ದೊಡ್ಡಗೌಡ್ರು, ಸಿದ್ದರಾಮಯ್ಯರದ್ದು ಆಚಾರವಿಲ್ಲದ ನಾಲಿಗೆ: ಸಿ.ಟಿ.ರವಿ
Team Udayavani, Oct 22, 2018, 6:10 AM IST
ಶಿವಮೊಗ್ಗ: ದೀಪಾವಳಿ ಹಬ್ಬ ಆದ ಮೇಲೆ ಇಲ್ಲಿಗೆ ಹಗಲು ವೇಷದವರು ಬರುತ್ತಾರೆ. ಬೆಂಗಳೂರಲ್ಲಿ ದಸರಾ ಹಬ್ಬದ ಮರುದಿನವೇ ಹಗಲು ವೇಷದವರ ಸುದ್ದಿಗೋಷ್ಠಿ ನಡೆದಿದೆ. ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಗಲು ವೇಷದವರಂತೆ ಒಗ್ಗಟ್ಟಿನ ಅಭಿನಯದೊಂದಿಗೆ ಮಾತನಾಡಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ. ರವಿ ಟೀಕಿಸಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆರು ತಿಂಗಳ ಹಿಂದೆ ದೊಡ್ಡಗೌಡರ ಡೈಲಾಗ್ ಬೇರೆಯೇ ಇತ್ತು. ಆದರೆ, ಈಗ ಎಲ್ಲವೂ ಬದಲಾಗಿದೆ. ಅಧಿಕಾರಕ್ಕಾಗಿ ಇವರು ಏನೆಲ್ಲ ಮಾಡುತ್ತಾರೆ ಎನ್ನುವುದಕ್ಕೆ ಇದು ಸಾಕ್ಷಿ. ಕೆಲ ತಿಂಗಳುಗಳ ಹಿಂದೆ ದೇವೇಗೌಡರು “ನನ್ನ ರಾಜಕೀಯ ಜೀವನದಲ್ಲೇ ಸಿದ್ದರಾಮಯ್ಯ ರೀತಿಯ ಸಿಎಂ ನೋಡಿರಲಿಲ್ಲ. ಕಾಂಗ್ರೆಸ್ ಸೋಲಿಸುವುದೇ ನನ್ನ ಕೊನೆಯ ಆಸೆ ಎಂದಿದ್ದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ, “ಜೆಡಿಎಸ್ ಬಿಜೆಪಿಯ ಬಿ- ಟೀಂ, ಅದು ಧೃತರಾಷ್ಟ್ರನ ಜಾತಿ, ಅಲ್ಲಿದ್ದರೆ ಯಾರೂ ಬೆಳೆಯೋದಿಲ್ಲ’ ಎಂದಿದ್ದರು. ಹೀಗೆಲ್ಲ ಮಾತನಾಡಿದವರು ಈಗ ಒಂದಾಗಿದ್ದಾರೆ. ದಾಸಶ್ರೇಷ್ಠರು ಹೇಳಿದ ಆಚಾರವಿಲ್ಲದ ನಾಲಿಗೆ ಎಂಬ ಮಾತು ಕಾಂಗ್ರೆಸ್-ಜೆಡಿಎಸ್ನವರಿಗೆ ಸರಿಯಾಗಿ ಹೊಂದುತ್ತದೆ ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ