ಉಪಚುನಾವಣೆಗಳಿಗೆ ಮಾಜಿ ಸಿಎಂಗಳೇ ಕಾರಣ​​​​​​​


Team Udayavani, Oct 12, 2018, 9:54 AM IST

bs-yeddyurappa-s-bangarappa.jpg

ಶಿವಮೊಗ್ಗ: ರಾಜ್ಯಕ್ಕೆ ನಾಲ್ಕು ಮಂದಿ ಮುಖ್ಯಮಂತ್ರಿಗಳನ್ನು ಕೊಟ್ಟಿರುವ ಅವಿಭಜಿತ ಶಿವಮೊಗ್ಗ ಜಿಲ್ಲೆ ಇದುವರೆಗೆ ಮೂರು ಬಾರಿ ಉಪ ಚುನಾವಣೆ ಎದುರಿಸಿದೆ. ಮೂರೂ ಚುನಾವಣೆಗಳು ಮಾಜಿ ಮುಖ್ಯಮಂತ್ರಿಗಳ ಸ್ವ ಹಿತಾಸಕ್ತಿಯಿಂದಲೇ ಸೃಷ್ಟಿಯಾದವು. ಈಗ ನಡೆಯುತ್ತಿರುವುದು ನಾಲ್ಕನೇ ಉಪ ಚುನಾವಣೆ.

ಜಿಲ್ಲೆ ಎದುರಿಸಿದ ಉಪ ಚುನಾವಣೆಗಳು ಇಬ್ಬರು ಮಾಜಿ ಮುಖ್ಯಮಂತ್ರಿಗಳ ರಾಜಕೀಯ ಹಿತಾಸಕ್ತಿಯಿಂದ ನಡೆದಂತಹವು. ಮೊದಲಿನ 2 ಚುನಾವಣೆಗಳು ಮಾಜಿ ಸಿಎಂ ಎಸ್‌. ಬಂಗಾರಪ್ಪ ಅವರ ರಾಜಕೀಯ ಹಿತಾಸಕ್ತಿಯಾದರೆ, ಆನಂತರದ 2 ಉಪ ಚುನಾವಣೆಗಳು ಮತ್ತೂಬ್ಬ ಮಾಜಿ ಸಿಎಂ ಯಡಿಯೂರಪ್ಪ ಅವರ ಹಿತಾಸಕ್ತಿಯದ್ದಾಗಿದೆ.

1994ರಲ್ಲಿ ಕಾಂಗ್ರೆಸ್‌ನಿಂದ ಹೊರ ಬಂದು ಕರ್ನಾಟಕ ಕಾಂಗ್ರೆಸ್‌ ಪಕ್ಷ (ಕೆಸಿಪಿ) ಕಟ್ಟಿ ಸೊರಬದಿಂದ ಮರು ಆಯ್ಕೆಯಾದ ಬಂಗಾರಪ್ಪ 1996ರ ಲೋಕಸಭೆಯ ಸಾರ್ವತ್ರಿಕ ಚುನಾವಣೆ ಕಣಕ್ಕಿಳಿದರು. ಮೊದಲ ಯತ್ನದಲ್ಲೇ ಸುಮಾರು 70 ಸಾವಿರ ಮತಗಳ ಅಂತರದೊಂದಿಗೆ ಗೆಲುವು ಸಾಧಿಸಿ ಸೊರಬಕ್ಕೆ ಉಪ ಚುನಾವಣೆ ನಡೆಯುವಂತೆ ಮಾಡಿದರು. ಬೆಳ್ಳಿತೆರೆಗೆ ಆಗಷ್ಟೇ ಪ್ರವೇಶಿದ್ದ ಹಿರಿಯ ಪುತ್ರ ವಸಂತಕುಮಾರ್‌(ಕುಮಾರ ಬಂಗಾರಪ್ಪ) ಅವರನ್ನು ರಾಜಕೀಯಕ್ಕೆ ಕರೆ ತಂದು ಸೊರಬದಲ್ಲಿ ಗೆಲ್ಲಿಸಿದರು.

ಅನಂತರದಲ್ಲಿ ಮತ್ತೆ 2 ಬಾರಿ ಕಾಂಗ್ರೆಸ್‌ಗೆ ಹೋಗಿ ಬಂದು 2004ರಲ್ಲಿ ಬಿಜೆಪಿ ಸೇರಿ ಸಂಸತ್‌ಗೆ ಆಯ್ಕೆಯಾಗಿದ್ದರು.  ವರ್ಷದಲ್ಲಿ ಮತ್ತೆ ರಾಜೀನಾಮೆ ನೀಡಿ, ಸಮಾಜವಾದಿ ಪಕ್ಷ ಸೇರಿದ್ದರು. ಅವರ ರಾಜೀನಾಮೆಯಿಂದ 2005ನೇ ಮೇ/ಜೂನ್‌ನಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ಮೊದಲ ಬಾರಿಗೆ ಉಪ ಚುನಾವಣೆ ಕಾಣಬೇಕಾಯಿತು.

ಯಡಿಯೂರಪ್ಪ ಅವರು 2013ರಲ್ಲಿ ಕೆಜೆಪಿಯಿಂದ ಶಿಕಾರಿಪುರದಲ್ಲಿ ಶಾಸಕರಾಗಿ ಆಯ್ಕೆಯಾದ ಕೆಲವೇ ತಿಂಗಳಲ್ಲಿ ಬಿಜೆಪಿ ಸೇರ್ಪಡೆಯಾಗಿ 2014ರಲ್ಲಿ ಬಿಜೆಪಿಯಿಂದ ಲೋಕಸಭೆಗೆ ಚುನಾಯಿತರಾದರು. ಆಗ ಶಿಕಾರಿಪುರದಲ್ಲಿ ತೆರವಾದ ಶಾಸಕ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಪುತ್ರ ಬಿ.ವೈ. ರಾಘವೇಂದ್ರ ಅವರನ್ನು ಕಣಕ್ಕಿಳಿಸಿ ಗೆಲ್ಲಿಸಿಕೊಂಡು ಬಂದರು. 2018 ಏಪ್ರಿಲ್‌/ಮೇನಲ್ಲಿ ಬಂದ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಶಿಕಾರಿಪುರದಿಂದ ಪುನರಾಯ್ಕೆಯಾದ ಅವರು ಲೋಕಸಭೆಗೆ ರಾಜೀನಾಮೆ ಸಲ್ಲಿಸಿದ್ದರಿಂದ ಈಗ ಬಲವಂತದ ಉಪ ಚುನಾವಣೆ ಬಂದೊದಗಿದೆ.

ಬಿಜೆಪಿ ಆತ್ಮವಿಶ್ವಾಸ, ಮೈತ್ರಿಕೂಟದಲ್ಲಿ ಗೊಂದಲ
ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ. ರಾಘವೇಂದ್ರ ಪರ  ಪ್ರಚಾರ ಕಾರ್ಯ ಶುರು ಮಾಡಿದ್ದಾರೆ.  ಆದರೆ ಮೈತ್ರಿಕೂಟದಲ್ಲಿ ಯಾರಿಗೆ ಟಿಕೆಟ್‌ ಕೊಡಬೇಕೆಂಬ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ಮಂಗಳವಾರ ನಡೆದ ಸಭೆಯಲ್ಲಿ ಕಾಂಗ್ರೆಸ್‌ ನಮಗೆ ಬಿಟ್ಟು ಕೊಡಿ ಎಂದು ಕೇಳಿಕೊಂಡಿದೆ. ಇದಕ್ಕೆ ಬಹುತೇಕ ಒಪ್ಪಿಗೆ ನೀಡಲಾಗಿದೆ ಎನ್ನಲಾಗಿದ್ದರೂ ಬುಧವಾರ ವಿಜಯಪುರದಲ್ಲಿ ಜೆಡಿಎಸ್‌ ವರಿಷ್ಠ ದೇವೇಗೌಡ ನೀಡಿದ ಹೇಳಿಕೆ ಮತ್ತಷ್ಟು ಗೊಂದಲಕ್ಕೆ ದೂಡಿದೆ. ಅ.13ರಂದು ರಾಹುಲ್‌ ಗಾಂಧಿ  ಬೆಂಗಳೂರಿಗೆ ಬರುತ್ತಿದ್ದು, ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ.

– ಶರತ್‌ ಭದ್ರಾವತಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.