ಬೆಂಗ್ಳೂರಲ್ಲಿದ್ದ ಬಾಂಗ್ಲಾ ದೇಶೀಯರ ಬಂಧನ


Team Udayavani, Oct 16, 2018, 6:00 AM IST

ban16101801medn.jpg

ಬೆಂಗಳೂರು/ಗುವಾಹಟಿ: ಅಸ್ಸಾಂನ ಗುವಾಹಟಿ ರೈಲ್ವೆ ನಿಲ್ದಾಣದಲ್ಲಿ ಪೊಲೀಸರಿಂದ ಬಂಧನವಾದ 31 ಬಾಂಗ್ಲಾದೇಶಿಯರು ಕಳೆದ ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದರು ಎಂಬ ಮಾಹಿತಿ ಬಯಲಾಗಿದೆ.

ಈ ಮೂಲಕ ರಾಜ್ಯದಲ್ಲಿ ಅನಧಿಕೃತವಾಗಿ ಬಾಂಗ್ಲಾದೇಶಿಯರು ವಾಸವಿದ್ದಾರೆ ಎಂಬುದಕ್ಕೆ ಮತ್ತಷ್ಟು ಪುಷ್ಟಿ ದೊರೆತಿದೆ.
ಅಗರ್ತಲಾ ಮೂಲಕ ಸ್ವದೇಶಕ್ಕೆ ಹಿಂತಿರುಗುತ್ತಿದ್ದ ವೇಳೆ ಗುವಾಹಟಿ ರೈಲ್ವೆ ನಿಲ್ದಾಣದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದವರ ಪೈಕಿ ಒಬ್ಟಾತ, ಬೆಂಗಳೂರಿನಲ್ಲಿ ಕುಟುಂಬ ಸದಸ್ಯರ ಜತೆ ಹಲವು ವರ್ಷಗಳಿಂದ ವಾಸವಿದ್ದು, ಬಾಂಗ್ಲಾಕ್ಕೆ ವಾಪಾಸ್‌ ಆಗುತ್ತಿದ್ದೇವೆ ಎಂಬ ಹೇಳಿಕೆ ನೀಡಿದ್ದಾನೆ ಎಂದು ತಿಳಿದು ಬಂದಿದೆ.

ರಾಷ್ಟ್ರೀಯ ನಾಗರಿಕ ನೋಂದಣಿ (ಎನ್‌ಆರ್‌ಸಿ)ಯಲ್ಲಿ ಸೇರಿಲ್ಲದ ಯಾವುದೇ ವ್ಯಕ್ತಿಯನ್ನೂ ಬಾಂಗ್ಲಾದೇಶಕ್ಕೆ ಕಳುಹಿಸುವುದಿಲ್ಲ ಎಂದು ಬಾಂಗ್ಲಾ ಪ್ರಧಾನಿ ಶೇಖ್‌ ಹಸೀನಾಗೆ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ ಬೆನ್ನಲ್ಲೇ ಈ ಘಟನೆ ನಡೆದಿದೆ.

ಬೆಂಗಳೂರು ಹಾಗೂ ರಾಜ್ಯದ ಇತರ ಪ್ರದೇಶಗಳಲ್ಲಿ ಅನಧಿಕೃವಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಬಾಂಗ್ಲಾದೇಶಿಯರು ವಾಸಿಸುತ್ತಿರುವ ವಿಚಾರ ಹಲವು ಬಾರಿ ಬೆಳಕಿಗೆ ಬಂದಿದೆ. ಕಳೆದ ಆಗಸ್ಟ್‌ನಲ್ಲಿ ಸರ್ಜಾಪುರ ಠಾಣೆ ಪೊಲೀಸರು, ಅಕ್ರಮವಾಗಿ ಬೆಂಗಳೂರಿಗೆ ಆಗಮಿಸಿದ್ದ ನಾಲ್ವರು ಮಹಿಳೆಯರು ಸೇರಿ 13 ಮಂದಿಯನ್ನು ಬಂಧಿಸಿದ್ದರು. ಆಂತರಿಕ ಭದ್ರತಾ ವಿಭಾಗ (ಐಎಸ್‌ಡಿ)ದ ಮಾಹಿತಿ ಆಧರಿಸಿ 13 ಮಂದಿಯನ್ನು ಬಂಧಿಸಿದ್ದರು.ಇದಲ್ಲದೆ, ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ ಬಾಂಗ್ಲಾದೇಶಿಯರು ಪೊಲೀಸರ ಬಲೆಗೆ ಬಿದ್ದಿದ್ದಾರೆ. 

ಸಣ್ಣಪುಟ್ಟ ವ್ಯಾಪಾರ, ಕಟ್ಟಡ ಕೂಲಿ ಕಾರ್ಮಿಕರು ಇನ್ನಿತರೆ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಸಾವಿರಾರು ಮಂದಿ ಬಾಂಗ್ಲಾ ಪ್ರಜೆಗಳು, ಮಾದಕ ವಸ್ತುಗಳ ಮಾರಾಟ, ಅಪರಾಧಿಕ ಕೃತ್ಯಗಳ ತನಿಖೆ ವೇಳೆ ಬಂಧಿಸಲಾಗಿದೆ. ಕಳೆದ ವರ್ಷ ಆರ್‌.ಟಿ. ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿದಾಗ, ಅಕ್ರಮವಾಗಿ ವಾಸ್ತವ್ಯ ಹೂಡಿದ್ದರು ಎಂಬ ಸಂಗತಿ ಗೊತ್ತಾಗಿತ್ತು. ಇತ್ತೀಚೆಗೆ ರಾಮನಗರದಲ್ಲಿ ಬಂಧಿತನಾದ ಜೆಎಂಬಿ ಉಗ್ರ ಜಹೀಲುªಲ್‌ ಇಸ್ಲಾಮ್‌ ಅಲಿಯಾಸ್‌ ಕೌಸರ್‌ನನ್ನು ಬಂಧಿಸಲಾಗಿತ್ತು. 

ಆತನೂ ಬಾಂಗ್ಲಾ ಮೂಲದವನಾಗಿದ್ದು, ತನ್ನ ಸಂಗಡಿಗರ ಜತೆಗೂಡಿ ಬೆಂಗಳೂರು ಸೇರಿದಂತೆ ಹಲವೆಡೆ ಭಯೋತ್ಪಾದಕ ಚಟುವಟಿಕೆಗಳಲ್ಲಿ ನಿರತನಾಗಿರುವುದು ಬೆಳಕಿಗೆ ಬಂದಿತ್ತು.ಇನ್ನು ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬಾಂಗ್ಲಾದೇಶದ 4000 ಸಾವಿರ ಮಂದಿ ಅಧಿಕೃತವಾಗಿ ವಾಸವಾಗಿದ್ದಾರೆ. ಬಹುತೇಕರು ಹಲವು ವರ್ಷಗಳಿಂದ  ವಾಸ್ತವ್ಯ ಹೂಡಿದ್ದಾರೆ. ಸಣ್ಣಪುಟ್ಟ ಕೆಲಸಗಳಲ್ಲಿ ತೊಡಗಿಕೊಳ್ಳುವ ಅವರು, ಕೆಲವು ತಿಂಗಳುಗಳ ಬಳಿಕ ಸಂಬಂಧಿಕರನ್ನು ಕರೆಸಿಕೊಳ್ಳುತ್ತಾರೆ. ಈ ಸಂದ‌ರ್ಭದಲ್ಲಿ ಹಲವರು ಅನಧಿಕೃತವಾಗಿ ಬಂದಿರುವ ಸಾಧ್ಯತೆಯಿದೆ ಎಂದು ಪೊಲೀಸ್‌ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ಬೆಂಗಳೂರು ಪೊಲೀಸರಿಗೆ ಮಾಹಿತಿ
ಬಾಂಗ್ಲಾದೇಶಿಗರನ್ನು ಬಂಧಿಸಿರುವ ಗುವಾಹಟಿ ರೈಲ್ವೆ ಪೊಲೀಸರು ಈಗ ಈ ಬಗ್ಗೆ ಬೆಂಗಳೂರು ಪೊಲೀಸರಿಗೂ ಮಾಹಿತಿ ನೀಡಿದ್ದು, ವಾಸವಿದ್ದ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಿದ್ದಲ್ಲಿ ಒದಗಿಸುವಂತೆ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ, ಬೆಂಗಳೂರು ಪೊಲೀಸರು ಈ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.