ಮುರುಘಾ ಶರಣರಿಂದ ಶೂನ್ಯ ಪೀಠಾರೋಹಣ
Team Udayavani, Oct 21, 2018, 6:05 AM IST
ಚಿತ್ರದುರ್ಗ: ಮುರುಘಾಮಠದ ಡಾ| ಶಿವಮೂರ್ತಿ ಮುರುಘಾ ಶರಣರ ಶೂನ್ಯಪೀಠಾರೋಹಣ ಶನಿವಾರ ವಿಜೃಂಭಣೆಯಿಂದ ನಡೆಯಿತು.
ಶೂನ್ಯ ಪರಂಪರೆಯ ಪದ್ಧತಿಯಂತೆ ಮುರುಘಾ ಮಠದ ಪ್ರಾಂಗಣದ ಅನುಭವ ಮಂಟಪದಲ್ಲಿ ಮುರುಘಾ ಶರಣರು ರುದ್ರಾಕ್ಷಿ ಕಿರೀಟ ಧರಿಸಿ, ಪೀಠಾರೋಹಣ ಮಾಡಿದರು. ವೈಚಾರಿಕತೆಯಿಂದ ಗುರುತಿಸಿಕೊಂಡಿರುವ ಮುರುಘಾ ಮಠದ ಶೂನ್ಯ ಪೀಠಾರೋಹಣ ಮಹತ್ವ ಪಡೆದುಕೊಂಡಿದೆ. ಇದೇ ಸಂದರ್ಭದಲ್ಲಿ ಬಸವಣ್ಣ ಹಾಗೂ ಶೂನ್ಯಪೀಠದ ಪ್ರಥಮ ಅಧ್ಯಕ್ಷ ಅಲ್ಲಮಪ್ರಭುದೇವರ ಭಾವಚಿತ್ರ ಮತ್ತು ವಚನ ಹಸ್ತಪ್ರತಿಗಳ ಮೆರವಣಿಗೆಯೂ ನಡೆಯಿತು.
ಡಾ| ಶಿವಮೂರ್ತಿ ಮುರುಘಾ ಶರಣರು, ಶ್ರೀಮಠದ ಕತೃì ಮುರುಗಿ ಶಾಂತವೀರ ಸ್ವಾಮಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಚಿನ್ನದ ಕಿರೀಟ, ಇತರ ಎಲ್ಲ ಆಭರಣಗಳನ್ನೂ ಭಕ್ತರ ಕೈಗೆ ನೀಡಿದರು. ನಂತರ ರುದ್ರಾಕ್ಷಿ ಕಿರೀಟ ಧರಿಸಿ ವಚನ ಕೃತಿಯನ್ನು ಹಿಡಿದುಕೊಂಡು ನಾಡಿನ ಮಠಾಧೀಶರು, ಸಾಧಕರು, ಭಕ್ತರು, ಉತ್ಸವ ಸಮಿತಿ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಭಕ್ತ ಸಮೂಹದ ಸಮ್ಮುಖದಲ್ಲಿ ಅನುಭವ ಮಂಟಪದ ಶೂನ್ಯ ಪೀಠಾರೋಹಣ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ