“ಪ್ರಕೃತಿ ಮೇಲೆ ಮಾನವನ ಹಸ್ತಕ್ಷೇಪ ನಿಲ್ಲಲಿ


Team Udayavani, Oct 4, 2018, 6:00 AM IST

natural-disaster-ss.jpg

ಪ್ರಕೃತಿಯ ಮೇಲೆ ಮಾನವನ ಹಸ್ತಕ್ಷೇಪ ಹೆಚ್ಚಿದಂತೆ ಪ್ರಕೃತಿ ವಿಕೋಪಗಳೂ ಹೆಚ್ಚುತ್ತಿವೆ ಎಂಬುದಕ್ಕೆ ರಾಜ್ಯದಲ್ಲಿ ಇದೀಗ ಉದ್ಬಸಿರುವ ಅತಿವೃಷ್ಠಿ,ಅನಾವೃಷ್ಠಿಗಳೇ ಉದಾಹರಣೆ.ರಾಜ್ಯದ 45 ತಾಲೂಕುಗಳು ಪ್ರವಾಹ ಪೀಡಿತ ಎಂದಾದರೆ,89 ತಾಲೂಕುಗಳು ಬರ ಪೀಡಿತ ಎಂದು ಘೋಷಣೆಯಾಗಿವೆ. ಹವಾಮಾನ ವೈಪರೀತ್ಯದಿಂದ ಉಂಟಾಗಿರುವ ಈ ಪರಿಸ್ಥಿತಿ ಮರುಕಳಿಸದಂತೆ ನೋಡಿಕೊಳ್ಳಲು ಸರ್ಕಾರ ಕೂಡಲೇ ಎಚ್ಚೆತ್ತು ಪರಿಸರ ಸಂರಕ್ಷಣೆ ಮತ್ತು ಬೆಳೆ ಪದಟಛಿತಿಯಲ್ಲಿ ಬದಲಾವಣೆಗೆ ಕ್ರಮ ಕೈಗೊಳ್ಳಬೇಕು ಎಂಬ ಅಭಿಪ್ರಾಯವನ್ನು ತಜ್ಞರು ವ್ಯಕ್ತಪಡಿಸಿದ್ದಾರೆ.

ಹವಾಮಾನದಲ್ಲಿ ಇಂಗಾಲಾಮ್ಲ ಏರಿಕೆಯಾಗಿದ್ದರಿಂದ ಉಷ್ಣಾಂಶ ಹೆಚ್ಚುತ್ತದೆ.ಇಂಗಾಲಾಮ್ಲ ಹೆಚ್ಚಲು ಪ್ರಮುಖ ಕಾರಣ ಪೆಟ್ರೋಲ್‌, ಡೀಸೆಲ್‌ ವಾಹನಗಳ ಬಳಕೆಯಲ್ಲಿ ಹೆಚ್ಚಳ. ಹವಾ ನಿಯಂತ್ರಣ ವ್ಯವಸ್ಥೆ, ರೆμÅಜರೇಟರ್‌ಗಳ ಬಳಕೆಯಲ್ಲಿ ಏರಿಕೆ, ನಗರೀಕರಣ, ಬೃಹತ್‌ ಕಟ್ಟಡಗಳು ಒಂದು ರೀತಿಯಲ್ಲಿ ಕಾರಣವಾದರೆ,ಅತಿಯಾದ ನೀರಿನ ಬೇಡಿಕೆ ಇರುವ ಬೆಳೆಗಳನ್ನು ಹೆಚ್ಚಾಗಿ ತೆಗೆಯುತ್ತಿರುವುದು ಕೂಡ ಕಾರಣ.

ಇದಕ್ಕೆ ಮೊದಲ ಪರಿಹಾರ ವಾತಾವರಣದಲ್ಲಿ ಇಂಗಾಲಾಮ್ಲದ ದಟ್ಟಣೆ ತಗ್ಗಿಸುವುದು. ಅದಕ್ಕಾಗಿ ವಾಹನ, ಎಸಿ, ರೆಫ್ರಿಜರೇಟರ್‌ ಬಳಕೆ ಕಡಿಮೆ ಮಾಡಬೇಕು. ಮರಗಳನ್ನು ಹೆಚ್ಚಾಗಿ ಬೆಳೆಸಬೇಕು. ಹೆಚ್ಚು ನೀರಿನ ಬೇಡಿಕೆ ಇರುವ ಬೆಳೆಗಳನ್ನು ಕೈಬಿಟ್ಟು ಕಡಿಮೆ ನೀರು ಬಳಸುವ ಬೆಳೆಗಳಿಗೆ ಆದ್ಯತೆ ನೀಡಬೇಕು.ಆಗ ಇಂಗಾಲಾಮ್ಲದ ದಟ್ಟಣೆ ಕಡಿಮೆಯಾಗಿ ಪರಿಸ್ಥಿತಿ ಸಹಜ ಸ್ಥಿತಿಗೆ ತಲುಪುತ್ತದೆ. ಇದರ ಜತೆಗೆ ಮಣ್ಣಿನ ಫ‌ಲವತ್ತತೆ ಹೆಚ್ಚಿಸುವ ಸಾವಯವ ಕೃಷಿ,ಕಡಿಮೆ ನೀರು ಬೇಕಾಗುವ ಮತ್ತು ಹೆಚ್ಚು ಪೌಷ್ಠಿಕಾಂಶ ಹೊಂದಿರುವ ಸಿರಿಧಾನ್ಯ ಬೆಳೆಯಬೇಕು. ಆಗ ನೀರಿನ ಬಳಕೆ ಕಡಿಮೆಯಾಗುವುದರೊಂದಿಗೆ ವಾತಾವರಣದಲ್ಲಿ ಇಂಗಾಲಾಮ್ಲದ ದಟ್ಟಣೆಯೂ ಇಳಿಮುಖವಾಗುತ್ತದೆ. ಇದರ ಪರಿಣಾಮ ಉಷ್ಣಾಂಶ ಕಡಿಮೆಯಾಗಿ ಮಳೆ ಸರಿಯಾದ ಸಮಯಕ್ಕೆ ಬೀಳುತ್ತದೆ.

ಕೃಷಿ ಚಟುವಟಿಕೆಗಳಿಗೆ ಬೇಕಾಬಿಟ್ಟಿ ನೀರು ಬಳಕೆ ಮಾಡುವುದೇ ಅಂತರ್ಜಲ ಮಟ್ಟದಲ್ಲಿಏರುಪೇರಾಗಲು ಕಾರಣ. ಇದನ್ನು ತಪ್ಪಿಸುವ ಉದ್ದೇಶದಿಂದ ರಾಜ್ಯದಲ್ಲಿ ಭೂವಿಜ್ಞಾನಿಗಳು, ಹವಾಮಾನ ತಜ್ಞರು ಸೇರಿ ಮುಂದಿನ 100 ವರ್ಷದಲ್ಲಿ ಬರಬಹುದಾದ ಮಳೆ ಮತ್ತು ಅದಕ್ಕೆ ತಕ್ಕಂತೆ ಹೇಗೆ ಬೆಳೆ ಬೆಳೆಯಬೇಕು ಎಂಬ ಬಗ್ಗೆ ಜಿಲ್ಲಾವಾರು ಮಾಹಿತಿಯನ್ನೊಳಗೊಂಡ ವರದಿಯನ್ನು ಸರ್ಕಾರಕ್ಕೆ ನೀಡಿದ್ದೇವೆ. ಅದರಂತೆ ಬೆಳೆ ಪದಟಛಿತಿಯಲ್ಲಿ ಬದಲಾವಣೆ ತರಬೇಕು. 
– ಎಂ.ಬಿ.ರಾಜೇಗೌಡ, ಕೃಷಿ ಹವಾಮಾನ ವಿಜ್ಞಾನಿ

ಇದು ಅಭಿವೃದ್ಧಿ ಯುಗ. ಹೀಗಾಗಿ ಅಭಿವೃದ್ಧಿ ಕೆಲಸಗಳನ್ನು ಕಡಿಮೆ ಮಾಡಲು ಸಾಧ್ಯವಿಲ್ಲ. ಹೀಗಿರುವಾಗ ಅಭಿವೃದ್ಧಿ ಜತೆಗೆ ಭವಿಷ್ಯದಲ್ಲಿ ಇದು ಪ್ರಕೃತಿಯ ಮೇಲೆ ದುಷ್ಪರಿಣಾಮ ಬೀರದಂತೆ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಗಮನ ಹರಿಸುವ ಅಗತ್ಯವಿದೆ. ಹವಾಮಾನ ಬದಲಾವಣೆ ಎಂಬುದು ಜಾಗತಿಕ ವಿದ್ಯಮಾನ. 

ಎಲ್ಲೋ ಪೆಸಿಫಿಕ್‌ ಮಹಾಸಾಗರ, ಹಿಂದೂ ಮಹಾಸಾಗರ ಅಥವಾ ಅರಬ್ಬಿ ಸಮುದ್ರದಲ್ಲಿ ಆಗುವ ಬದಲಾವಣೆಗಳು ರಾಜ್ಯ ಸೇರಿದಂತೆ ದೇಶದ ಹವಾಮಾನ ಏರುಪೇರಿಗೆ ಕಾರಣವಾಗುತ್ತದೆ.

ಈ ಏರುಪೇರುಗಳನ್ನು ಯಾವ ರೀತಿ ತಗ್ಗಿಸಬೇಕು? ಹವಾಮಾನದಲ್ಲಿ ಯಾವ ರೀತಿಯ ಬದಲಾವಣೆಗಳು ಆಗುತ್ತವೆ? ಹೆಚ್ಚು ಮಳೆಯಾದರೆ ಆ ಸಂದರ್ಭದಲ್ಲಿ ಅಪಾಯವಾಗದಂತೆ ಏನೇನು ಮಾಡಬೇಕು? ಮಳೆ ಕಡಿಮೆಯಾದಾಗ ಯಾವ ರೀತಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಬೇಕು? ಲಭ್ಯವಿರುವ ನೀರನ್ನು ಯಾವ ರೀತಿ ಬದಲಿಸಿಕೊಳ್ಳಬೇಕು? ಈ ನಿಟ್ಟಿನಲ್ಲಿ ಬೆಳೆ ಪದ್ಧತಿಯಲ್ಲಿ ಏನೆಲ್ಲಾ ಮಾರ್ಪಾಡುಗಳನ್ನು ಮಾಡಿಕೊಳ್ಳಬೇಕು ಎಂಬ ಬಗ್ಗೆ ಗಮನಹರಿಸಬೇಕು. ಆಯಾ ಸಂದರ್ಭಕ್ಕೆ ತಕ್ಕಂತೆ ಬದಲಾವಣೆಗಳನ್ನು ಮಾಡಿಕೊಳ್ಳಬೇಕು.
– ಡಾ.ಜಿ.ಎಸ್‌.ಶ್ರೀನಿವಾಸ ರೆಡ್ಡಿ,
ಹವಾಮಾನ ತಜ್ಞ

ಕೇರಳ, ಕೊಡಗು ಸೇರಿದಂತೆ ಮಲೆನಾಡಿನಲ್ಲಿ ಉಂಟಾದ ಪ್ರವಾಹಕ್ಕೆ ಪ್ರಮುಖ ಕಾರಣ ಆ ಭಾಗದಲ್ಲಿ ಅರಣ್ಯ ನಾಶವಾಗಿರುವುದು. ಸಮೀಕ್ಷೆ ಪ್ರಕಾರ ಆ ಭಾಗದಲ್ಲಿ ಶೇ. 25ರಿಂದ 29ರಷ್ಟು ಅರಣ್ಯ ನಾಶವಾಗಿದೆ ಅಥವಾ ಮಾನವನ ಹಸ್ತಕ್ಷೇಪಕ್ಕೆ ಒಳಗಾಗಿದೆ. ಇದರ ಪರಿಣಾಮ ಮಳೆ ಬಂದಾಗ ಇಂತಹ ಪ್ರದೇಶದಲ್ಲಿ ಪ್ರವಾಹ ಉಂಟಾಗುತ್ತದೆ. ಸಾಮಾನ್ಯವಾಗಿ ಮಲೆನಾಡಿನಲ್ಲಿ ವರ್ಷದ 12 ತಿಂಗಳೂ ನೀರು ಲಭ್ಯವಿರಬೇಕು.

ಆದರೆ, ಮಾನವನ ಹಸ್ತಕ್ಷೇಪಕ್ಕೆ ಒಳಗಾದ ಪ್ರದೇಶದಲ್ಲಿ 6ರಿಂದ 8 ತಿಂಗಳು ಮಾತ್ರ ನೀರು ಸಿಗುತ್ತದೆ. ಅತಿ ಹೆಚ್ಚು ಅರಣ್ಯ ನಾಶವಾದ ಪ್ರದೇಶಗಳಲ್ಲಿ ನಾಲ್ಕು ತಿಂಗಳು ಮಾತ್ರ ನೀರು ಲಭ್ಯವಾಗುತ್ತದೆ. ಅಷ್ಟೇ ಅಲ್ಲ, ಮಳೆ ಬಂದಾಗ ಈ ನೀರು ಪ್ರವಾಹ ರೂಪದಲ್ಲಿ ಹರಿಯುತ್ತದೆಯೇ ಹೊರತು ಭೂಮಿಗೆ ಇಂಗುವುದಿಲ್ಲ. 

ಇದು ಮಲೆನಾಡಿನ ಸಮಸ್ಯೆಯಾದರೆ ಬಯಲು ಸೀಮೆ ಭಾಗಗಳಲ್ಲಿ ಮಳೆ ನೀರು ಸಂಗ್ರಹವಾಗುವ ಕೆರೆ, ಕುಂಟೆಗಳು ಒತ್ತುವರಿ ಅಥವಾ ಹೂಳಿನಿಂದ ತುಂಬಿ ನೀರು ಸಂಗ್ರಹಣಾ ಸಾಮರ್ಥ್ಯ ಕಳೆದುಕೊಂಡಿವೆ. ಇದರ ಪರಿಣಾಮ ಮಳೆ ಬಂದಾಗ ನೀರು ಹರಿದುಹೋಗುತ್ತದೆಯೇ ಹೊರತು ಸಂಗ್ರಹವಾಗುವುದಿಲ್ಲ. ಇದರಿಂದ ಅಂತರ್ಜಲ ಬಳಕೆ ಅನಿವಾರ್ಯವಾಗಿದೆ.ಮತ್ತೂಂದೆಡೆ ನೀರು ಇಂಗದ ಕಾರಣ ಅಂತರ್ಜಲ ಮಟ್ಟದಲ್ಲಿ ಏರುಪೇರಾಗುತ್ತಿದೆ. ಇನ್ನೊಂದೆಡೆ ಮಳೆ ಪ್ರಮಾಣಕ್ಕಿಂತ ಮಳೆ ಬೀಳುವ ಅವಧಿ ಕಡಿಮೆಯಾಗಿರುವುದು ಇಂದಿನ ಬರ ಪರಿಸ್ಥಿತಿಗೆ ಪ್ರಮುಖ ಕಾರಣ. ಹಿಂದೆಲ್ಲಾ ವಾರಗಟ್ಟಲೆ ಮಳೆ ಬರುತ್ತಿತ್ತು. 

ಆಗ ಸಹಜವಾಗಿಯೇ ನೀರು ಮಣ್ಣಿನಲ್ಲಿ ಇಂಗುತ್ತಿತ್ತು.ಆದರೆ, ಕಡಿಮೆ ಅವಧಿಯಲ್ಲಿ ಹೆಚ್ಚು ಮಳೆ ಬೀಳುವುದರಿಂದ ನೀರು ಇಂಗಲು ಅವಕಾಶವಾಗದೆ ಹರಿದು ಹೋಗಿ ಸಮುದ್ರ ಸೇರುತ್ತದೆ.ಅದರ ಬದಲು ನೀರು ಇಂಗಲು ಅನುಕೂಲ ವಾಗುವಂತೆ ಕೆರೆ, ಕುಂಟೆಗಳ ಹೂಳೆತ್ತಬೇಕು. ಜಲಾನಯನ ಕ್ಷೇತ್ರಗಳ ಸಂರಕ್ಷಣೆಗೆ ಗಮನಹರಿಸಬೇಕು. ಇದರಿಂದ ವಾತಾವರಣ ಸಹಜ ಸ್ಥಿತಿಗೆ ಮರಳುತ್ತದೆ. ವಾತಾವರಣ ಸಹಜ ಸ್ಥಿತಿಗೆ ತಲುಪಿದರೆ ಮಳೆ ಪ್ರಮಾಣ ಮತ್ತು ಬೀಳುವ ಅವಧಿ ಹೆಚ್ಚಾಗಿ ಪ್ರವಾಹ ಮತ್ತು ಬರ ಎರಡೂ ಸಮಸ್ಯೆಗಳು ಬಗೆಹರಿಯುತ್ತವೆ.
– ಟಿ.ವಿ.ರಾಮಚಂದ್ರ, ಐಐಎಸ್‌ಸಿ ವಿಜ್ಞಾನಿ

– ಪ್ರದೀಪ್‌ಕುಮಾರ್‌ ಎಂ.

ಟಾಪ್ ನ್ಯೂಸ್

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.