ಬಿಜೆಪಿಯಿಂದ ಸಮರ್ಥ ಅಭ್ಯರ್ಥಿಗಳಿಗೆ ಶೋಧ
Team Udayavani, Oct 8, 2018, 6:35 AM IST
ಬೆಂಗಳೂರು: ಅನಿರೀಕ್ಷಿತವಾಗಿ ಎದುರಾಗಿರುವ ಲೋಕಸಭಾ ಕ್ಷೇತ್ರಗಳ ಉಪಚುನಾವಣೆ ಹಾಗೂ ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿ, ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿದೆ.
ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗೆಗಿನ ಗೊಂದಲ ನಿವಾರಣೆಯಾಗಿದ್ದು, ಅಭ್ಯರ್ಥಿಯ ಘೋಷಣೆಯಾಗಿದೆ. ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಬಿ.ಶ್ರೀರಾಮುಲು ಸೇರಿ ಸ್ಥಳೀಯ ಮುಖಂಡರು ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆಸುತ್ತಿದ್ದಾರೆ. ಮಾಜಿ ಸಂಸದರಾದ ಸಣ್ಣ ಫಕೀರಪ್ಪ, ಜೆ.ಶಾಂತಾ ಹಾಗೂ ನಿವೃತ್ತ ನ್ಯಾಯಾಧೀಶ ಎನ್.ವೈ. ಹನುಮಂತಪ್ಪ ಆಕಾಂಕ್ಷಿಗಳೆನಿಸಿದ್ದಾರೆ. ಇದೀಗ ಹನುಮಂತಪ್ಪ ಅವರ ಪುತ್ರನ ಹೆಸರು ಮುಂಚೂಣಿಗೆ ಬಂದಿದ್ದು, ಅವರನ್ನು ಕಣಕ್ಕಿಳಿಸುವ ಬಗ್ಗೆ ಹಿರಿಯ ನಾಯಕರು ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರ ಉಪಚುನಾ ವಣೆಗೆ ಸಂಬಂಧಪಟ್ಟಂತೆ ಸ್ಥಳೀಯ ಮುಖಂಡರೊಂದಿಗೂ ಚರ್ಚಿಸಿ, ವಸ್ತುಸ್ಥಿತಿ ಅವಲೋಕಿಸಿ, ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಹಿರಿಯ ನಾಯಕರು ನಿರ್ಧರಿಸಿದ್ದಾರೆ.
ಈ ಮಧ್ಯೆ, ರಾಮನಗರ ಹಾಗೂ ಜಮಖಂಡಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೂ ಅಭ್ಯರ್ಥಿಗಳ ಆಯ್ಕೆಗೆ ಚರ್ಚೆ
ಶುರುವಾಗಿದೆ. ನಿರೀಕ್ಷಿತ ಪ್ರಮಾಣದಲ್ಲಿ ಸಂಘಟನೆಯಿಲ್ಲದ ರಾಮನಗರದಲ್ಲಿ ಪಕ್ಷ ಬಲವರ್ಧನೆಗೆ ಗಮನ ನೀಡಿರುವ ಬಿಜೆಪಿ,
ವಿಧಾನ ಪರಿಷತ್ ಸದಸ್ಯ ಕಾಂಗ್ರೆಸ್ನ ಸಿ.ಎಂ.ಲಿಂಗಪ್ಪ ಅವರ ಪುತ್ರನನ್ನು ಸೆಳೆಯಲು ಕಸರತ್ತು ನಡೆಸಿದೆ. ಜಮಖಂಡಿ ಕ್ಷೇತ್ರದ ಉಪಚುನಾವಣೆಗೂ ಸಮರ್ಥ ಅಭ್ಯರ್ಥಿ ಆಯ್ಕೆ ಲೆಕ್ಕಾಚಾರದಲ್ಲಿ ಮುಖಂಡರು ನಿರತರಾಗಿದ್ದಾರೆ. ಸೋಮವಾರ ಇಲ್ಲವೇ ಮಂಗಳವಾರ ಹಿರಿಯ ನಾಯಕರು ಸಭೆ ಸೇರಿ ಅಭ್ಯರ್ಥಿಗಳ ಆಯ್ಕೆ ಜತೆಗೆ ಚುನಾವಣೆ ಗೆಲ್ಲಲು ಅನುಸರಿಸಬೇಕಾದ ರಣತಂತ್ರದ ಬಗ್ಗೆಯೂ ಮಹತ್ವದ ಚರ್ಚೆ ನಡೆಸಲಿದ್ದಾರೆ. ಜತೆಗೆ ಉಪಚುನಾವಣೆ ನಡೆಯುತ್ತಿರುವ ಕ್ಷೇತ್ರಗಳ ಉಸ್ತುವಾರಿ ಹಂಚಿಕೆ ಬಗ್ಗೆಯೂ ನಿರ್ಧಾರವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ
Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ
Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ