ರಜೆಯಲ್ಲಿ ನಾಮಪತ್ರ ಸಲ್ಲಿಸಲು ಹೋದರು!
Team Udayavani, Oct 14, 2018, 7:00 AM IST
ಜಮಖಂಡಿ: ಜಮಖಂಡಿ ಉಪ ಚುನಾವಣೆ ನಾಮಪತ್ರ ಸಲ್ಲಿಕೆ ಆರಂಭಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಶ್ರೀಕಾಂತ ಕುಲಕರ್ಣಿ ಶನಿವಾರ ರಜೆಯಿದ್ದರೂ ನಾಮಪತ್ರ ಸಲ್ಲಿಸಲು ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿದ್ದರು.
ವಿಶೇಷ ಪೂಜೆ ಬಳಿಕ ಶುಭ ಮುಹೂರ್ತದಲ್ಲಿ ಶನಿವಾರ ನಾಮಪತ್ರ ಸಲ್ಲಿಕೆಗೆ ತೆರಳಿದರು. ಕೇಂದ್ರ ಚುನಾವಣಾ ಅಧಿಕಾರಿಗಳು ಹೊರಡಿಸಿದ ಆದೇಶದಂತೆ ನಾಮಪತ್ರ ಸಲ್ಲಿಕೆಗೆ 2ನೇ ಹಾಗೂ 4ನೇ ಶನಿವಾರ ಸರ್ಕಾರಿ ರಜೆ ಇರುವುದರಿಂದ ಅವಕಾಶ ಇರುವುದಿಲ್ಲ ಎಂದು ಉಪವಿಭಾಗಾ ಧಿಕಾರಿ ಆದೇಶ ಪತ್ರ ತೋರಿಸಿದರು.
ಒಂದು ನಾಮಪತ್ರ ಸಲ್ಲಿಕೆ: ಉಪಚುನಾವಣೆಗೆ ಹಿರೇಪಡಸಲಗಿ ಗ್ರಾಮದ ರವಿ ಶಿವಪ್ಪ ಪಡಸಲಗಿ ಪಕ್ಷೇತರ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾ ಅಧಿ ಕಾರಿ ಮೊಹಮ್ಮದ ಶರೀಫ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
Lok Sabha Election: ಬಿಜೆಪಿ-ಜೆಡಿಎಸ್ “ಜಂಟಿ ಸಮರಾಭ್ಯಾಸ’
Congress; ಕೋಲಾರಕ್ಕೆ ಗೌತಮ್ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು