ಮಹಿಳಾ ಪೊಲೀಸರಿಗೆ ಪ್ಯಾಂಟ್, ಶರ್ಟ್ ಕಡ್ಡಾಯ
Team Udayavani, Oct 21, 2018, 6:55 AM IST
ಬೆಂಗಳೂರು:ರಾಜ್ಯದ ಮಹಿಳಾ ಪೊಲೀಸರಿಗೆ ಇನ್ಮುಂದೆ ಪ್ಯಾಂಟ್ ಶರ್ಟ್ ಕಡ್ಡಾಯ.ಅಷ್ಟೇ ಅಲ್ಲ, ಹಣೆಗೆ ಚಿಕ್ಕದಾದ ಬಿಂದಿ, ಕೂದಲಿಗೆ ಕಪ್ಪು ಬಣ್ಣದ ಹೇರ್ಪಿನ್, ಕೈಗೆ ಸಣ್ಣ ಗಾತ್ರದ ಬಳೆ ಹಾಗೂ ಕಿವಿಯೋಲೆ ಧರಿಸಬೇಕು. ತಲೆಗೆ ಹೂ ಮುಡಿಯುವಂತಿಲ್ಲ.ರಾಜ್ಯ ಮಹಿಳಾ ಪೊಲೀಸರಿಗೆ ಡ್ರೆಸ್ಕೋಡ್ ಕಡ್ಡಾಯ ಮಾಡಿರುವ ಪೊಲೀಸ್ ಇಲಾಖೆ. ಇಂತದ್ದೇ ಸೈಜಿನ ಬಳೆ, ಕಿವಿಯೋಲೆ ಧರಿಸುವಂತೆಯೂ ಆದೇಶ ಹೊರಡಿಸಿದೆ. ಪೊಲೀಸ್ ಪೇದೆ ಹಾಗೂ ಅಧಿಕಾರಿಗಳಿಗೆ ಪ್ರತ್ಯೇಕ ನಿಯಮ ರೂಪಿಸಲಾಗಿದೆ.
ಕರ್ತವ್ಯ ನಿರತ ಮಹಿಳಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಸಮವಸ್ತ್ರ ಹಾಗೂ ಕೇಶವಿನ್ಯಾಸ, ಬಳೆ ಇನ್ನಿತರೆ ಆಭರಣಗಳನ್ನು ಧರಿಸುವ ಸಂಬಂಧ ಏಕರೂಪ ನಿಯಮಗಳನ್ನು ಕಡ್ಡಾಯಗೊಳಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು ಸುತ್ತೋಲೆ ಹೊರಡಿಸಿದ್ದಾರೆ.ಸೀರೆ ಧರಿಸಿ ಮಹಿಳಾ ಸಿಬ್ಬಂದಿ ಕರ್ತವ್ಯ ನಿರ್ವಹಣೆ ಹಾಗೂ ಆರೋಪಿಗಳನ್ನು ಬೆನ್ನಟ್ಟಿ ಹಿಡಿಯುವ ಸಂಧರ್ಭಗಳಲ್ಲಿ ಉಂಟಾಗುತ್ತಿದ್ದ ತೊಂದರೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಏಕರೂಪದ ಡ್ರೆಸ್ ಕೋಡ್ ಜಾರಿಗೊಳಿಸಲಾಗಿದೆ.
ಹೊಸ ನಿಯಮಗಳಂತೆ ಕರ್ತವ್ಯ ನಿರತ ಮಹಿಳಾ ಪೊಲೀಸ್ ಅಧಿಕಾರಿಗಳು, ಶರ್ಟ್ ಹಾಗು ಪ್ಯಾಂಟ್ ಧರಿಸಬೇಕು (ಇನ್ಶರ್ಟ್). ಜತೆಗೆ, ಬ್ರೌನ್ ಆಕ್ಸ್ಫರ್ಡ್ ಶೂ, ಬ್ರೌನ್ ಕ್ಲಸ್ಟೆಡ್ ಲೆದರ್ ಶೂ, ಪೀಕ್ ಕ್ಯಾಪ್, ಬ್ಲೂ ಬ್ಯಾರೆಟ್ ಕ್ಯಾಪ್ ವಿತ್ ಬ್ಯಾಡ್ಜ್ಗಳನ್ನು ಧರಿಸಬೇಕು. ಮಹಿಳಾ ಪೇದೆಗಳು ಬ್ಲಾಕ್ ಅÂಕ್ಸ್ಫರ್ಡ್ ಶೂ, ಬ್ಲಾಕ್ ಕ್ಲಸ್ಟೆಡ್ ಲೆದರ್ ಬೆಲ್ಟ್, ಹಾಗೂ ಖಾಕಿ ಬ್ಯಾರೆಟ್ ಕ್ಯಾಪ್ಗ್ಳನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮೂರು ತಿಂಗಳ ಮೇಲ್ಪಟ್ಟ ಗರ್ಭಿಣಿ ಅಧಿಕಾರಿಗಳು ಹಾಗೂ ಪೇದೆಗಳು ವೈದ್ಯರ ಪ್ರಮಾಣಪತ್ರ ಸಲ್ಲಿಸಿ ಹೆರಿಗೆ ರಜೆಗೆ ತೆರಳುವವರೆಗೆ ಇನ್ಶರ್ಟ್ ಧರಿಸದೇ ಇರಲು ಅವಕಾಶ ನೀಡಲಾಗಿದೆ. ಹೆರಿಗೆ ರಜೆ ಪೂರ್ಣಗೊಂಡ ಬಳಿಕ ಡ್ರೆಸ್ಕೋಡ್ ಪಾಲಿಸಬೇಕು ಎಂದು ಸೂಚಿಸಲಾಗಿದೆ.
ಹಣೆಯ ಬಿಂದಿ ಚಿಕ್ಕದಿರಲಿ!
ಮಹಿಳಾ ಪೊಲೀಸ್ ಅಧಿಕಾರಿಗಳು ಮತ್ತು ಪೇದೆಗಳು ಕಪ್ಪು ಬಣ್ಣದ ಹೇರ್ ಪಿನ್, ಸಣ್ಣ ಗಾತ್ರದ ಲೋಹದ ಬಳೆಗಳನ್ನೇ ಧರಿಸಬೇಕು. ಕಿವಿಯೋಲೆ ಮತ್ತು ಹಣೆಬಿಂದಿಯನ್ನು ಧರಿಸುವಂತಿದ್ದಲ್ಲಿ ಚಿಕ್ಕ ಮಾದರಿ(ಸ್ಮಾಲ್ ಸ್ಟಡ್)ಯ ಒಂದು ಜೊತೆ ಓಲೆಯನ್ನು ಧರಿಸಬಹುದು.ತಲೆಗೂದಲು ಹರಡದಂತೆ ಒಟ್ಟುಗೂಡಿಸಿ ತುರುಬು ಕಟ್ಟಿಕೊಂಡು ಕಪ್ಪು ಬಣ್ಣದ ನೆಟೆಡ್ ಬ್ಯಾಂಡ್ನ್ನು ಸುತ್ತಬೇಕು. ಕಪ್ಪು ಬಣ್ಣದ ಹೇರ್ಪಿನ್ ಅಥವಾ ಹೇರ್ ಬ್ಯಾಂಡ್ಅನ್ನು ಮಾತ್ರ ಧರಿಸಬೇಕು. ಇತರೆ ಬಣ್ಣದ ಹೇರ್ಪಿನ್, ಹೇರ್ ಬ್ಯಾಂಡ್, ಹೂ ಮತ್ತು ಇತರ ಪರಿಕರಗಳನ್ನು ಧರಿಸುವಂತಿಲ್ಲ. ಕೂದಲಿಗೆ ಬಣ್ಣ(ಡೈ)ಹಚ್ಚುವಂತಿದ್ದಲ್ಲಿ ಕಪ್ಪು ಬಣ್ಣವನ್ನು ಮಾತ್ರ ಬಳಸಬೇಕು. ಬೇರೆ ಬಣ್ಣ(ಡೈ) ಹಚ್ಚುವಂತಿಲ್ಲ ಎಂದು ನಿರ್ದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ