ರಾಜ್ಯದ ವಿವಿಧೆಡೆ ಸಿಡಿಲಿಗೆ ನಾಲ್ವರ ದುರ್ಮರಣ
Team Udayavani, Oct 17, 2018, 7:07 AM IST
ಬೆಂಗಳೂರು: ಕರಾವಳಿ ಸೇರಿ ರಾಜ್ಯದ ಕೆಲವೆಡೆ ಮಳೆ ಮುಂದುವರಿದಿದ್ದು, ಸಿಡಿಲಬ್ಬರದ ಮಳೆಗೆ ನಾಲ್ವರು ಬಲಿಯಾಗಿದ್ದಾರೆ. ಮಂಗಳವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಹಾವೇರಿ ಮತ್ತು ಕೊಪ್ಪಳ ಜಿಲ್ಲೆ ಕುಕನೂರಿನಲ್ಲಿ ರಾಜ್ಯದಲ್ಲಿಯೇ ಅಧಿಕ 5 ಸೆಂ.ಮೀ. ಮಳೆ ಸುರಿಯಿತು. ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಮೈಲಾಪುರ ಗ್ರಾಮದಲ್ಲಿ ಮಂಗಳವಾರ ಸಿಡಿಲು ಬಡಿದು ವಿರೂಪಾಕ್ಷಿಗೌಡ (40) ಎಂಬುವರು ಮೃತಪಟ್ಟಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಹದಲಿ ಗ್ರಾಮದಲ್ಲಿ ಹೊಲದಲ್ಲಿ ಹತ್ತಿ ಬಿಡಿಸುತ್ತಿದ್ದಾಗ ಸಿಡಿಲು ಬಡಿದು ಯಂಕವ್ವ ಯಲ್ಲಪ್ಪ ವಿಠ್ಠಪ್ಪನವರ(43) ಮೃತಪಟ್ಟಿದ್ದಾರೆ. ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಬಳಗೇರಿ ಗ್ರಾಮದಲ್ಲಿ ಕುರಿ ಮೇಯಿಸುವಾಗ ಸಿಡಿಲು ಬಡಿದು ಕಳಕಪ್ಪ ಚಾಕರಿ (24) ಮೃತಪಟ್ಟಿದ್ದಾರೆ. ಯಾದಗಿರಿ ಜಿಲ್ಲೆ ಗುರುಮಠಕಲ್ ಸಮೀಪ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಕಂದೂರ ಓಣಿಯ ಚಂದ್ರಪ್ಪ (65) ಎಂಬುವರು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಚನ್ನಸೋಗೆ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಕೂಲಿ ಕಾರ್ಮಿಕರು ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ