ಬೆಟಗೇರಿ ವ್ಯಾಪ್ತಿಯಲ್ಲಿ ಮತ್ತೆರಡು ಜಿಂಕೆಗಳ ಸಾವು
Team Udayavani, Oct 7, 2018, 6:10 AM IST
ಕೊಪ್ಪಳ: ಜಿಲ್ಲೆಯಲ್ಲಿ ಜಿಂಕೆಗಳ ಸಾವಿನ ಸರಣಿ ಮುಂದುವರಿದಿದ್ದು, ಶನಿವಾರ ಮತ್ತೆ ಎರಡು ಜಿಂಕೆಗಳ ಮೃತದೇಹವು ತಾಲೂಕಿನ ಬೆಟಗೇರಿ ವ್ಯಾಪ್ತಿಯ ರೈತರ ಜಮೀನಿನಲ್ಲಿ ಪತ್ತೆಯಾಗಿವೆ.
ಕಳೆದ ವಾರ 5 ಜಿಂಕೆಗಳು ಮೃತಪಟ್ಟಿದ್ದರೆ, ಶನಿವಾರ ಮತ್ತೆ 2 ಜಿಂಕೆಗಳು ಅಸುನೀಗಿವೆ. ಸತ್ತ ಜಿಂಕೆಗಳ ದೇಹದ ಅಂಗಾಂಗವನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಶುಕ್ರವಾರ ತಡರಾತ್ರಿವರೆಗೂ ಅಳವಂಡಿ,ಬೆಟಗೇರಿ ವ್ಯಾಪ್ತಿಯಲ್ಲಿ ಸುತ್ತಾಡಿದ್ದಾರೆ. ಸತ್ತ ಜಿಂಕೆಗಳ ಅಂಗಾಂಗಗಳನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ರವಾನಿಸಿದ್ದೇವೆ. ಬೆಳೆಯ ಔಷಧಿ ತಿಂದು ಸತ್ತಿವೆಯೇ ಎನ್ನುವ ಪ್ರಶ್ನೆಯೂ ನಮ್ಮಲ್ಲಿ ಮೂಡಿದೆ. ವರದಿ ಬಂದ ಬಳಿಕ ಎಲ್ಲವೂ ಗೊತ್ತಾಗಲಿದೆ. ಜಿಂಕೆ ಸಾವಿನ ಬಗ್ಗೆ ಎಸ್ಪಿ ಗಮನಕ್ಕೂ ತಂದಿದ್ದೇನೆ. ಕೃಷಿ ಇಲಾಖೆ ಅಧಿಕಾರಿಗಳ ಜೊತೆಯೂ ಚರ್ಚಿಸಲಿದ್ದೇನೆ ಎಂದು ಕೊಪ್ಪಳ ಡಿಎಫ್ಒ ಯಶಪಾಲ್
ಕ್ಷೀರಸಾಗರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ