ಬಳ್ಳಾರಿಯಲ್ಲಿ ಬಾಡಿಗೆ ಮನೆ ಪ್ರವೇಶಿಸಿದ ಉಗ್ರಪ್ಪ
Team Udayavani, Oct 20, 2018, 6:25 AM IST
ಬಳ್ಳಾರಿ: ಲೋಕಸಭೆ ಉಪಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಅವರು ಬಳ್ಳಾರಿಯಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದು, ವಿಜಯದಶಮಿಯಂದು ಗೃಹಪ್ರವೇಶ ಮಾಡಿದ್ದಾರೆ.
ಉಗ್ರಪ್ಪ ಹೊರಗಿನವರು, ಅಡ್ರೆಸ್ ಇಲ್ಲದವರು ಎಂದು ಬಿಜೆಪಿಯವರ ಆರೋಪಕ್ಕೆ ಗುರಿಯಾಗಿದ್ದ ವಿ.ಎಸ್. ಉಗ್ರಪ್ಪ, ಮನೆ ಮಾಡಲು ನಿರ್ಧರಿಸಿ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದಾರೆ. ಅಲ್ಲದೆ ವಿಜಯ ದಶಮಿಯಂದು ಗೃಹಪ್ರವೇಶ ಮಾಡುವ ಮೂಲಕ ಪ್ರತಿಸ್ಪರ್ಧಿ ಮತ್ತವರ ಬೆಂಬಲಿಗರ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ.
ಇಲ್ಲಿನ ಕಪ್ಪಗಲ್ ರಸ್ತೆಯ ಸರ್.ಎಂ.ವಿಶ್ವೇಶ್ವರಯ್ಯ ನಗರದ 1ನೇ ಅಡ್ಡರಸ್ತೆಯಲ್ಲಿರುವ ಎರಡು ಅಂತಸ್ತಿನ ಮನೆಯನ್ನು ಬಾಡಿಗೆಗೆ ಪಡೆದು ಇಲ್ಲಿಯೇ ಉಳಿಯಲು ನಿರ್ಧರಿಸಿದ್ದಾರೆ.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಗ್ರಪ್ಪ, “ನಾನು ಇನ್ಮುಂದೆ ಇಲ್ಲೇ ಇರುವೆ. ಅಡ್ರೆಸ್ ಇಲ್ಲದವರು ಎನ್ನುತ್ತಿದ್ದವರಿಗೆ ಅಡ್ರೆಸ್ ತಿಳಿಸುವ ಕಾರಣಕ್ಕೆ ಮನೆಯನ್ನು ಬಾಡಿಗೆಗೆ ಪಡೆದಿದ್ದೇನೆ. ಇನ್ಮುಂದೆ ನನಗೆ ಇಲ್ಲಿಯದೇ ಅಡ್ರೆಸ್. ಚುನಾವಣೆಯಲ್ಲಿ ಸೋತರೂ ಇಲ್ಲೇ ಇರುವೆ. ನನ್ನ ಪ್ರವಾಸ ಬಳ್ಳಾರಿಯತ್ತ ಕಡ್ಡಾಯವಾಗಿ ಇದ್ದೇ ಇರುತ್ತದೆ’ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ