ವೈಭವದ ಜಂಬೂ ಸವಾರಿಗೆ ಮೈಸೂರು ಸಜ್ಜು
Team Udayavani, Oct 18, 2018, 6:00 AM IST
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆ ವಿಜಯದಶಮಿಯ ಜಂಬೂ ಸವಾರಿಗೆ ಅರಮನೆ ನಗರಿ ಮೈಸೂರು ಸಜ್ಜಾಗಿದೆ. ದೇಶ-ವಿದೇಶಗಳ ಪ್ರವಾಸಿಗರು ಪ್ರಸಿದ್ಧ ಜಂಬೂ ಸವಾರಿ ವೀಕ್ಷಣೆಗೆ ಕಾತುರರಾಗಿದ್ದಾರೆ. ನಾಡಿನ ಸಂಸ್ಕೃತಿ ಪ್ರತಿಬಿಂಬಿಸುವ, ರಾಜ್ಯದ ಎಲ್ಲಾ ಜಿಲ್ಲೆಗಳ ಸ್ತಬ್ಧ ಚಿತ್ರಗಳು ಜಂಬೂಸವಾರಿಯ ಪ್ರಮುಖ ಆಕರ್ಷಣೆಯಾಗಿವೆ.
ಸಿಎಂ ಕುಮಾರಸ್ವಾಮಿ ಚಾಲನೆ: ಆ.19 ಶುಕ್ರವಾರ ಮಧ್ಯಾಹ್ನ 2.30ರಿಂದ 3.16ರವರೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಅರಮನೆ ಬಲರಾಮದ್ವಾರದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 3.40ರಿಂದ 4.10ಗಂಟೆ ವರೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಅರಮನೆ ಒಳಾವರಣದಲ್ಲಿ ದಸರಾ ಗಜಪಡೆಯ ಕ್ಯಾಪ್ಟನ್ ಅರ್ಜುನ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ಹೊತ್ತು ತರುವ ಚಾಮುಂಡೇಶ್ವರಿ ದೇವಿಯ ಉತ್ಸವಮೂರ್ತಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ.
ಜನಾಕರ್ಷಣೆಯ ಪಂಜಿನ ಕವಾಯತು ಶುಕ್ರವಾರ ರಾತ್ರಿ 7 ಗಂಟೆಗೆ ಬನ್ನಿ ಮಂಟಪ ಮೈದಾನದಲ್ಲಿ ಪಂಜಿನ ಕವಾಯತು
ಆರಂಭವಾಗಲಿದ್ದು, ರಾಜ್ಯಪಾಲ ವಜುಭಾಯಿ ವಾಲಾ, ಕವಾಯತು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸುವರು. ಬಳಿಕ 2ಗಂಟೆಗಳ ಕಾಲ ಮೈನವಿರೇಳಿಸುವ ಸಾಹಸ ಪ್ರದರ್ಶನ, ಬೈಕ್ ಸವಾರಿ, ಅಶ್ವಾರೋಹಿ ಪಡೆಗಳ ಸಾಹಸ ಪ್ರದರ್ಶನ ನಡೆಯಲಿದೆ.
ಬಿಗಿ ಬಂದೋಬಸ್ತ್
ಜಂಬೂಸವಾರಿ ಮೆರವಣಿಗೆ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಲು 5284 ಜನ ಪೊಲೀಸರನ್ನು ಬಂದೋಬಸ್ತ್ಗೆ ನಿಯೋಜಿಸಲಾಗಿದೆ. ಇದೇ ಮೊದಲ ಬಾರಿ ಮೊಬೈಲ್ ಕಮಾಂಡೋ ಭದ್ರತೆ ಒದಗಿಸಲಾಗಿದೆ.
100 ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿರುವ ಕಲಾತಂಡಗಳು
42 ಮೆರವಣಿಗೆಯ ವೈಭವ ಹೆಚ್ಚಸಲಿರುವ ಸ್ತಬಟಛಿ ಚಿತ್ರಗಳು
12 ಅಂಬಾರಿ ಹೊತ್ತು ಸಾಗುವ ಅರ್ಜುನನನ್ನೊಳಗೊಂಡ ಗಜಪಡೆ
05 ಕಿ.ಮೀ. ದೂರದ ಬನ್ನಿ ಮಂಟಪಕ್ಕೆ ಮೆರವಣಿಗೆ
ಗಿರೀಶ್ ಹುಣಸೂರು