ಎಚ್1ಎನ್1 ತಡೆಗೆ ಕ್ರಮಕ್ಕೆ ಸೂಚನೆ
Team Udayavani, Oct 15, 2018, 12:43 PM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಎಚ್1ಎನ್1 ಸೋಂಕು ಹೆಚ್ಚಾಗುತ್ತಿದ್ದು, ಈವರೆಗೆ ಇಬ್ಬರು ಮೃತರಾಗಿದ್ದಾರೆ. ಈ ಹಿನ್ನಲೆಯಲ್ಲಿ ಸೋಂಕು ತಡೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಎಚ್1ಎನ್1 ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಭಾನುವಾರ ಗೃಹಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಈವರೆಗೂ 100 ಮಂದಿಗೆ ಎಚ್1ಎನ್1 ಸೋಂಕು ತಗುಲಿದೆ. ಇಬ್ಬರು ಮೃತರಾಗಿದ್ದಾರೆ. ಈ ಕುರಿತು ಪಾಲಿಕೆ ವೈದ್ಯಾಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ. ಈಗಾಗಲೇ ಪಾಲಿಕೆ ವ್ಯಾಪ್ತಿಯಲ್ಲಿ ಜಾಹೀರಾತು, ಭಿತ್ತಿಪತ್ರಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ.
ಗಾಳಿ ಮೂಲಕ ರೋಗ ಹರಡುವುದರಿಂದ ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದರು. ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಾತನಾಡಿ, ಕೊಳಚೆ ಪ್ರದೇಶಗಳಲ್ಲಿ ಮಾತ್ರ ಎಚ್1ಎನ್1 ಬರುತ್ತದೆ ಎಂಬ ಭ್ರಮೆ ಬೇಡ. ಇದೊಂದು ಗಾಳಿಯಿಂದ ಹರಡುವ ರೋಗವಾಗಿದ್ದು, ಇಂತಹದ್ದೇ ಪ್ರದೇಶ ಎಂದು ಗುರುತಿಸುವುದು ಕಷ್ಟ.
ಇನ್ನು ಮಹದೇವಪುರ ಭಾಗದಲ್ಲಿ ಐಟಿ ಉದ್ಯೋಗಿಗಳು ಬೇರೆ-ಬೇರೆ ಕಡೆಯಿಂದ ಬರುತ್ತಿರುವುದರಿಂದ ಆ ಭಾಗದ ಆಸ್ಪತ್ರೆಗಳಲ್ಲಿ 38 ಪ್ರಕರಣ ದಾಖಲಾಗಿವೆ. ಯಾವುದೇ ವ್ಯಕ್ತಿಯಲ್ಲಿ ಎಚ್1ಎನ್1 ಸೋಂಕು ಇರುವುದು ಪತ್ತೆಯಾದರೆ, ತಕ್ಷಣ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗೆ ದಾಖಲಿಸಬೇಕು. ಜತೆಗೆ ಅವರ ಕುಟುಂಬ ವರ್ಗ ಸೂಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಈ ಬಗ್ಗೆ ಅಧಿಕಾರಿಗಳಿಗೆ ಜಾಗೃತಿ ಮೂಡಿಸಲು ತಿಳಿಸಲಾಗಿದೆ ಎಂದರು.
ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಮಾತನಾಡಿ, ಎಚ್1ಎನ್1ನಿಂದಾಗಿ ಪಾಲಿಕೆ ವ್ಯಾಪ್ತಿಗೆ ಬರುವ ಇಬ್ಬರು ಮೃತಪಟ್ಟಿದ್ದಾರೆ. ಇತರೆ ಭಾಗದಿಂದ ಚಿಕಿತ್ಸೆಗೆಂದು ಬೆಂಗಳೂರಿಗೆ ಬರುವರನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿ ತಪ್ಪು ಅಂಕಿ ಅಂಶ ವರದಿಯಾಗಿದೆ. ಇನ್ನು ಸೋಂಕಿನ ತಡೆಗೆ ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚಿಸಿದ್ದೇನೆ ಎಂದರು.
ಸಭೆಯಲ್ಲಿ ಮಹಾಲಕ್ಷ್ಮೀ ಬಡಾವಣೆ ಶಾಸಕ ಗೋಪಾಲಯ್ಯ, ರಾಜೀವ್ಗಾಂಧಿ ಆರೋಗ್ಯ ಸಂಸ್ಥೆ ನಿರ್ದೇಶಕ ನಾಗರಾಜ್, ಆರೋಗ್ಯ ಇಲಾಖೆಯ ಸಾಂಕ್ರಾಮಿಕ ರೋಗಗಳ ಜಂಟಿ ನಿರ್ದೇಶಕ ಡಾ.ಶಿವಕುಮಾರ್ ಸಜ್ಜನ್ ಶೆಟ್ಟಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು