ರಕ್ತದಲ್ಲಿ ಪತ್ರ ಬರೆದ ಕೌರವನ ಪಡೆ!
Team Udayavani, Oct 10, 2018, 10:03 AM IST
ಹಿರೇಕೆರೂರ: ಶಾಸಕ ಬಿ.ಸಿ.ಪಾಟೀಲ ಅಭಿಮಾನಿಗಳು ಹಾಗೂ ತಾಲೂಕು ಎನ್ಎಸ್ಯುಐ ಸೋಷಿಯಲ್ ಮೀಡಿಯಾ ಕಾರ್ಯಕರ್ತರು ಬಿ.ಸಿ.ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗಂಡೂರಾವ್, ಡಿಸಿಎಂ ಪರಮೇಶ್ವರ್,
ಸಿದ್ದರಾಮಯ್ಯ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಹಾವೇರಿ ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ ಅವರಿಗೆ ಸಚಿವ ಸ್ಥಾನ ನೀಡದೇ ಅನ್ಯಾಯವೆಸಗಲಾಗಿದೆ. ಅಭಿವೃದ್ಧಿ ದೃಷ್ಟಿಯಿಂದ ಅವರಿಗೆ ಸಚಿವ ಸ್ಥಾನ ನೀಡಲೇಬೇಕು. ಇಲ್ಲವಾದಲ್ಲಿ ಮುಂಬರುವ ಚುನಾವಣೆಗಳಲ್ಲಿ ತಟಸ್ಥವಾಗಿ, ಎಲ್ಲ ಸ್ಥಾನಗಳಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.