ಕುಡುಕನ ರೋಷಾವೇಶ; ಟ್ರಾಫಿಕ್ ಪೊಲೀಸರ ಮೇಲೆ ದಾಳಿ
Team Udayavani, Oct 10, 2018, 3:52 PM IST
ದಾವಣಗೆರೆ: ಇಲ್ಲಿನ ಸದಡಿ ರಸ್ತೆ ಬಳಿ ಕುಡುಕನೊಬ್ಬ ಟ್ರಾಫಿಕ್ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ರೋಷಾವೇಶ ತೋರಿದ್ದು, ಪೊಲೀಸರ ಮೇಲೆ ಹಲ್ಲೆ ನಡೆಸಿ ಅಟ್ಟಹಾಸ ಮೆರೆದಿದ್ದಾನೆ.
ಬುಧವಾರ ಮಧ್ಯಾಹ್ನ ಘಟನೆ ನಡೆದಿದ್ದು, ಬೈಕ್ ಅಡ್ಡಗಟ್ಟಿದಾಗ ಮಧ್ಯಾಹ್ನ ಯಾಕೆ ತಪಾಸಣೆ ಮಾಡುತ್ತೀರಿ ಎಂದು ಕಿರಿಕ್ ತೆಗೆದ ಕುಡುಕ ರುದ್ರೇಶ್ ಎಂಬಾತ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾನೆ. ಪಕ್ಕದಲ್ಲಿದ್ದ ಇಟ್ಟಿಗೆಯನ್ನೂ ಪೊಲೀಸರ ಮೇಲೆ ಎಸೆದಿದ್ದಾನೆ. ಕುಸ್ತಿ ಪಟುವಿನಂತೆ ಓರ್ವ ಪೊಲೀಸ್ ಸಿಬಂದಿಯನ್ನು ನೆಲಕ್ಕೆ ಕೆಡವಿದ್ದಾನೆ.
ಎಎಸ್ಐ ಅಂಜಿನಪ್ಪ ಮತ್ತು ಸಿಬಂದಿಗಳಾದ ಸಿದ್ದೇಶ್, ನಾರಾಯಣರಾಜ್ ಅರಸು ಅವರ ಮೇಲೆ ದಾಳಿ ನಡೆಸಿದ್ದಾನೆ. ನಾರಾಯಣ ರಾಜು ಅವರ ಹಣೆಗೆ ಬಲವಾದ ಗಾಯವಾಗಿದೆ.
ದಾಳಿ ನಡೆಸಿದ ರುದ್ರೇಶ್ ವಕೀಲ ಎಂದು ಹೇಳಲಾಗಿದೆ. ಆತನನ್ನು ಬಂಧಿಸಿರುವ ದಾವಣಗೆರೆ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ