ದುರ್ಗದಲ್ಲಿ ಜ್ವಾಲಾಮುಖೀ?
Team Udayavani, Oct 7, 2018, 6:00 AM IST
ಚಳ್ಳಕೆರೆ (ಚಿತ್ರದುರ್ಗ): ಸತತ ಬರಕ್ಕೆ ತುತ್ತಾಗುತ್ತಿರುವ ತಾಲೂಕಿನ ಜಮೀನೊಂದರ ಭೂಮಿಯ ಕೆಳಭಾಗದಿಂದ ಅಗ್ನಿ ಜ್ವಾಲೆ ಕಾಣಿಸಿಕೊಂಡು “ಜ್ವಾಲಾಮುಖೀ’ಯ ಆತಂಕ ಸೃಷ್ಟಿಸಿದೆ.
ಇಲ್ಲಿನ ನಾಯಕನಹಟ್ಟಿ ಹೋಬಳಿಯ ಮನಮೈನಹಟ್ಟಿ ಗ್ರಾಮದ ತಿಪ್ಪೇಸ್ವಾಮಿ ಎಂಬವರಿಗೆ ಸೇರಿದ ಜಮೀನಿನಲ್ಲಿ ಕಳೆದ ಮಂಗಳವಾರ (ಅ. 2) ಸಂಜೆ 4 ಗಂಟೆ ಸುಮಾರಿಗೆ ಭೂಮಿಯ ಒಳಭಾಗದಿಂದ ಬೆಂಕಿ ಹೊರ ಹೊಮ್ಮಿದೆ. ಕೆಲ ನಿಮಿಷಗಳ ನಂತರ ಈ ಜ್ವಾಲೆ, ಆರಿದ ಬಳಿಕ ಜ್ವಾಲಾಮುಖೀಯಿಂದ ಉಂಟಾಗುವ ಲಾವಾರಸ ಮಾದರಿ ಕಂಡು ಬಂದಿತ್ತು. ಹೀಗಾಗಿ ಸಣ್ಣ ಪ್ರಮಾಣ ಜ್ವಾಲಾಮುಖೀ ಶಂಕೆ ವ್ಯಕ್ತವಾಗಿದೆ. ಬೆಂಕಿ ಜ್ವಾಲೆ ಕಂಡು ಬಂದ ಸ್ಥಳದ ಪಕ್ಕದಲ್ಲೇ ವಿದ್ಯುತ್ ಕಂಬ ಇದ್ದು, ಬೆಂಕಿಯ ಕಾವಿಗೆ ಕಂಬವೂ ಕರಗಿದಂತಾಗಿ ಬಾಗಿಕೊಂಡಿದೆ. ಬೆಸ್ಕಾಂ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಕಂಬ ಬದಲಿಸಿದ್ದಾರೆ.
ಜಮೀನಿನ ಮಾಲೀಕ ತಿಪ್ಪೇಸ್ವಾಮಿ ಪೊಲೀಸರಿಗೆ ವಿಷಯ ತಿಳಿಸಿದ್ದು, ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಜ್ವಾಲೆಯಿಂದ ಕರಗಿದ ವಿದ್ಯುತ್ ಕಂಬದ ತುಂಡನ್ನು ಭೂಗರ್ಭ ಇಲಾಖೆ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ವರದಿ ಇನ್ನಷ್ಟೇ ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ