ಒಂದೂವರೆ ವರ್ಷದ ನಂತರ ಹೇಳಿದ್ದೇನೆ, ಎಷ್ಟೋ ಕೇಸ್ ಗಳು ಮುಚ್ಚಿ ಹೋಗಿವೆ
Team Udayavani, Oct 21, 2018, 5:04 PM IST
ಬೆಂಗಳೂರು:ದಕ್ಷಿಣ ಭಾರತದ ಪ್ರಸಿದ್ದ ನಟ ಅರ್ಜುನ್ ಸರ್ಜಾ ವಿರುದ್ದ ಮೀ ಟೂ ಅಭಿಯಾನದಡಿಯಲ್ಲಿ ಕಿರುಕುಳ ಆರೋಪ ಮಾಡಿದ್ದ ನಟಿ ಶ್ರುತಿ ಹರಿಹರನ್ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮತ್ತೆ ಆರೋಪಗಳ ಮಳೆಗೈದಿದ್ದಾರೆ.
ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಶ್ರುತಿ , ಅರ್ಜುನ್ ಸರ್ಜಾ ನನ್ನನ್ನು ಡಿನ್ನರ್ ಗೆ ಬಾ, ರೆಸಾರ್ಟ್ ಗೆ ಬಾ ಎಂದು ಕರೆದಿದ್ದರು. ಆಗ ನಾನು ನೋ ಎಂದಿದ್ದೆ. ಘಟನೆ ನಡೆದಾಗ ನನಗೆ ಹೇಗೆ ಪ್ರತಿಕ್ರಿಯೆ ಮಾಡಬೇಕು ಎಂದು ತೋಚಲಿಲ್ಲ. ನಾನು ಒಂದುವರೆ ವರ್ಷದ ನಂತರ ಹೇಳಿದ್ದೇನೆ, ಎಷ್ಟೋ ಕೇಸ್ ಗಳು ಮುಚ್ಚಿ ಹೋಗಿವೆ ಎಂದರು.
ಚಿತ್ರರಂಗದಲ್ಲಿ ನಾನು ಸಾಕಷ್ಟು ಹಿಂಸೆ ಅನುಭವಿಸಿದ್ದೇನೆ. ಕಾಸ್ಟಿಂಗ್ ಕೌಚ್ ನಲ್ಲಿ ಹಲವರ ಹೆಸರು ಹೇಳಿದ್ದೆ. ಈಗ ನಡೆಯುತ್ತಿರುವ ಮೀ ಟೂ ಅಭಿಯಾನದಿಂದ ನನಗೆ ಧೈರ್ಯ ಬಂದಿದೆ. ಅರ್ಜುನ್ ಸರ್ಜಾ ವಿರುದ್ದ ಕಾನೂನು ರೀತಿಯ ಹೋರಾಟ ಮಾಡುತ್ತೇನೆ ಎಂದು ಗುಡುಗಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ದರ್ಶನ್, ಸುದೀಪ್ ನನ್ನೊಂದಿಗೆ ಗೌರವದಿಂದ ನಡೆದುಕೊಂಡಿದ್ದಾರೆ. ನನಗೆ ಯಾವುದೇ ಪಬ್ಲಿಸಿಟಿ ಅಗತ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ