆ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ದೇವೇಗೌಡರಾಗಲಿ, ಕುಮಾರಸ್ವಾಮಿಯವಾಗಲಿ, ಎಚ್‌.ವಿಶ್ವನಾಥ್‌ ಆಗಲಿ ಪಕ್ಷದ ಅಭ್ಯರ್ಥಿಗಳ ಪರ ಹೆಚ್ಚಾಗಿ ಪ್ರಚಾರವೇ ಮಾಡಲಿಲ್ಲ. ಇದರಿಂದಾಗಿ ಒಂದು ರೀತಿಯಲ್ಲಿ ಪಕ್ಷಕ್ಕೂ ಸರ್ಕಾರಕ್ಕೂ ಸಂಪರ್ಕವೇ ಇಲ್ಲದಂತಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಸಮ್ಮಿಶ್ರ ಸರ್ಕಾರ ರಚನೆಯಾದ ನಂತರ ಪಕ್ಷ ಸಂಘಟನೆ ವಿಚಾರದಲ್ಲಿ ಒಂದೇ ಒಂದು ಸಭೆಯೂ ಆಗಿಲ್ಲ. ಆಪರೇಷನ್‌ ಕಮಲ ಭೀತಿಯಿಂದ  ದೇವೇಗೌಡ ಹಾಗೂ ಕುಮಾರಸ್ವಾಮಿಯವರು ಸರ್ಕಾರ ಉಳಿಸಿಕೊಳ್ಳುವ ಕಸರತ್ತಿನಲ್ಲಿ ತೊಡಗಿದ್ದಾರೆ. ಹೀಗಾಗಿ, ಪಕ್ಷ ಸಂಘಟನೆ ಬಗ್ಗೆ ತಲೆಕಡಿಸಿಕೊಂಡಿಲ್ಲ.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಹಾಗೂ ಬಿಜೆಪಿ  ಈಗಾಗಲೇ ಸಾಕಷ್ಟು ಸಿದ್ಧತೆ ಕೈಗೊಂಡಿದೆ. ಕ್ಷೇತ್ರಾವಾರು ಸಭೆ ಸಹ ಮಾಡಿದೆ. ಆದರೆ, ಜೆಡಿಎಸ್‌ನಲ್ಲಿ ಆ ಬಗ್ಗೆ ಏನೂ ಚಟುವಟಿಕೆ ನಡೆಯುತ್ತಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಂಡು ಎದುರಿಸುವುದು ಖಚಿತವಾಗಿರುವುದರಿಂದ ಕ್ಷೇತ್ರ ನಮಗೆ ಸಿಗುತ್ತೋ ಇಲ್ಲವೋ ಎಂಬ ಅನುಮಾನವೂ ಕೆಲವು ಜಿಲ್ಲಾ ಘಟಕಗಳಲ್ಲಿದೆ.

ಅಸಮಾಧಾನ
ಈ ಮಧ್ಯೆ, ವಿಧಾನಪರಿಷತ್‌ ಚುನಾವಣೆಯಲ್ಲಿ  ಪಕ್ಷದ ಅಧಿಕೃತ ಅಭ್ಯರ್ಥಿ ಸೋಲಿಸಿದವರಿಗೆ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸಿದವರಿಗೆ ಮಣೆ ಹಾಕಿರುವುದು ಮತ್ತಷ್ಟು ಅಸಮಾಧಾನಕ್ಕೆ ಕಾರಣವಾಗಿದೆ. ವಿಧಾನಪರಿಷತ್‌ನ ಎರಡು ಸ್ಥಾನಗಳಿಗೂ ಒಂದೇ ಸಮುದಾಯದಕ್ಕೆ ಸೇರಿದವರಿಗೆ ಅವಕಾಶ ನೀಡಿದ್ದು ಇತರೆ ವರ್ಗದ ನಾಯಕರಲ್ಲಿ ಬೇಸರ ತರಿಸಿದೆ.

ಜೆಡಿಎಸ್‌ಗಿದ್ದ ಒಕ್ಕಲಿಗ ಹಣೆಪಟ್ಟಿ ಕಳಚಿಕೊಳ್ಳಲು ಚುನಾವಣೆ ಸಂದರ್ಭದಲ್ಲಿ ಎಚ್‌.ವಿಶ್ವನಾಥ್‌, ಮಧು ಬಂಗಾರಪ್ಪ, ಪಿ.ಜಿ.ಆರ್‌.ಸಿಂಧ್ಯಾ, ಬಸವರಾಜ ಹೊರಟ್ಟಿ, ಬಿ.ಎಂ.ಫ‌ರೂಕ್‌, ವೈ.ಎಸ್‌.ವಿ.ದತ್ತಾ, ಕೋನರೆಡ್ಡಿ, ನೀರಾವರಿ ಮುಂತಾದ ನಾಯಕರ ಜತೆಗೂಡಿ ಸಾಮೂಹಿಕ ನಾಯಕತ್ವ ಎಂದು ಹೇಳಿ ಅಧಿಕಾರಕ್ಕೆ ಬಂದ ನಂತರ ಯಾರನ್ನೂ ಲೆಕ್ಕಕ್ಕೇ ಇಟ್ಟುಕೊಂಡಿಲ್ಲ. ಪಕ್ಷದ ವೇದಿಕೆಯಲ್ಲಿ ಯಾವ ತೀರ್ಮಾನವೂ ಆಗುತ್ತಿಲ್ಲ. ಯಾವ ವಿಚಾರದ ಬಗ್ಗೆಯೂ ಚರ್ಚೆಯೂ ಆಗುವುದಿಲ್ಲ ಎಂಬ ಅಸಮಾಧಾನವೂ ಬಹಿರಂಗವಾಗಿಯೇ ಕೆಲವು ನಾಯಕರು ಹೊರಹಾಕುತ್ತಿದ್ದಾರೆ. ಇತ್ತೀಚೆಗಿನ ವಿಧಾನಪರಿಷತ್‌ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಖುದ್ದು ಕುಮಾರಸ್ವಾಮಿಯವರು ತೀವ್ರ ಅಸಮಾಧಾನಗೊಂಡು ದೇವೇಗೌಡರ ಜತೆ ಒಂದು ವಾರ ಮಾತು ಬಿಟ್ಟಿದ್ದರು ಎಂದು ಹೇಳಲಾಗಿದೆ.

ನಿಜ, ಜೆಡಿಎಸ್‌ ಸಂಘಟನೆಯಲ್ಲಿ ಕೊರತೆ ಉಂಟಾಗಿದೆ. ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ನಾವು ಕಾರ್ಯೋನ್ಮುಖರಾಗಲೇಬೇಕು. ಶೀಘ್ರದಲ್ಲೇ ರಾಷ್ಟ್ರೀಯ ಅಧ್ಯಕ್ಷರಾದ ಎಚ್‌.ಡಿ.ದೇವೇಗೌಡರು ಹಾಗೂ ನಾನು ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟನೆ ಕಾರ್ಯದಲ್ಲಿ ತೊಡಗಲಿದ್ದೇವೆ.
– ಎಚ್‌.ವಿಶ್ವನಾಥ್‌, ಜೆಡಿಎಸ್‌ ರಾಜ್ಯಾಧ್ಯಕ್ಷ

– ಎಸ್‌.ಲಕ್ಷ್ಮಿನಾರಾಯಣ
 

ಟಾಪ್ ನ್ಯೂಸ್

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.