ನ.5ರಿಂದ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಪ್ರವಾಸ
Team Udayavani, Oct 20, 2018, 6:20 AM IST
ಶೃಂಗೇರಿ: ಧರ್ಮ ಪ್ರಚಾರಾರ್ಥ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ನ.5 ರಿಂದ ರಾಜ್ಯ ಹಾಗೂ ಹೊರ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿ ಹೇಳಿದರು.
ಮಠದ ಪ್ರವಚನ ಮಂದಿರದಲ್ಲಿ ಶುಕ್ರವಾರ ನಡೆದ ಶ್ರೀಮದ್ ವಾಲ್ಮೀಕಿ ರಾಮಾಯಣದ ಶ್ರೀರಾಮ ಪಟ್ಟಾಭಿಷೇಕ ಗ್ರಂಥವನ್ನು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಪಠಿಸಿದ ನಂತರ ತಮ್ಮ ಆಶೀರ್ವಚನದಲ್ಲಿ ಈ ವಿಷಯ ತಿಳಿಸಿದರು. ಶ್ರೀಗಳು ಉತ್ತರ ಭಾರತ, ಮಹಾರಾಷ್ಟ್ರದಲ್ಲಿ ಸಂಚರಿಸಲಿದ್ದು, ಶಿವರಾತ್ರಿಯಂದು ಶಾರದಾ ಪೀಠಕ್ಕೆ ಆಗಮಿಸಲಿದ್ದಾರೆ.
ಶಂಕರ ಭಗವತ್ಪಾದರು ಅದ್ವೈತ ಸಿದ್ಧಾಂತವನ್ನು ಪ್ರಚಾರ ಮಾಡಿದ್ದಾರೆ. ಅದನ್ನು ಪೀಠದ ಶಿಷ್ಯರು ಮುಂದುವರಿಸಿಕೊಂಡು ಬಂದಿದ್ದಾರೆ. ಶಂಕರರು ಕಾಲ್ನಡಿಗೆಯಲ್ಲಿ ತೆರಳಿ ಧರ್ಮ ಪ್ರಚಾರ ಕೈಗೊಂಡಿದ್ದರು. ನಮ್ಮ ಶಿಷ್ಯರಾದ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು ಗುರುಭಕ್ತಿ, ವಿನಯ ಸಂಪನ್ನ, ಶಾಸ್ತ್ರ ಪಂಡಿತರಾಗಿದ್ದಾರೆ. ಅದ್ವೈತ ಸಿದ್ಧಾಂತ ಪ್ರಚುರ ಪಡಿಸುವ ಉದ್ದೇಶದಿಂದ ಈ ಬಾರಿ ಉತ್ತರ ಭಾರತಕ್ಕೆ ತೆರಳಲಿದ್ದಾರೆ ಎಂದರು. ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ, ಶ್ರೀಮಠದ ಆಡಳಿತಾ ಧಿಕಾರಿ ಗೌರಿಶಂಕರ್, ಅ ಧಿಕಾರಿಗಳಾದ ಶಿವಶಂಕರ ಭಟ್, ಶ್ರೀಪಾದ ರಾವ್, ರಾಮಕೃಷ್ಣಯ್ಯ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ