ಒಂದೂವರೆ ವರ್ಷದ ನಂತರ ಹೇಳಿದ್ದೇನೆ, ಎಷ್ಟೋ ಕೇಸ್ ಗಳು ಮುಚ್ಚಿ ಹೋಗಿವೆ
Team Udayavani, Oct 21, 2018, 5:04 PM IST
ಬೆಂಗಳೂರು:ದಕ್ಷಿಣ ಭಾರತದ ಪ್ರಸಿದ್ದ ನಟ ಅರ್ಜುನ್ ಸರ್ಜಾ ವಿರುದ್ದ ಮೀ ಟೂ ಅಭಿಯಾನದಡಿಯಲ್ಲಿ ಕಿರುಕುಳ ಆರೋಪ ಮಾಡಿದ್ದ ನಟಿ ಶ್ರುತಿ ಹರಿಹರನ್ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮತ್ತೆ ಆರೋಪಗಳ ಮಳೆಗೈದಿದ್ದಾರೆ.
ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಶ್ರುತಿ , ಅರ್ಜುನ್ ಸರ್ಜಾ ನನ್ನನ್ನು ಡಿನ್ನರ್ ಗೆ ಬಾ, ರೆಸಾರ್ಟ್ ಗೆ ಬಾ ಎಂದು ಕರೆದಿದ್ದರು. ಆಗ ನಾನು ನೋ ಎಂದಿದ್ದೆ. ಘಟನೆ ನಡೆದಾಗ ನನಗೆ ಹೇಗೆ ಪ್ರತಿಕ್ರಿಯೆ ಮಾಡಬೇಕು ಎಂದು ತೋಚಲಿಲ್ಲ. ನಾನು ಒಂದುವರೆ ವರ್ಷದ ನಂತರ ಹೇಳಿದ್ದೇನೆ, ಎಷ್ಟೋ ಕೇಸ್ ಗಳು ಮುಚ್ಚಿ ಹೋಗಿವೆ ಎಂದರು.
ಚಿತ್ರರಂಗದಲ್ಲಿ ನಾನು ಸಾಕಷ್ಟು ಹಿಂಸೆ ಅನುಭವಿಸಿದ್ದೇನೆ. ಕಾಸ್ಟಿಂಗ್ ಕೌಚ್ ನಲ್ಲಿ ಹಲವರ ಹೆಸರು ಹೇಳಿದ್ದೆ. ಈಗ ನಡೆಯುತ್ತಿರುವ ಮೀ ಟೂ ಅಭಿಯಾನದಿಂದ ನನಗೆ ಧೈರ್ಯ ಬಂದಿದೆ. ಅರ್ಜುನ್ ಸರ್ಜಾ ವಿರುದ್ದ ಕಾನೂನು ರೀತಿಯ ಹೋರಾಟ ಮಾಡುತ್ತೇನೆ ಎಂದು ಗುಡುಗಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ದರ್ಶನ್, ಸುದೀಪ್ ನನ್ನೊಂದಿಗೆ ಗೌರವದಿಂದ ನಡೆದುಕೊಂಡಿದ್ದಾರೆ. ನನಗೆ ಯಾವುದೇ ಪಬ್ಲಿಸಿಟಿ ಅಗತ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು
MUST WATCH
ಹೊಸ ಸೇರ್ಪಡೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ