ಗುಂಡ್ಲು ಪೇಟೆಯಲ್ಲಿ ಕೇರಳದ ತ್ಯಾಜ್ಯ


Team Udayavani, Oct 9, 2018, 6:25 AM IST

gundlupet.jpg

ಗುಂಡ್ಲುಪೇಟೆ: ಕೇರಳ ರಾಜ್ಯದಿಂದ ಕರ್ನಾಟಕದ ಮೂಲೆ ಹೊಳೆ, ಮದ್ದೂರು ಅರಣ್ಯ ತನಿಖಾ ಠಾಣೆಯನ್ನು ದಾಟಿ ತರಲಾದ ಕೇರಳದ ತ್ಯಾಜ್ಯ ವಿಲೇವಾರಿ ಪ್ರಕರಣ ದಿನೇದಿನೇ ಹೆಚ್ಚುತ್ತಿದೆ. ಇದರ ಬಗ್ಗೆ  ಸರ್ಕಾರ ನಿಯಂತ್ರಣ ಕ್ರಮ ಕೈಗೊಳ್ಳದಿರುವ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ನಿಯಂತ್ರಣ ಮಾಡುವವರಾರು ಎಂಬ ಪ್ರಶ್ನೆ ಎದ್ದಿದೆ.

ಪಟ್ಟಣದ ಸಮೀಪದಲ್ಲಿ ಬರುವ ಪುರಸಭೆ ತ್ಯಾಜ್ಯ ವಿಲೇವಾರಿ ಘಟಕ, ಮಲ್ಲಯ್ಯನಪುರ, ಕೂತನೂರು ಹಾಗೂ ಭೀಮನ ಬೀಡು ಗ್ರಾಮಗಳ ಸಮೀಪದಲ್ಲಿ ಈ ಹಿಂದೆ ಲಾರಿಗಟ್ಟಲೆ ತ್ಯಾಜ್ಯವನ್ನು ಸುರಿಯಲಾಗುತ್ತಿತ್ತು. ಇದನ್ನು ಪ್ರಶ್ನಿಸಿದ ಗ್ರಾಮಸ್ಥರಿಗೆ ಬೆದರಿಕೆ ಹಾಕುತ್ತಿದ್ದರಿಂದ ಈ ಬಗ್ಗೆ ಯಾರೂ ಚಕಾರವೆತ್ತುತ್ತಿರಲಿಲ್ಲ. ಬಳಿಕ ಪಟ್ಟಣದಲ್ಲಿ ಸಂಗ್ರಹವಾಗುವ ಕಸವನ್ನು ವಿಲೇವಾರಿ ಮಾಡುವ ಘನತ್ಯಾಜ್ಯ ವಿಲೇವರಿ ಘಟಕವನ್ನು ಶ್ರೀರಾಮದೇವರ ಗುಡ್ಡದಲ್ಲಿರುವ ಕೊಳಕ್ಕೆ ತಂದು ಸುರಿಯುತ್ತಿದ್ದರು.

ಭಾನುವಾರ ರಾತ್ರಿ ಸುಮಾರಿನಲ್ಲಿ ಕೇರಳದಿಂದ ಬಂದ ಲಾರಿಯಲ್ಲಿ ಹಣ್ಣು, ತರಕಾರಿಯ ಮೂಟೆ ಗಟ್ಟಲೆ ತ್ಯಾಜ್ಯಗಳನ್ನು ವಿಲೇವಾರಿ ಮಾಡಲಾಗಿದೆ. ಈ ಕುರಿತು ಕನ್ನಡ ಪರ ಸಂಘಟನೆಗಳು ಪೊಲೀಸರಿಗೆ ದೂರು ನೀಡಿ ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಮುಂಚೆಯೂ ಹಲವು ಬಾರಿ ತ್ಯಾಜ್ಯ ವಿಲೇವಾರಿಯಾಗಿದ್ದು, ಇತ್ತಿಚೆಗೆ ಅಧಿಕಾರಿಗಳ ತಂಡ ತ್ಯಾಜ್ಯ ವಿಲೇವಾರಿ ಸ್ಥಳಕ್ಕೆ ಭೇಟಿ ನೀಡಿ ಪರೀಕ್ಷಿಸಿದಾಗ ಕೇರಳದ ತ್ಯಾಜ್ಯವೆಂಬುದು ತಿಳಿದುಬಂದಿತ್ತು.

ಇವುಗಳಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯಿದೆ. ಹೀಗಾಗಿ ತಕ್ಷಣ ಕ್ರಮವಹಿಸಿ ಘನತ್ಯಾಜ್ಯ ವಸ್ತುಗಳು ಗಡಿದಾಟಿ ಬರದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕೆಂದು ಪುರಸಭೆ ಸೇರಿದಂತೆ ಜಿಲ್ಲಾಧಿಕಾರಿಗಳಿಗೆ ಸ್ಥಳೀಯರು ಪತ್ರ ಬರೆದಿದ್ದರು. ಆದರೂ ಇಲ್ಲವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಅಕ್ರಮ ತ್ಯಾಜ್ಯ ವಿಲೇವಾರಿ ನಿರ್ಬಂಧಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕೇರಳ ರಾಜ್ಯದಲ್ಲಿ ತ್ಯಾಜ್ಯಗಳ ವಿಲೇವಾರಿಗೆ ಬಹಳ ನಿರ್ಬಂಧವಿದ್ದು, ಇದರಿಂದ ಅಲ್ಲಿನ ತ್ಯಾಜ್ಯಗಳನ್ನು ಕದ್ದು ಮುಚ್ಚಿ ಗಡಿದಾಟಿಸಲಾಗುತ್ತಿದೆ. ಇದರ ಹಿಂದೆ ದೊಡ್ಡ ಜಾಲವಿದ್ದು, ಗಡಿಗಳಲ್ಲಿನ ತನಿಖಾ ಠಾಣೆಯ ಸಿಬ್ಬಂದಿಗಳಿಗೆ ಪುಡಿಕಾಸು ನೀಡಿ ತಾಲೂಕನ್ನು ಪ್ರವೇಶಿಸಿ ಸಂಚಾರ ಕಡಿಮೆಯಿರುವ ಪ್ರದೇಶಗಳಲ್ಲಿ ವಿಲೇವಾರಿಯಾಗುತ್ತಿದೆ. ತನಿಖಾ ಠಾಣೆಗಳಲ್ಲಿ ಬಿಗಿಯಾದ ತಪಾಸಣೆ ನಡೆಯಬೇಕದಿದೆ.
– ರಘುರಾಂ, ಹಿಮಗಿರಿ ವನ್ಯ ಜೀವಿ  ಹಿತರಕ್ಷಣಾ ಸಂಸ್ಥೆ, ಗುಂಡ್ಲುಪೇಟೆ

ಗುಂಡ್ಲುಪೇಟೆ  ಸಮೀಪದಲ್ಲಿರುವ ಶ್ರೀರಾಮದೇವರ ಗುಡ್ಡದ ಬಳಿಯಲ್ಲಿರುವ ಪುರಸಭೆಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕೇರಳ ತ್ಯಾಜ್ಯವನ್ನು ಸುರಿದಿರುವ ಬಗ್ಗೆ ಮಾಹಿತಿಯಿದೆ. ಈ ಸಂಬಂಧ ಆರೋಗ್ಯ ನಿರೀಕ್ಷಕರಿಗೆ ಮಾರ್ಗದರ್ಶನ ನೀಡಿ ಈ ಘಟನೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇವೆ. ಘಟನೆ ಮರುಕಳಿಸದಂತೆ ಕ್ರಮ ವಹಿಸಲಾಗುವುದು.
– ಎ.ರಮೇಶ್‌, ಮುಖ್ಯಾಧಿಕಾರಿ, ಪುರಸಭೆ.
 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.