ಹಾಡಹಗಲೇ ಮಾಜಿ ಮೇಯರ್‌ ಹತ್ಯೆ


Team Udayavani, Oct 1, 2018, 6:00 AM IST

ravi-kumar-mu.jpg

ತುಮಕೂರು: ಶೈಕ್ಷಣಿಕ ನಗರಿ ಎಂದೇ ಕರೆಯಲಾಗುವ ತುಮಕೂರಿನಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ರಕ್ತದ ಕೋಡಿ ಹರಿದಿದೆ. ಮಾಜಿ ಮೇಯರ್‌, ಹಾಲಿ ಪಾಲಿಕೆ ಸದಸ್ಯ ಹಾಗೂ ಜೆಡಿಎಸ್‌ ಮುಖಂಡ ಎಚ್‌. ರವಿಕುಮಾರ್‌ ಅವರನ್ನು ಏಳು ಮಂದಿ ಸದಸ್ಯರಿರುವ ದುಷ್ಕರ್ಮಿಗಳ ತಂಡ ಸಿನೀಮಿಯ ರೀತಿಯಲ್ಲಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದೆ. ಘಟನೆಯಿಂದ ತುಮಕೂರು ಜನತೆ ಬೆಚ್ಚಿಬಿದ್ದಿದೆ.

22ನೇ ವಾರ್ಡ್‌ನ ಪಾಲಿಕೆ ಸದಸ್ಯರಾಗಿರುವ ಮಾಜಿ ಮೇಯರ್‌ ಎಚ್‌. ರವಿಕುಮಾರ್‌ ತಮ್ಮ ವಾರ್ಡ್‌ನಲ್ಲಿ ಸಂಚರಿಸಿ ಬಟವಾಡಿಯಲ್ಲಿ ಬಳಿ ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದ ವೇಳೆ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹೊಡೆದು ನಡು ರಸ್ತೆಯಲ್ಲಿಯೇ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಘಟನೆ ನಡೆದದ್ದು ಹೀಗೆ?:
ನಗರ ಪಾಲಿಕೆ ಸದಸ್ಯ ಎಚ್‌. ರವಿಕುಮಾರ್‌ ಟೀ ಕುಡಿಯುತ್ತಾ ಕುಳಿತಿದ್ದ ವೇಳೆ ಅಂಗಡಿ ಬಳಿಗೆ ಹಾಲಿನ ವಾಹನ ಎಂಬಂತೆ ಇದ್ದ ಬ್ಯಾನರ್‌ ಉಳ್ಳ 407 ಮಿನಿ ಟ್ರಕ್‌ ಬಂದಿದೆ. ವಾಹನದಿಂದ ಇಳಿದ ಒಬ್ಬ ವ್ಯಕ್ತಿ ಅಂಗಡಿಗೆ ಬಂದು ಸಿಗರೆಟ್‌ ಮತ್ತು ಪಾನ್‌ಪರಾಗ್‌ ತೆಗೆದುಕೊಂಡಿದ್ದಾನೆ. ನಂತರ ತನ್ನ ಕೈಯಲ್ಲಿದ್ದ ಕವರ್‌ನಿಂದ ಖಾರದ ಪುಡಿಯನ್ನು ರವಿಕುಮಾರ್‌ ಅವರ ಕಣ್ಣಿಗೆ ಎರಚಿದ್ದಾನೆ. ಅವರ ಜೊತೆಯಲ್ಲಿದ್ದ ಸ್ನೇಹಿತನಿಗೂ ಎರಚಲು ಪ್ರಯತ್ನಿಸಿದ್ದಾನೆ.

ಖಾರದ ಪುಡಿ ಒರೆಸಿಕೊಳ್ಳುತ್ತಲೇ ರವಿಕುಮಾರ್‌ ಮತ್ತು ಸ್ನೇಹಿತ ತಕ್ಷಣ ಎಚ್ಚೆತ್ತು ಓಡಲಾರಂಭಿಸಿದ್ದಾರೆ. ಅಷ್ಟರಲ್ಲಿ ವಾಹನದಲ್ಲಿದ್ದ ಐದಾರು ಮಂದಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಸಿನಿಮೀಯ ರೀತಿಯಲ್ಲಿ ದಾಳಿ ಮಾಡಿ ಹತ್ಯೆಗೈದಿದ್ದಾರೆ. ಕಣ್ಣಿಗೆ ಖಾರದಪುಡಿ ಎರಚಿದ್ದರಿಂದ ರವಿಕುಮಾರ್‌ ಅವರಿಗೆ ವೇಗವಾಗಿ ಓಡಿ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ರವಿಕುಮಾರ್‌ ಕುತ್ತಿಗೆ ಮತ್ತು ತಲೆ ಛಿದ್ರವಾಗುವಷ್ಟು ಭೀಕರವಾಗಿ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ರವಿಕುಮಾರ್‌ ಜೊತೆಗಿದ್ದ ಅವರ ಸ್ನೇಹಿತ ದುಷ್ಕರ್ಮಿಗಳ ದಾಳಿಯಿಂದ ತಪ್ಪಿಸಿಕೊಂಡು ಜನನಿಬಿಡ ಪ್ರದೇಶಕ್ಕೆ ಓಡಿ ಹೋಗಿದ್ದರಿದ್ದರಿಂದ ಪ್ರಾಣ ಉಳಿದಿದೆ ಎನ್ನಲಾಗಿದೆ.

ಜೆಡಿಎಸ್‌ ಪಕ್ಷದ ಮುಖಂಡರಾಗಿ ಗುರುತಿಸಿಕೊಂಡಿದ್ದ ರವಿಕುಮಾರ್‌ ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ 22ನೇ ವಾರ್ಡ್‌ನಿಂದ ಕಳೆದ ಆ.31ರಂದು ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಾಲಿಕೆ ಸದಸ್ಯರಾಗಿ ಮರು ಆಯ್ಕೆಯಾಗಿದ್ದರು. ಕಳೆದ ಬಾರಿ ಮಹಾನಗರ ಪಾಲಿಕೆಯ ಮಹಾಪೌರರಾಗಿಯೂ ಆಯ್ಕೆಯಾಗಿ ಕಾರ್ಯನಿರ್ವಹಿಸಿದ್ದರು.

ಪರಾರಿಯಾದ ದುಷ್ಕರ್ಮಿಗಳು: 
ತೀವ್ರ ಗಾಯಗೊಂಡಿದ್ದ ರವಿಕುಮಾರ್‌ ಸ್ಥಳದಲ್ಲೇ ಕುಸಿಯುವ ಮಟ್ಟಕ್ಕೆ ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು ಕ್ಷಣಾರ್ಧದಲ್ಲಿ ಅಲ್ಲಿಂದ ಪರಾರಿಯಾಗಿ¨ªಾರೆ. ಘಟನೆ ನಡೆದ ವೇಳೆ ಟೀ ಅಂಗಡಿಯ ಮಾಲೀಕ ಮತ್ತು ಕೊಲೆಯಾಗಿರುವ ರವಿಕುಮಾರ್‌ ಮತ್ತು ಆತನ ಸ್ನೇಹಿತ ಬಿಟ್ಟರೆ ಬೇರೆ ಯಾರೂ ಸ್ಥಳದಲ್ಲಿ ಇರಲಿಲ್ಲ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.