ಡಿಕೆಶಿ ನೇತೃತ್ವದಲ್ಲಿ ಗುಪ್ತ ಸಭೆ
Team Udayavani, Oct 22, 2018, 6:40 AM IST
ಹೊಸಪೇಟೆ: ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಅವರು ಭಾನುವಾರ ನಗರದಲ್ಲಿ ಗುಪ್ತ ಸಭೆ ನಡೆಸಿದ್ದಾರೆ.
ಇಲ್ಲಿನ ಹೋಟೆಲ್ ಮಲ್ಲಿಗಿ ಸಭಾಂಗಣದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಕರೆಯಲಾಗಿತ್ತು. ಆದರೆ, ಸಭಾಂಗಣಕ್ಕೆ ಆಗಮಿಸಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸದ ಸಚಿವ ಡಿ.ಕೆ.ಶಿವಕುಮಾರ್, ತಾವು ಉಳಿದುಕೊಂಡಿದ್ದ ಕೊಠಡಿಯಲ್ಲಿಯೇ ಸಚಿವರು, ಶಾಸಕರೊಂದಿಗೆ ಗುಪ್ತ ಸಭೆ ನಡೆಸಿ ಚರ್ಚಿಸಿದರು.
ಗುಪ್ತ ಸಭೆಗೆ ಆಗಮಿಸದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ದೂರ ಇರಿಸಲಾಗಿತ್ತು. ಅಲ್ಲದೆ, ಕೆಲ ಪ್ರಮುಖ ಮುಖಂಡರನ್ನು ಮಾತ್ರ ತಮ್ಮ ಕೊಠಡಿಗೆ ಕರೆಸಿಕೊಂಡು ಚರ್ಚಿಸಿದರು. ಪಕ್ಷದ ಕೆಲ ಪದಾಧಿಕಾರಿಗಳು ಮತ್ತು ಕಾರ್ಯ ಕರ್ತರು ಮಲ್ಲಿಗಿ ಸಭಾಂಗಣದಲ್ಲಿ ಕಾಯುತ್ತಾ ಕುಳಿತಿದ್ದರೂ, ಸಚಿವ ಡಿಕೆಶಿ ಅಲ್ಲಿಗೆ ಬಂದು ಚರ್ಚೆ ನಡೆಸದೆ ತರಾತುರಿಯಲ್ಲಿ ಹೊರಟು ಹೋದರು.
ಜಾರಕಿಹೊಳಿ ದೂರ: ಭಾನುವಾರದ ಸಭೆಗೆ ಆಗಮಿಸಬೇಕಾಗಿದ್ದ ಸಚಿವ ರಮೇಶ್ ಜಾರಕಿಹೊಳಿ ಸಭೆಗೆ ಬಾರದೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಪರವಾಗಿ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದರೂ ಹೊಸಪೇಟೆಯ ಸಭೆಗೆ ಆಗಮಿಸದೆ ಸಭೆಯಿಂದ ದೂರ ಉಳಿಯುವ ಮೂಲಕ ತಮ್ಮ ಹಾಗೂ ಡಿಕೆಶಿ ನಡುವೆ ಇನ್ನೂ ಮುನಿಸು ಇದೆ ಎಂಬುದನ್ನು ಸಾಬೀತುಪಡಿಸಿದರು.
ಗುಪ್ತ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಯು.ಟಿ.ಖಾದರ್, ಶಾಸಕರಾದ ಆನಂದ್ ಸಿಂಗ್,ತುಕಾರಾಂ,
ರಾಘವೇಂದ್ರ ಹಿಟ್ನಾಳ್,ಅಮರೇಗೌಡ ಬಯ್ನಾಪುರ ಸೇರಿದಂತೆ ಕೆಲ ಪ್ರಮುಖ ಮುಖಂಡರು ಮಾತ್ರ ಪಾಲ್ಗೊಂಡಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್