ಬಳ್ಳಾರಿಯಲ್ಲೀಗ ಬಿಜೆಪಿಗೆ ಬಂಡಾಯದ ಬಿಸಿ
Team Udayavani, Oct 14, 2018, 6:55 AM IST
ಬಳ್ಳಾರಿ: ಬಳ್ಳಾರಿ ಲೋಕಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಅಭ್ಯರ್ಥಿ ಆಯ್ಕೆಯಾದ ಬೆನ್ನಲ್ಲೇ ಕಮಲ ಪಕ್ಷದಲ್ಲಿ ಬಂಡಾಯದ ಬಿಸಿ ಎದ್ದಿದೆ. ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಡಾ| ಟಿ.ಆರ್.ಶ್ರೀನಿವಾಸ್, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಅ.15ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಲೋಕಸಭೆಗೆ 2014ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಡಾ| ಟಿ.ಆರ್.ಶ್ರೀನಿವಾಸ್, ಬಳ್ಳಾರಿ ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ಗಾಗಿ ಸಾಕಷ್ಟು ಪ್ರಯತ್ನಪಟ್ಟಿದ್ದರಾದರೂ, ಕೊನೆ ಗಳಿಗೆಯಲ್ಲಿ ಆಗ ಗ್ರಾಮೀಣ ಕ್ಷೇತ್ರದ ಶಾಸಕರಾಗಿದ್ದ ಶ್ರೀರಾಮುಲು ಅವರಿಗೆ ಟಿಕೆಟ್ ಖಚಿತವಾಗುತ್ತಿದ್ದಂತೆ ಟಿಕೆಟ್ ರೇಸ್ನಿಂದ ಹಿಂದೆ ಸರಿದಿದ್ದರು. ಬಳಿಕ 2018ರ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲೂ ಶ್ರೀನಿವಾಸ್, ಸಂಡೂರು ಎಸ್ಟಿ ಮೀಸಲು ಕ್ಷೇತ್ರದಿಂದ ಸ್ಪರ್ಧೆ ಬಯಸಿದ್ದರು.
ಅದಕ್ಕಾಗಿ ಸಂಡೂರು ಕ್ಷೇತ್ರದಲ್ಲಿ ಕೆಲ ವರ್ಷಗಳಿಂದ ಉಚಿತ ಆರೋಗ್ಯ ಶಿಬಿರ ಸೇರಿ ಹಲವು ಸೇವಾ ಕಾರ್ಯ ಹಮ್ಮಿಕೊಂಡು ಪಕ್ಷವನ್ನು ಸಂಘಟಿಸಿದ್ದರು. ಆಗಲೂ ಟಿಕೆಟ್ ಕೈ ತಪ್ಪಿ, ಸ್ಥಳೀಯ ಡಿ.ರಾಘವೇಂದ್ರ ಎನ್ನುವವರಿಗೆ ನೀಡಲಾಯಿತು. ಆದರೆ, ಉಪಚುನಾವಣೆಯಲ್ಲಾದರೂ ಟಿಕೆಟ್ ದೊರೆಯಬಹುದೆಂಬ ನಿರೀಕ್ಷೆಯಲ್ಲಿದ್ದ ಟಿ.ಆರ್. ಶ್ರೀನಿವಾಸ್ ಅವರು, ಪರೋಕ್ಷವಾಗಿ ಪಕ್ಷದ ರಾಜ್ಯಮುಖಂಡರ ಗಮನ ಸೆಳೆದಿದ್ದರು. ಆದರೆ, ಬಿಜೆಪಿ ಟಿಕೆಟ್ ಮಾಜಿ ಸಂಸದೆ ಜೆ.ಶಾಂತಾ ಅವರಿಗೆ ಅಂತಿಮಗೊಳ್ಳಲಿದೆ ಎಂದು ಗೊತ್ತಾಗುತ್ತಿದ್ದಂತೆ ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಎರಡು ದಿನಗಳ ಹಿಂದೆ ಪಕ್ಷದ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಅವರನ್ನು ಭೇಟಿ ಮಾಡಿ, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್