ಶಿಕ್ಷಕರ ನೇಮಕಾತಿಗೆ ಮೀಸಲಾತಿ ಆದೇಶ
Team Udayavani, Oct 20, 2018, 6:35 AM IST
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಯ 6ರಿಂದ 8ನೇ ತರಗತಿಯಲ್ಲಿ ಖಾಲಿ ಇರುವ ಹತ್ತು ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮೀಸಲಾತಿ ಕುರಿತು ಆದೇಶ ಹೊರಡಿಸಿದೆ.
ಇತರ ಹಿಂದುಳಿದ ವರ್ಗಗಳಿಗೆ ಗುರುತಿಸಲ್ಪಟ್ಟ, ಆದರೆ ಆಯಾ ಪ್ರವರ್ಗಗಳ ಅರ್ಹ ಅಭ್ಯರ್ಥಿಗಳ ಲಭ್ಯತೆ ಕೊರತೆಯಿಂದ ಭರ್ತಿ ಮಾಡಲಾಗದ ಸ್ಥಾನಗಳನ್ನು ಬ್ಯಾಕ್ಲಾಗ್ ಎಂದು ಪರಿಗಣಿಸಿ ಮುಂದುವರಿಸಬೇಕು. ಈ ಸ್ಥಾನಗಳನ್ನು ಮೀಸಲಾತಿಯಿಂದ ವಿಮುಕ್ತಿಗೊಳಿಸುವಂತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ.
ಮುಂದಿನ ನೇರ ನೇಮಕಾತಿ ಸಂದರ್ಭದಲ್ಲಿ ಹೊಸದಾಗಿ ಲಭ್ಯವಾದ ಸ್ಥಾನ ಮತ್ತು ಬ್ಯಾಕ್ಲಾಗ್ ಸ್ಥಾನಗಳ ಪಟ್ಟಿಯನ್ನು
ಪ್ರತ್ಯೇಕವಾಗಿ ಪ್ರಕಟಿಸಬೇಕು. ಹೊಸದಾಗಿ ಲಭ್ಯವಾದ ಸ್ಥಾನವನ್ನು ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ವರ್ಗೀಕರಣ ಮಾಡಿ ಪ್ರಕಟಿಸಬೇಕು. ಆದರೆ, ಬ್ಯಾಕ್ಲಾಗ್ ಸ್ಥಾನಗಳನ್ನು ಮತ್ತೂಮ್ಮೆ ವರ್ಗೀಕರಣ ಮಾಡುವಂತಿಲ್ಲ. 2015ರ ಫೆ.5ರಂದು ಹೊರಡಿಸಿದ್ದ ಆದೇಶದಲ್ಲಿ ತಿಳಿಸಿರುವಂತೆ ನೇರ ನೇಮಕಾತಿಯಲ್ಲಿ ಇತರ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳ ಕೊರತೆಯಿಂದ ಭರ್ತಿ ಮಾಡದೆ ಮುಂದಕ್ಕೆ ಕೊಂಡೊಯ್ಯಲಾದ ಸ್ಥಾನಗಳಿಗೂ ಈ ಆದೇಶ ಅನ್ವಯಿಸುತ್ತದೆ ಎಂದು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
MUST WATCH
ಹೊಸ ಸೇರ್ಪಡೆ
Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ: ರಾಜಸ್ಥಾನಿ ಮಹಿಳೆ !
Kolkata Raiders ಕೋಚ್ ಬಗ್ಗೆ ಆಟಗಾರ ಡೇವಿಡ್ ವೀಸ್ ಆರೋಪ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್