ಸಮ್ಮಿಶ್ರ ಸರ್ಕಾರದಿಂದ ಬಿಎಸ್‌ಪಿ ನಿರ್ಗಮನ


Team Udayavani, Oct 12, 2018, 6:00 AM IST

bsp-ma.jpg

ಬೆಂಗಳೂರು:ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದ ಬಿಎಸ್‌ಪಿಯ ಎನ್‌.ಮಹೇಶ್‌ ರಾಜೀನಾಮೆಯಿಂದ ರಾಜ್ಯ ರಾಜಕೀಯದಲ್ಲಿ ಮತ್ತೂಂದು ಧ್ರುವೀಕರಣವಾಗುತ್ತಾ ಎಂಬ ಪ್ರಶ್ನೆ ಹುಟ್ಟುಹಾಕಿದೆ.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌- ಜೆಡಿಎಸ್‌-ಬಿಎಸ್‌ಪಿ  ಮೈತ್ರಿಕೂಟದಡಿ ಸ್ಪರ್ಧೆ ಮಾಡಿ 20  ಸ್ಥಾನ ಗೆಲ್ಲುವ ಲೆಕ್ಕಾಚಾರ ಹಾಕಿದ್ದ ಕಾಂಗ್ರೆಸ್‌ಗೆ ಬಿಎಸ್‌ಪಿಯ ನಿಲುವು ಶಾಕ್‌ ನೀಡಿದೆ. ಉಪ ಚುನಾವಣೆಯಲ್ಲೂ ಪರಿಣಾಮ ಬೀರುವ ಆತಂಕವೂ ಕಾಡುತ್ತಿದೆ.

ದೇಶವ್ಯಾಪಿ ಬಿಜೆಪಿ ಹಾಗೂ ನರೇಂದ್ರ ಮೋದಿ ಎದುರಿಸಲು “ಮಹಾಘಟಬಂಧನ್‌’ ರಚನೆಯ ಮುಂಚೂಣಿಯಲ್ಲಿದ್ದ ಬಿಎಸ್‌ಪಿಯ ಮಾಯಾವತಿ ಕಳೆದ ವಾರ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜತೆ ಮೈತ್ರಿ ಇಲ್ಲ ಎಂದು ಘೋಷಿಸಿದಾಗಲೇ ಇಂತದ್ದೊಂದು ಸುಳಿವು ಸಿಕ್ಕಿತ್ತು.

ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಬಿಎಸ್‌ಪಿ ಕಾಂಗ್ರೆಸ್‌ ನೇತೃತ್ವದ ಮೈತ್ರಿಕೂಟ ಅಥವಾ ಮಾಹಾಘಟ್‌ಬಂಧನ್‌ ಭಾಗವಾಗದಿದ್ದರೆ ದಲಿತ ಮತಬ್ಯಾಂಕ್‌ ಚದುರಿ ಕರ್ನಾಟಕದಲ್ಲೂ  ಕಾಂಗ್ರೆಸ್‌ಗೆ ಹಿನ್ನೆಡೆಯುಂಟಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲೂ ಬಿಎಸ್‌ಪಿ ಸ್ವತಂತ್ರವಾಗಿ ಸ್ಪರ್ಧೆ ಮಾಡಿದರೆ ಕಾಂಗ್ರೆಸ್‌ಗೆ ಐದರಿಂದ ಆರು ಕ್ಷೇತ್ರಗಳಲ್ಲಿ ಹಿನ್ನೆಡೆಯುಂಟಾಗಲಿದೆ. ಪ್ರಮುಖವಾಗಿ ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ಕಲಬುರಗಿ, ವಿಜಯಪುರ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತಬ್ಯಾಂಕ್‌ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಲಾಗಿದೆ.

ಹೀಗಾಗಿ, ಸಮ್ಮಿಶ್ರ ಸರ್ಕಾರದಿಂದ ಬಿಎಸ್‌ಪಿ ಸಚಿವನ ನಿರ್ಗಮನ ರಾಜ್ಯ ರಾಜಕೀಯ ಅದರಲ್ಲೂ ಕಾಂಗ್ರೆಸ್‌ ಮೇಲೆ ಪರಿಣಾಮ ಬೀರುವುದು ಮೇಲ್ನೋಟಕ್ಕೆ ಸ್ಪಷ್ಟ ಎಂಬ ವ್ಯಾಖ್ಯಾನಗಳು ಕೇಳಿಬರುತ್ತಿವೆ.

ಕಾಂಗ್ರೆಸ್‌ನ ಆಂತರಿಕ ಕಚ್ಚಾಟ ಹಾಗೂ ಜೆಡಿಎಸ್‌ ಜತೆ ಮೈತ್ರಿ ಬಗ್ಗೆ  ಕೆಲವು ನಾಯಕರ ವಿರೋಧದಿಂದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಹ ತೀವ್ರ ಅಸಮಾಧಾನಗೊಂಡಿದ್ದು, ಲೋಕಸಭೆ ಚುನಾವಣೆ ವೇಳೆಗೆ ಬೇರೆ ರೀತಿಯ ಬೆಳವಣಿಗೆ ನಡೆದರೂ ಅಚ್ಚರಿಯಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.

ಜಾಣತನ
ಆದರೆ, ಬಿಎಸ್‌ಪಿ ಜೆಡಿಎಸ್‌ ಜತೆಗಿನ ಮೈತ್ರಿ ಮುಂದುವರಿಸುವ ಜಾಣತನ ತೋರಿರುವುದು ರಾಜ್ಯದ ಮಟ್ಟಿಗೆ ಕೆಲವು ಅನುಮಾನ ಹುಟ್ಟುಹಾಕಿದೆ. ಲೋಕಸಭೆ ಚುನಾವಣೆ ನಂತರ ರಾಜ್ಯದಲ್ಲಿ ಮತ್ತೂಂದು ಸುತ್ತಿನ ರಾಜಕೀಯ ಪಲ್ಲಟ ನಡೆಯಲಿದ್ದು ಅದರ ಸೂತ್ರದಾರಿ ಬಿಎಸ್‌ಪಿಯ ಮಾಯಾವತಿ ಆಗಲಿದ್ದಾರೆ.  ಆಗಿನ ಸಂದರ್ಭದಲ್ಲಿ ಜೆಡಿಎಸ್‌ ನೆರವಿಗೆ ಮಾಯಾವತಿ ಬರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

ಸದ್ಯದ ಮಟ್ಟಿಗೆ ಕರ್ನಾಟಕದಲ್ಲಿ  ಐದು ಕ್ಷೇತ್ರಗಳ ಉಪ ಚುನಾವಣೆ ಹಾಗೂ ಮುಂದಿನ 2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನೆಡೆಯುಂಟು ಮಾಡುವುದೇ ಬಿಎಸ್‌ಪಿ ಸಚಿವ ಸಮ್ಮಿಶ್ರ ಸರ್ಕಾರದಿಂದ  ನಿರ್ಗಮಿಸಿರುವ ಹಿಂದಿನ ಕಾರ್ಯತಂತ್ರ ಎಂದೂ ಹೇಳಲಾಗಿದೆ.

ರಾಜೀನಾಮೆಗೆ ಒತ್ತಾಯ
ಮಾಯಾವತಿ ನಿರ್ಧಾರದಿಂದ ಕಾಂಗ್ರೆಸ್‌ನ ಹಿರಿಯ ನಾಯಕರು ಆಕ್ರೋಶಗೊಂಡಿದ್ದಾರೆ. ಇದಾದ ನಂತರ ಸಮ್ಮಿಶ್ರ ಸರ್ಕಾರದಲ್ಲಿ ಬಿಎಸ್‌ಪಿ ಸಚಿವ ಮುಂದುವರಿಯುವುದು ಬೇಡ ಎಂಬ ನಿಲುವಿಗೆ ಮಾಯಾವತಿ ಬಂದಿದ್ದರು. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲಿ  ಕಾಂಗ್ರೆಸ್‌ ವಿರುದ್ಧ ವಾಗಾœಳಿ ನಡೆಸುವಾಗ ಕರ್ನಾಟಕದಲ್ಲಿ ಕಾಂಗ್ರೆಸ್‌ ಪಾಲುದಾರಿಕೆಯ ಸರ್ಕಾರದಲ್ಲಿ ಸಚಿವ ಸ್ಥಾನದಲ್ಲಿ ಇರುವುದು ಸರಿಯಲ್ಲ ಎಂದು ಮಹೇಶ್‌ ರಾಜೀನಾಮೆ ಕೊಡಿಸುವ ನಿರ್ಧಾರ ಮಾಡಿದ್ದರು. ಜತೆಗೆ ಕಾಂಗ್ರೆಸ್‌ ಹೈಕಮಾಂಡ್‌ ಸಹ ಬಿಎಸ್‌ಪಿ ನಿಲುವು ವಿಚಾರದಲ್ಲಿ ಬೇಸರಗೊಂಡಿತ್ತು. ಈ ವಿಚಾರ ಮಾಯಾವತಿವರೆಗೂ  ಹೋಗಿತ್ತು.ಇದಾದ ನಂತರ ಮಾಯಾವತಿ ಆವರು ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಬಿಎಸ್‌ಪಿ ಭಾಗವಾಗಿರುವುದು ಬೇಡ ಎಂದು ಫ‌ರ್ಮಾನ ಹೊರಡಿಸಿದರು. ಮೂರು ದಿನಗಳ ಹಿಂದೆಯೇ ರಾಜೀನಾಮೆ ಕೊಡುವಂತೆ ಎನ್‌.ಮಹೇಶ್‌ ಅವರಿಗೆ ಸೂಚನೆ ನೀಡಲಾಗಿತ್ತು. ಅದಕ್ಕಾಗಿಯೇ ಪಕ್ಷದ ರಾಜ್ಯ ಉಸ್ತುವಾರಿ ಅಶೋಕ್‌ ಸಿದ್ಧಾರ್ಥ್ ಅವರನ್ನು ಕರ್ನಾಟಕಕ್ಕೆ ಕಳುಹಿಸಲಾಗಿತ್ತು  ಎಂದು ಹೇಳಲಾಗಿದೆ.

– ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.