ರಾಜ್ಯದಲ್ಲಿ ಇನ್ನೂ 14 ತಾಲೂಕು ಬರಪೀಡಿತ
Team Udayavani, Oct 16, 2018, 6:15 AM IST
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಹದಿನಾಲ್ಕು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇದರಿಂದಾಗಿ ಈಗಾಗಲೇ ಘೋಷಿತವಾಗಿರುವ 86 ತಾಲೂಕುಗಳು ಸೇರಿ ಒಟ್ಟು 100 ತಾಲೂಕುಗಳು ಬರಪೀಡಿತವಾಗಿವೆ.
ಆನೇಕಲ್,ದೇವನಹಳ್ಳಿ, ದೊಡ್ಡಬಳ್ಳಾಪುರ,ತುರುವೇಕೆರೆ, ಹೊಳಲ್ಕೆರೆ, ಹೊಸದುರ್ಗ, ದಾವಣಗೆರೆ,ಜಗಳೂರು, ಪಾಂಡವಪುರ, ಔರಾದ್, ಬಸವಕಲ್ಯಾಣ, ಅಥಣಿ, ಬೀಳಗಿ ಮತ್ತು ಮುಧೋಳ ತಾಲೂಕುಗಳನ್ನು ಹೊಸದಾಗಿ ಬರಪೀಡಿತ ಎಂದು ಘೋಷಿಸಲಾಗಿದೆ.
ಕೇಂದ್ರ ಸರ್ಕಾರವು ಪ್ರಕಟಿಸಿರುವ 2016ರ ಬರ ಕೈಪಿಡಿ ಮತ್ತು ಪರಿಷ್ಕೃತ ಮಾರ್ಗಸೂಚಿಯಂತೆ ಈ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಈ ತಾಲೂಕುಗಳಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉದ್ಯೋಗ ಒದಗಿಸುವುದು, ಕುಡಿಯುವ ನೀರು ಪೂರೈಕೆ, ಜಾನುವಾರುಗಳಿಗೆ ಮೇವು ಮುಂತಾದ ಬರ ಪರಿಹಾರ ಕಾಮಗಾರಿ ಕೈಗೊಳ್ಳಲಾಗುವುದು. ಜತೆಗೆ ಬೆಳೆಹಾನಿ ಸಮೀಕ್ಷೆಗೂ ಸಂಬಂಧಪಟ್ಟ ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…