ಶಬರಿಮಲೆ ವಿಚಾರವಾಗಿ ಕೇಂದ್ರ ಸುಗ್ರೀವಾಜ್ಞೆ ಜಾರಿಗೊಳಿಸಲಿ
Team Udayavani, Oct 8, 2018, 6:05 AM IST
ದಾವಣಗೆರೆ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಸಂಪ್ರದಾಯ, ಧಾರ್ಮಿಕ-ವಿಧಿ ವಿಧಾನಗಳ ಆಚರಣೆಗೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ತರಬೇಕೆಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ 1,400 ವರ್ಷಗಳ ಹಿಂದಿನ ಸಂಪ್ರದಾಯ, ಧಾರ್ಮಿಕ ವಿಧಿ-ವಿಧಾನಕ್ಕೆ ಧಕ್ಕೆ ಆಗಿದೆ. ಹಾಗಾಗಿ, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ, ಸಂಸತ್ನಲ್ಲಿ ಚರ್ಚಿಸಿ, ಅಯ್ಯಪ್ಪಸ್ವಾಮಿ ದೇವಸ್ಥಾನದ ಸಂಪ್ರದಾಯ, ಧಾರ್ಮಿಕ-ವಿಧಿ ವಿಧಾನಗಳ ಆಚರಣೆಗೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಸುಗೀÅವಾಜ್ಞೆ ತರಬೇಕು ಎಂದರು.
ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಒಪ್ಪತಕ್ಕದ್ದಲ್ಲ. ಸುಪ್ರೀಂಕೋರ್ಟ್ ತನ್ನ ಆದೇಶವನ್ನು ಪುನರ್ ಪರಿಶೀಲನೆ ನಡೆಸಬೇಕು ಎಂಬುದು ಅಸಂಖ್ಯಾತರ ಅಭಿಪ್ರಾಯವಾಗಿದೆ. ಬಾಬಾ ಬುಡನ್ಗಿರಿ ದತ್ತ ಪೀಠಕ್ಕೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನಂತೆ ಧರ್ಮಾಚಾರಿಗಳು, ಪಂಡಿತರೇ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಂತೆ ತೀರ್ಪು ನೀಡಬಹುದಿತ್ತು. ಧಾರ್ಮಿಕ ವಿಧಿ-ವಿಧಾನ ವಿಚಾರದಲ್ಲಿ ಸಮಾನತೆಯನ್ನು ಬಯಸುವ ನ್ಯಾಯಾಲಯಕ್ಕೆ ಎಲ್ಲಾ ರೀತಿಯ ಅಧಿಕಾರ ಇರುವಾಗ, ಸಮಾನ ನಾಗರಿಕ ಹಕ್ಕು ಕಾನೂನು ಜಾರಿಗೆ ತರುವುದಿಲ್ಲವೇಕೆ. ಒಂದೇ ಸಂವಿಧಾನದಲ್ಲಿ ಹಿಂದೂ, ಇತರ ಧರ್ಮಗಳ ವಿಚಾರ ಬೇರೆ, ಬೇರೆ ಏಕೆ ಎಂದು ಪ್ರಶ್ನಿಸಿದರು.
ಹಿಂದೂ ಧರ್ಮದಲ್ಲಿ ಮಹಿಳೆಯರಿಗೆ ಸಮಾನತೆ ನೀಡಲಾಗಿದೆ. ಅನೇಕ ಕಡೆ ಮಹಿಳಾ ಅರ್ಚಕರಿದ್ದಾರೆ. ಪೀಠಾಧಿಪತಿಗಳು ಸಹ ಇದ್ದಾರೆ. ಹಿಂದೂ ಧರ್ಮದಂತೆ ಜಗತ್ತಿನ ಯಾವ ಧರ್ಮವೂ ಮಹಿಳೆಯರಿಗೆ ಸಮಾನತೆ, ಸ್ಥಾನಮಾನ ನೀಡಿದ ಉದಾಹರಣೆಯೇ ಇಲ್ಲ. ಕೇರಳದಲ್ಲೇ ಮೂರು ದೇವಾಲಯಗಳಲ್ಲಿ ಪುರುಷರಿಗೆ ಪ್ರವೇಶವೇ ಇಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ