“ಕನ್ನಡದ ಜಗದ್ಗುರು”ವಾದ ಸಿಂದಗಿಯ ಸಿದ್ದರಾಮ


Team Udayavani, Oct 21, 2018, 6:10 AM IST

181020kpn57.jpg

ವಿಜಯಪುರ: ಕನ್ನಡದ ಜಗದ್ಗುರು ಎಂದೇ ಖ್ಯಾತಿ ಪಡೆದಿದ್ದ ಗದಗ-ಡಂಬಳ ತೋಂಟದಾರ್ಯ ಮಠದ ಪೀಠಾಧಿಪತಿ ಡಾ.ಸಿದ್ದಲಿಂಗ ಶ್ರೀಗಳು ಬಸವೈಕ್ಯರಾದ ಸುದ್ದಿ ತಿಳಿಯುತ್ತಲೇ ಶ್ರೀಗಳ ತವರು ಜಿಲ್ಲೆ ವಿಜಯಪುರದಲ್ಲಿ ಶೋಕ ಮಡುಗಟ್ಟಿದೆ. ಹುಟ್ಟೂರು ಸಿಂದಗಿ ಪಟ್ಟಣದ ಹಿರೇಮಠದಲ್ಲಿ ದುಃಖದ ಕಟ್ಟೆ ಒಡೆದಿದೆ.

1949ರ ಫೆ.21ರಂದು ಸಿಂದಗಿಯ ಹಿರೇಮಠದ ಮರಯ್ಯ ಹಾಗೂ ಶಂಕರಮ್ಮ ಅವರ ದ್ವಿತೀಯ ಪುತ್ರನಾಗಿ ಜನಿಸಿದ್ದ ಸಿದ್ದರಾಮ ಎಂಬ ಮಗು ಭವಿಷ್ಯದಲ್ಲಿ ಕನ್ನಡ ನಾಡೇ ಕನ್ನಡದ ಜಗದ್ಗುರು ಎಂದು ಕರೆಯುವ ಮಟ್ಟಿಗೆ ಬೆಳೆದು ನಿಂತಿದ್ದನ್ನು ತವರಿನ ಜನ ಸ್ಮರಿಸುತ್ತಾರೆ. ಹೆತ್ತವರ ಊರು ಸಿಂದಗಿ ಪಟ್ಟಣವಾದರೂ, ಗರ್ಭಿಣಿಯಾಗಿದ್ದ ತಾಯಿ ಶಂಕರಮ್ಮ ಅವರು ತಮ್ಮ ಅಕ್ಕ ಶಿವಬಯಿ ಅವರ ಊರು ಕೋರವಾರಕ್ಕೆ ಹೋದಾಗ ಸಿದ್ದರಾಮರ ಹೆರಿಗೆ ಆಗಿತ್ತು. ಹೀಗಾಗಿ, ಕೋರವಾರದ ಜನರು ಶ್ರೀಗಳು ನಮ್ಮೂರಲ್ಲಿ ಜನ್ಮ ಪಡೆದ ಪುಣ್ಯಭೂಮಿ ಎಂದು, ಇದನ್ನೇ ಅವರ ಹುಟ್ಟೂರು, ತವರು ಎಂದು ಹೆಮ್ಮೆಯಿಂದ ಹೇಳುತ್ತಾರೆ.

ಸಿದ್ದರಾಮರು ಮಲ್ಲಿಕಾರ್ಜುನ ಎಂಬ ಅಣ್ಣ, ಕುಮಾರಸ್ವಾಮಿ, ಪತ್ರಕರ್ತ ಶಾಂತು ಹಿರೇಮಠ, ಸಿಂದಗಿ-ಹಾವೇರಿ ಮಠದ ಪೀಠಾಧಿಪತಿ ಶಿವಾನಂದ ಶ್ರೀಗಳು ಹಾಗೂ ಗಂಗಾಬಾಯಿ ಮತ್ತು ನಿರ್ಮಲಾ ಎಂಬ ಸಹೋದರಿಯರನ್ನು ಹೊಂದಿದ್ದ ದೊಡ್ಡ ಕುಟುಂಬದಿಂದ ಬಂದವರು.

ಸಿಂದಗಿ ಪಟ್ಟಣದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಲೇ ಎಸ್‌.ಎಂ.ಮಣೂರ ಅವರ ಮೆಚ್ಚಿನ ಶಿಷ್ಯನಾಗಿ ಹೊರ ಹೊಮ್ಮಿದ್ದ ಸಿದ್ದರಾಮರು, ಶಿಕ್ಷಣದ ಪಠ್ಯ ಪುಸ್ತಕವನ್ನೆಲ್ಲ ಬಾಯಿ ಪಾಠ ಮಾಡಿ ನಿರರ್ಗಳವಾಗಿ ಹೇಳುವ ಛಾತಿ ಹೊಂದಿದ್ದರು. ನಂತರ, ಹುಬ್ಬಳ್ಳಿಯ ಮೂರುಸಾವಿರ ಮಠದ ಗಂಗಾಧರ ರಾಜಯೋಗೀಂದ್ರ ಶ್ರೀಗಳ ಕೃಪೆಯಲ್ಲಿ ಉನ್ನತ ಶಿಕ್ಷಣ ಪಡೆದು, ಕನ್ನಡದಲ್ಲಿ ಪ್ರಾವೀಣ್ಯತೆ ಪಡೆದರು. ಅಷ್ಟರಲ್ಲಾಗಲೇ ಅವರು ಸಿಂದಗಿ ಊರಿನ ಹಿರೇಮಠದ ಶಾಂತವೀರ ಶ್ರೀಗಲು ಲಿಂಗೈಕ್ಯರಾದ ಕಾರಣ ಪಟ್ಟಾ ಧಿಕಾರಕ್ಕೆ ನಿಯೋಜಿತರಾಗಿದ್ದರು.

ಆದರೆ, ಸಿದ್ದರಾಮರು ಶಿಸ್ತು, ಸಂಯಮ, ಬದ್ಧತೆ, ಆಧ್ಯಾತ್ಮಿಕ ಚಿಂತನೆ, ಸಾಹಿತ್ಯ ಅಧ್ಯಯನದ ಗೀಳು, ವಿಜ್ಞಾನ, ಮನೋವಿಜ್ಞಾನ, ಭೂಗರ್ಭ, ಗಣಿತ, ವಚನ ಸಾಹಿತ್ಯದ ಸಂಶೋಧನೆಯಲ್ಲಿ ಆಳವಾದ ಅರಿವು, ಎಲ್ಲಕ್ಕಿಂತ ಹೆಚ್ಚಾಗಿ ಕನ್ನಡದ ಹುಚ್ಚು ಹಿಡಿದವರಂತೆ ಅದ್ಭುತ ಪ್ರತಿಭೆ ಸಂಪಾದಿಸಿದ್ದರು. ಇವರಲ್ಲಿನ ಪ್ರತಿಭೆಯನ್ನು ಗುರುತಿಸಿದ ಮೂರುಸಾವಿರ ಮಠದ ಗಂಗಾಧರ ರಾಜಯೋಗೀಂದ್ರರು, ಸಿದ್ದರಾಮ ದೇವರನ್ನು ಸಿದ್ದಲಿಂಗ ಮಹಾಸ್ವಾಮಿಗಳೆಂದು ನಾಮಕರಣ ಮಾಡಿ ಗದಗ ತೋಂಟದಾರ್ಯ ಮಠಕ್ಕೆ ಪೀಠಾಧಿಕಾರಿಗಳನ್ನಾಗಿ ನೇಮಿಸಿದರು.

ನಿಯೋಜಿತ ಸಿಂದಗಿ ಹಿರೇಮಠದ ಬದಲಾಗಿ ಗದಗ ತೋಂಟದಾರ್ಯ ಮಠಕ್ಕೆ ಪಟ್ಟಾಧಿಕಾರಕ್ಕೆ ನೇಮಿಸಿದಾಗ ಸಿಂದಗಿ ಹಿರೇಮಠದ ಭಕ್ತರು ಸಿಂದಗಿ ಮಠವನ್ನು ಅನಾಥವಾಗಿ ಮಾಡಿದಿರಿ ಎಂದು ಮರುಗಿದರು. ಬಳಿಕ, ಶ್ರೀಗಳ ಪೂರ್ವಾಶ್ರಮದ ತಮ್ಮ ಶಿವಾನಂದ ಶ್ರೀಗಳನ್ನು ಸಿಂದಗಿ-ಹಾವೇರಿ ಮಠಕ್ಕೆ ಪೀಠಕ್ಕೆ ನೇಮಿಸಲಾಯಿತು. ಗದಗ-ಡಂಬಳ ಮಠಕ್ಕೆ ಪೀಠಾ ಧೀಕಾರಕ್ಕೆ ಬರುತ್ತಲೇ ಶ್ರೀಗಳಲ್ಲಿದ್ದ ವೈಚಾರಿಕ ಪ್ರಜ್ಞೆ ಜಗತ್ತಿಗೆ ಪರಿಚಯವಾಗತೊಡಗಿತು. ಕನ್ನಡದಲ್ಲಿ ಅದರಲ್ಲೂ, ವಚನ ಸಾಹಿತ್ಯದ ವೈಚಾರಿಕ ವಿಷಯಗಳನ್ನು ವೈಜ್ಞಾನಿಕ ಪ್ರಜ್ಞೆ ಮೂಲಕ ವಿಶ್ಲೇಷಿಸುವ ಪರಿ ನಾಡಿನ ಕನ್ನಡ ಸಾಹಿತ್ಯ ವಲಯದ ಗಣ್ಯರನ್ನೂ ಹುಬ್ಬೇರಿಸುವಂತೆ ಮಾಡಿತು.

ತಮ್ಮ ಪ್ರವಚನದಿಂದ ಬಂದ ಹಣವನ್ನು ಮಠಕ್ಕೆ ಖರ್ಚು ಮಾಡದೆ, ಅಪ್ರಕಟಿತ ವಚನ ಸಾಹಿತ್ಯ ಮುದ್ರಣಕ್ಕೆ ವಿನಿಯೋಗಿಸಿದರು. ಲಿಂಗಾಯತ ಧರ್ಮ ಪ್ರಸಾರಕ್ಕಾಗಿ ಪ್ರತ್ಯೇಕ ಟ್ರಸ್ಟ್‌ ರಚಿಸಿ ಅದರ ಮೂಲಕ ಸಾಹಿತ್ಯದ ಪ್ರಸಾರಕ್ಕೆ ತಮ್ಮನ್ನು ಮುಡಿಪಾಗಿ ಇರಿಸಿಕೊಂಡರು. ಪರಿಣಾಮ ಡಾ| ದ.ರಾ.ಬೇಂದ್ರೆ, ಬೀಚಿ, ಕಾರಂತ ಅವರಂಥ ನಾಡಿನ ದಿಗ್ಗಜ ಸಾಂಸ್ಕೃತಿಕ ಅತಿರಥ-ಮಹಾರಥರು ಇವರ ಒಡನಾಟಕ್ಕೆ ಬಂದರು.

ಸಿದ್ದಲಿಂಗ ಜಗದ್ಗುರುಗಳಿಗೆ ವಿವಿಧ ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ ಪದವಿ ನೀಡಿ ಹಿರಿಮೆ ಹೆಚ್ಚಿಸಿಕೊಂಡವು. ಎಲ್ಲಕ್ಕಿಂತ ಹೆಚ್ಚಾಗಿ ಕನ್ನಡ ನಾಡಿನ ಜನತೆ ಡಾ| ಸಿದ್ದಲಿಂಗ ಶ್ರೀಗಳನ್ನು ಕನ್ನಡದ ಜಗದ್ಗುರು ಎಂದೇ ಪ್ರೀತಿ, ಅಭಿಮಾನದಿಂದ ಕರೆದರು.

– ಜಿ.ಎಸ್‌. ಕಮತರ

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.