ಡೀಸೆಲ್‌ ಬ್ಯಾರೆಲ್‌ ಸ್ಫೋಟ, 3 ಅಧಿಕಾರಿಗಳಿಗೆ ಗಾಯ


Team Udayavani, Oct 7, 2018, 6:15 AM IST

illegal-stone-mining.jpg

ಕೊಪ್ಪಳ: ಯಲಬುರ್ಗಾ ತಾಲೂಕಿನ ಲಿಂಗನಬಂಡಿ ಬಳಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಕುರಿತು ದೂರು ಬಂದ
ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಪರಿಶೀಲನೆಗೆ ತೆರಳಿದ್ದ ವೇಳೆ ಡೀಸೆಲ್‌ ಬ್ಯಾರೆಲ್‌ ಸ್ಫೋಟಗೊಂಡಿದೆ.

ಘಟನೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಇಬ್ಬರು ಅಧಿಕಾರಿಗಳು,ಚಾಲಕನಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಸಾಗಿಸಲಾಗಿದೆ.

ಇಲಾಖೆಯ ಅಧಿಕಾರಿಗಳಾದ ದಿನೇಶಗೌಡ, ನವೀನ ಕುಮಾರ ಸೇರಿ ವಾಹನ ಚಾಲಕ ಮೆಹಬೂಬ್‌ ಅವರಿಗೆ ಮುಖ, ಕೈ, ಕಾಲಿಗೆ ಗಂಭೀರ ಗಾಯಗಳಾಗಿವೆ. ಯಲಬುರ್ಗಾ ತಾಲೂಕಿನ ಲಿಂಗನಬಂಡಿ ಬಳಿ ಹಲವು ವರ್ಷಗಳಿಂದ ಮಿತಿ ಮೀರಿದ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಈ ಭಾಗದ ನೂರಾರು ರೈತರು ಗಣಿಗಾರಿಕೆಗೆ ಬೇಸತ್ತು ಇಲಾಖೆಗೆ ದೂರು ನೀಡಿದ್ದರು. ಈ ದೂರಿನನ್ವಯ ಸ್ಥಳಕ್ಕೆ ಭೇಟಿ ನೀಡಿದ್ದ ಅಧಿಕಾರಿಗಳು ವಿವಿಧೆಡೆ ಅಕ್ರಮ ಕಲ್ಲು ಗಣಿಗಾರಿಕೆಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಬಿಸಿಲಿನ ತಾಪಕ್ಕೆ ಡೀಸೆಲ್‌ ಬ್ಯಾರೆಲ್‌ ಸ್ಫೋಟಗೊಂಡಿದೆ ಎನ್ನಲಾಗಿದೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಾದ ದಿನೇಶಗೌಡ, ನವೀನ ಕುಮಾರ ಅವರ ಕೈ, ಕಾಲು, ಮುಖದ ಚರ್ಮ ಸುಟ್ಟು ಹೋಗಿದೆ. ವಾಹನ ಚಾಲಕ ಮೆಹಬೂಬ್‌ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ವಿಜ್ಞಾನಿ ಆರ್‌.ಎಸ್‌. ರಾವಳ್‌ ತಿಳಿಸಿದರು. ಅಧಿಕಾರಿಗಳು ಕಲ್ಲು ಕ್ವಾರಿಯತ್ತ ಪರಿಶೀಲನೆಗೆ ಬಂದಿದ್ದಾರೆ ಎನ್ನುವುದನ್ನು ಅರಿತ ದಂಧೆಕೋರರು ಸ್ಥಳದಲ್ಲಿ ಕಲ್ಲು ಒಡೆಯುವ ಮದ್ದು ಬಳಿಸಿ ಸ್ಫೋಟಗೊಳಿಸಿದ್ದಾರೆಂಬ ಶಂಕೆ ವ್ಯಕ್ತವಾಗಿದೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಲಿಂಗನಬಂಡಿ ಬಳಿ ಕಲ್ಲು ಗಣಿಗಾರಿಕೆ ಪರಿಶೀಲನೆಗೆ ತೆರಳಿದ್ದ ವೇಳೆ ಡೀಸೆಲ್‌
ಬ್ಯಾರಲ್‌ ಸ್ಫೋಟವಾಗಿರುವ ಬಗ್ಗೆ ಮಾಹಿತಿಯಿದೆ. ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರು ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದರೆ ನಮ್ಮವರು ಅವರೊಟ್ಟಿಗೆ ತೆರಳುತ್ತಿದ್ದರು.
– ರೇಣುಕಾ ಸುಕುಮಾರ,
ಕೊಪ್ಪಳ ಎಸ್‌ಪಿ

ಟಾಪ್ ನ್ಯೂಸ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.