ಪ್ರಕೃತಿ ವಿಕೋಪದ ಹಾನಿ ತಡೆಗೆ ಡಿಜಿಟಲ್‌ ಮ್ಯಾಪ್‌


Team Udayavani, Oct 4, 2018, 6:00 AM IST

natural-disaster.jpg

ಶಿವಮೊಗ್ಗ: ಪ್ರಾಕೃತಿಕ ವಿಕೋಪ ಉಂಟಾದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕಾರ್ಯ ಹಾಗೂ ಹಾನಿಯ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ “ಡಿಜಿಟಲ್‌ ಮ್ಯಾಪ್‌’ ಸಿದ್ಧವಾಗುತ್ತಿದೆ. ಸದ್ಯಕ್ಕೆ ಶಿವಮೊಗ್ಗ ಜಿಲ್ಲೆಯಲ್ಲಿ ಈ ಹೊಸ ಮ್ಯಾಪ್‌ ಸಿದ್ಧವಾಗುತ್ತಿದ್ದು, ಇಲ್ಲಿ ಯಶಸ್ವಿಯಾದರೆ ರಾಜ್ಯಾದ್ಯಂತ ಇದರ ವಿಸ್ತರಣೆ ಆಗಬಹುದು.

ಮೊದಲಿಗೆ ಅತಿ ಹೆಚ್ಚು ಮಳೆ ಬೀಳುವ ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನ ಡಿಜಿಟಲ್‌ ಮ್ಯಾಪ್‌ ತಯಾರಿಸಲು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಿ.ಸಿ.ತಮ್ಮಣ್ಣ ಸೂಚನೆ ನೀಡಿದ್ದು “ಇಂಟರ್‌ನ್ಯಾಷನಲ್‌ ರಿಸೋರ್ಸ್‌ ಡೆವಲಪ್‌ಮೆಂಟ್‌ ಸೆಂಟರ್‌’ ಎಂಬ ಎನ್‌ಜಿಒ ಇದರ ಉಸ್ತುವಾರಿ ವಹಿಸಿಕೊಂಡಿದೆ.

ಏನಿದು ಡಿಜಿಟಲ್‌ ಮ್ಯಾಪ್‌: ಈ ಮ್ಯಾಪ್‌ನಲ್ಲಿ ಪ್ರತಿ ಹಳ್ಳಿಗಳ ಪಕ್ಕಾ ಮಾಹಿತಿ ಇರಲಿದೆ. ಇಲ್ಲಿ ಪ್ರಕೃತಿ ವಿಕೋಪದಿಂದ ಹಾನಿಯಾಗಿರುವ ಪ್ರದೇಶವನ್ನು ಹಾನಿಯಾಗಿರುವ ಪ್ರಮಾಣದ ಆಧಾರದ ಮೇಲೆ ನಾನಾ ಬಣ್ಣಗಳಿಂದ ಗುರುತು ಮಾಡಲಾಗುತ್ತದೆ. ಈ ಪ್ರದೇಶಕ್ಕೆ ಯಾವ ರೀತಿಯ ಸಹಾಯ ಬೇಕು ಎಂಬುದನ್ನು ಈ ಮ್ಯಾಪ್‌ ನೋಡಿ ವಿಪತ್ತು ನಿರ್ವಹಣಾ ಇಲಾಖೆ ಅಥವಾ ಜಿಲ್ಲಾಡಳಿತ ಯೋಜನೆ ರೂಪಿಸುತ್ತದೆ. ಒಟ್ಟು 17 ಇಲಾಖೆಗಳು ಇದರಡಿಯಲ್ಲ ಕಾರ್ಯ ನಿರ್ವಹಿಸಲಿವೆ.

ಐದಾರು ಹಂತದಲ್ಲಿ ಮಾಹಿತಿ ಸಂಗ್ರಹ: ಮೊದಲನೇ ಹಂತದಲ್ಲಿ ಊರಿನ ಇತಿಹಾಸದ ಬಗ್ಗೆ ತಿಳಿಯಲಾಗುತ್ತದೆ. 2ನೇ ಹಂತದಲ್ಲಿ ಊರಿನ ಜನಸಂಖ್ಯೆ, ಜಾನುವಾರು ಹಾಗೂ ಸಂಸ್ಕೃತಿಯ ಮಾಹಿತಿ, 3ನೇ ಹಂತದಲ್ಲಿ ಅ ಧಿಕಾರಿ ವರ್ಗದ ಮೊಬೈಲ್‌ ಸಂಖ್ಯೆಗಳು ಇರಲಿವೆ. ಹಳ್ಳಿಯ ಗ್ರಾಪಂ ಸದಸ್ಯರು, ಪಿಡಿಒನಿಂದ ಹಿಡಿದು ತಾಲೂಕು, ಜಿಲ್ಲಾಮಟ್ಟದ ಅಧಿ ಕಾರಿಗಳ ನಂಬರ್‌ಗಳೆಲ್ಲ ಒಂದೇ ಕಡೆ ಸಿಗಲಿವೆ. 4ನೇ ಹಂತದಲ್ಲಿ ಸಂಪನ್ಮೂಲದ ಬಗ್ಗೆ ಲೆಕ್ಕ ಹಾಕಲಾಗುತ್ತದೆ. ಅಂದರೆ, ಒಂದು ತಾಲೂಕಿನಲ್ಲಿ ಎಷ್ಟು ಬುಲ್ಡೋಜರ್‌, ಜೆಸಿಬಿ ಇದೆ. ರಕ್ತನಿ ಧಿ ಕೇಂದ್ರ, ಆಸ್ಪತ್ರೆಗಳು ಎಷ್ಟಿವೆ? ಅಲ್ಲಿ ಎಷ್ಟು ಜನಕ್ಕೆ ಹಾಸಿಗೆ ಲಭ್ಯವಿದೆ. ಸರಕಾರಿ, ಖಾಸಗಿ ಆ್ಯಂಬುಲೆನ್ಸ್‌ ಎಷ್ಟಿವೆ. ಅದರ ವಾರಸುದಾರರು ಯಾರು? ಅವರ ವಿಳಾಸ, ನಂಬರ್‌, ಜತೆಗೆ ಇಲಾಖಾವಾರು ಮಾಹಿತಿ ಸಂಗ್ರಹಿಸಲಾಗುತ್ತದೆ.
ಒಟ್ಟು 17 ಇಲಾಖೆಗಳು: ಈ ಮ್ಯಾಪ್‌ನಲ್ಲಿ ಕಂದಾಯ, ಕೃಷಿ, ತೋಟಗಾರಿಕೆ, ಶಿಕ್ಷಣ, ಆರೋಗ್ಯ, ನೀರಾವರಿ, ಲೊಕೋಪಯೋಗಿ ಸೇರಿದಂತೆ 17 ಇಲಾಖೆಗಳ ಮಾಹಿತಿ ಸಂಗ್ರಹಿಸಲಾಗುತ್ತದೆ. ಆಯಾ ಇಲಾಖೆಯ ಅಧಿಕಾರಿಗಳು ಮ್ಯಾಪ್‌ ಸಿದ್ಧಪಡಿಸುವವರಿಗೆ ಸೂಕ್ತ ಮಾರ್ಗದರ್ಶನ ಮಾಡಲಿದ್ದಾರೆ. ಈ ಎಲ್ಲಾ ಮಾಹಿತಿಗಳನ್ನು ಕ್ರೋಢೀಕರಿಸಿ ಒಂದೇ ಮ್ಯಾಪ್‌ನಲ್ಲಿ ಎಲ್ಲ ಅಧಿಕಾರಿ, ಸಿಬ್ಬಂದಿಗೆ ಸಿಗುವಂತೆ ವ್ಯವಸ್ಥೆ ಮಾಡಲಾಗುತ್ತಿದೆ.

ಹೀಗೆ ಮಾಹಿತಿಗಳೆಲ್ಲ ಒಂದೇ ಕಡೆ ಸಿಕ್ಕಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದ ಸ್ಥಳದಲ್ಲಿ ತುರ್ತಾಗಿ ಕೈಗೊಳ್ಳಬೇಕಾದ ಕಾರ್ಯಗಳು, ಆ ಪ್ರದೇಶದಲ್ಲಿ ಅಗತ್ಯವಿರುವ ವಸ್ತುಗಳು, ಅಲ್ಲಿಯ ಜನರಿಗೆ ಬೇಕಾದ ಆಹಾರ, ಔಷಧಿ ಇತ್ಯಾದಿ ಎಲ್ಲವನ್ನೂ ಕ್ಷಣಾರ್ಧದಲ್ಲಿ ದೊರಕಿಸಲು ಸಾಧ್ಯವಾಗಲಿದೆ.

ಸರ್ವೇ ನಂಬರ್‌ ಆಧಾರದ ಮೇಲೆ ಹಾನಿಯನ್ನು ಗುರುತಿಸಲಾಗುತ್ತದೆ. 17 ಇಲಾಖೆಗಳ ಮಾಹಿತಿ ಆಧಾರದ ಮೇಲೆ ತಕ್ಷಣ ಪರಿಹಾರ ಕಾರ್ಯ ಶುರು ಮಾಡಲಾಗುತ್ತದೆ. ಅಲ್ಲಿ ಆಗಿದೆ, ಇಲ್ಲಿ ಆಗಿದೆ ಎನ್ನುವುದಕ್ಕಿಂತ ಇದೇ ಸರ್ವೇ ನಂಬರ್‌, ಇಷ್ಟೇ ಜನ, ದನ, ಆಸ್ತಿ, ಪಾಸ್ತಿ ಹಾನಿಯಾಗಿದೆ ಎಂದು ಹೇಳುವುದರಿಂದ ಯಾವ ರೀತಿ ಪರಿಹಾರ ಬೇಕು ಎಂಬುದು ತಕ್ಷಣ ತಿಳಿಯುತ್ತದೆ.
– ಸುಭಾಷ್‌ಕರ್‌ ರೆಡ್ಡಿ, ಟೀಂ ಲೀಡರ್‌, ಇಂಟರ್‌ನ್ಯಾಶನಲ್‌ ರಿಸೋರ್ಸ್‌ ಡೆವೆಲಪ್‌ಮೆಂಟ್‌ ಸೆಂಟರ್‌

ಕೊಡಗಿನಲ್ಲಿ ಸಂಭವಿಸಿದಂತಹ ಪ್ರಕೃತಿ ವಿಕೋಪ ಎಲ್ಲಿ ಬೇಕಾದರೂ ಸಂಭವಿಸಬಹುದು. ಇಂತಹ ಪ್ರಕೃತಿ ವಿಕೋಪಗಳನ್ನು ತಡೆಯವುದು ಸಾಧ್ಯವಿಲ್ಲ. ಮುಂಜಾಗ್ರತೆ ವಹಿಸಿದರೆ ಹೆಚ್ಚಿನ ಆಸ್ತಿಪಾಸ್ತಿ, ಪ್ರಾಣ ಹಾನಿಗಳನ್ನು ತಡೆಗಟ್ಟಬಹುದು. ಈ ನಿಟ್ಟಿನಲ್ಲಿ ಮ್ಯಾಪ್‌ ರೂಪಿಸಲು ಸೂಚಿಸಿರುವೆ.
– ಡಿ.ಸಿ. ತಮ್ಮಣ್ಣ, ಜಿಲ್ಲಾ ಉಸ್ತುವಾರಿ ಸಚಿವ

– ಶರತ್‌ ಭದ್ರಾವತಿ

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.