ಹಾಡಹಗಲೇ ಮಾಜಿ ಮೇಯರ್‌ ಹತ್ಯೆ


Team Udayavani, Oct 1, 2018, 6:00 AM IST

ravi-kumar-mu.jpg

ತುಮಕೂರು: ಶೈಕ್ಷಣಿಕ ನಗರಿ ಎಂದೇ ಕರೆಯಲಾಗುವ ತುಮಕೂರಿನಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ರಕ್ತದ ಕೋಡಿ ಹರಿದಿದೆ. ಮಾಜಿ ಮೇಯರ್‌, ಹಾಲಿ ಪಾಲಿಕೆ ಸದಸ್ಯ ಹಾಗೂ ಜೆಡಿಎಸ್‌ ಮುಖಂಡ ಎಚ್‌. ರವಿಕುಮಾರ್‌ ಅವರನ್ನು ಏಳು ಮಂದಿ ಸದಸ್ಯರಿರುವ ದುಷ್ಕರ್ಮಿಗಳ ತಂಡ ಸಿನೀಮಿಯ ರೀತಿಯಲ್ಲಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದೆ. ಘಟನೆಯಿಂದ ತುಮಕೂರು ಜನತೆ ಬೆಚ್ಚಿಬಿದ್ದಿದೆ.

22ನೇ ವಾರ್ಡ್‌ನ ಪಾಲಿಕೆ ಸದಸ್ಯರಾಗಿರುವ ಮಾಜಿ ಮೇಯರ್‌ ಎಚ್‌. ರವಿಕುಮಾರ್‌ ತಮ್ಮ ವಾರ್ಡ್‌ನಲ್ಲಿ ಸಂಚರಿಸಿ ಬಟವಾಡಿಯಲ್ಲಿ ಬಳಿ ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದ ವೇಳೆ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹೊಡೆದು ನಡು ರಸ್ತೆಯಲ್ಲಿಯೇ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಘಟನೆ ನಡೆದದ್ದು ಹೀಗೆ?:
ನಗರ ಪಾಲಿಕೆ ಸದಸ್ಯ ಎಚ್‌. ರವಿಕುಮಾರ್‌ ಟೀ ಕುಡಿಯುತ್ತಾ ಕುಳಿತಿದ್ದ ವೇಳೆ ಅಂಗಡಿ ಬಳಿಗೆ ಹಾಲಿನ ವಾಹನ ಎಂಬಂತೆ ಇದ್ದ ಬ್ಯಾನರ್‌ ಉಳ್ಳ 407 ಮಿನಿ ಟ್ರಕ್‌ ಬಂದಿದೆ. ವಾಹನದಿಂದ ಇಳಿದ ಒಬ್ಬ ವ್ಯಕ್ತಿ ಅಂಗಡಿಗೆ ಬಂದು ಸಿಗರೆಟ್‌ ಮತ್ತು ಪಾನ್‌ಪರಾಗ್‌ ತೆಗೆದುಕೊಂಡಿದ್ದಾನೆ. ನಂತರ ತನ್ನ ಕೈಯಲ್ಲಿದ್ದ ಕವರ್‌ನಿಂದ ಖಾರದ ಪುಡಿಯನ್ನು ರವಿಕುಮಾರ್‌ ಅವರ ಕಣ್ಣಿಗೆ ಎರಚಿದ್ದಾನೆ. ಅವರ ಜೊತೆಯಲ್ಲಿದ್ದ ಸ್ನೇಹಿತನಿಗೂ ಎರಚಲು ಪ್ರಯತ್ನಿಸಿದ್ದಾನೆ.

ಖಾರದ ಪುಡಿ ಒರೆಸಿಕೊಳ್ಳುತ್ತಲೇ ರವಿಕುಮಾರ್‌ ಮತ್ತು ಸ್ನೇಹಿತ ತಕ್ಷಣ ಎಚ್ಚೆತ್ತು ಓಡಲಾರಂಭಿಸಿದ್ದಾರೆ. ಅಷ್ಟರಲ್ಲಿ ವಾಹನದಲ್ಲಿದ್ದ ಐದಾರು ಮಂದಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಸಿನಿಮೀಯ ರೀತಿಯಲ್ಲಿ ದಾಳಿ ಮಾಡಿ ಹತ್ಯೆಗೈದಿದ್ದಾರೆ. ಕಣ್ಣಿಗೆ ಖಾರದಪುಡಿ ಎರಚಿದ್ದರಿಂದ ರವಿಕುಮಾರ್‌ ಅವರಿಗೆ ವೇಗವಾಗಿ ಓಡಿ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ರವಿಕುಮಾರ್‌ ಕುತ್ತಿಗೆ ಮತ್ತು ತಲೆ ಛಿದ್ರವಾಗುವಷ್ಟು ಭೀಕರವಾಗಿ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ರವಿಕುಮಾರ್‌ ಜೊತೆಗಿದ್ದ ಅವರ ಸ್ನೇಹಿತ ದುಷ್ಕರ್ಮಿಗಳ ದಾಳಿಯಿಂದ ತಪ್ಪಿಸಿಕೊಂಡು ಜನನಿಬಿಡ ಪ್ರದೇಶಕ್ಕೆ ಓಡಿ ಹೋಗಿದ್ದರಿದ್ದರಿಂದ ಪ್ರಾಣ ಉಳಿದಿದೆ ಎನ್ನಲಾಗಿದೆ.

ಜೆಡಿಎಸ್‌ ಪಕ್ಷದ ಮುಖಂಡರಾಗಿ ಗುರುತಿಸಿಕೊಂಡಿದ್ದ ರವಿಕುಮಾರ್‌ ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ 22ನೇ ವಾರ್ಡ್‌ನಿಂದ ಕಳೆದ ಆ.31ರಂದು ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಾಲಿಕೆ ಸದಸ್ಯರಾಗಿ ಮರು ಆಯ್ಕೆಯಾಗಿದ್ದರು. ಕಳೆದ ಬಾರಿ ಮಹಾನಗರ ಪಾಲಿಕೆಯ ಮಹಾಪೌರರಾಗಿಯೂ ಆಯ್ಕೆಯಾಗಿ ಕಾರ್ಯನಿರ್ವಹಿಸಿದ್ದರು.

ಪರಾರಿಯಾದ ದುಷ್ಕರ್ಮಿಗಳು: 
ತೀವ್ರ ಗಾಯಗೊಂಡಿದ್ದ ರವಿಕುಮಾರ್‌ ಸ್ಥಳದಲ್ಲೇ ಕುಸಿಯುವ ಮಟ್ಟಕ್ಕೆ ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು ಕ್ಷಣಾರ್ಧದಲ್ಲಿ ಅಲ್ಲಿಂದ ಪರಾರಿಯಾಗಿ¨ªಾರೆ. ಘಟನೆ ನಡೆದ ವೇಳೆ ಟೀ ಅಂಗಡಿಯ ಮಾಲೀಕ ಮತ್ತು ಕೊಲೆಯಾಗಿರುವ ರವಿಕುಮಾರ್‌ ಮತ್ತು ಆತನ ಸ್ನೇಹಿತ ಬಿಟ್ಟರೆ ಬೇರೆ ಯಾರೂ ಸ್ಥಳದಲ್ಲಿ ಇರಲಿಲ್ಲ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.