ಉಂಬ್ಳೆಬೈಲು ಬಳಿ ನಕ್ಸಲರು ಪ್ರತ್ಯಕ್ಷ?
Team Udayavani, Oct 22, 2018, 6:05 AM IST
ಶಿವಮೊಗ್ಗ: ತಾಲೂಕಿನ ಉಂಬ್ಳೆಬೈಲು ಸಮೀಪ ಭಾನುವಾರ ಮಧ್ಯಾಹ್ನ ನಕ್ಸಲರು ಕಾಣಿಸಿಕೊಂಡಿದ್ದಾರೆ ಎಂಬ ಸುದ್ದಿ ಹರಡಿ ಜನರಲ್ಲಿ ಆತಂಕ ಮೂಡಿಸಿದೆ. ಆದರೆ, ನಕ್ಸಲರು ಕಂಡಿದ್ದಾರೆ ಎಂದು ಮಾಹಿತಿ ಕೊಟ್ಟವರ ಗೊಂದಲಕಾರಿ ಹೇಳಿಕೆಗಳಿಂದ ಇದು ಕೇವಲ ವದಂತಿ ಇರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಉಂಬ್ಳೆಬೈಲು ಬಳಿ ಇರುವ ಚರ್ಚ್ ಹತ್ತಿರ ಭಾನುವಾರ ಮಧ್ಯಾಹ್ನ ಜೀನ್ಸ್ ಪ್ಯಾಂಟ್, ಟೀ ಶರ್ಟ್ ಧರಿಸಿದ್ದ ನಾಲ್ವರು ಯುವಕರು ಗನ್ ಹಾಗೂ ಮ್ಯಾಪ್ ಒಂದನ್ನು ಇಟ್ಟುಕೊಂಡು ನಿಂತಿದ್ದರು ಎಂದು ವ್ಯಕ್ತಿಯೊಬ್ಬರು ಅರಣ್ಯ ಇಲಾಖೆ ಅಧಿ ಕಾರಿಗಳಿಗೆ ತಿಳಿಸಿದರು. ನಂತರ ಯುವಕರು ನಿಂತಿದ್ದರು, ಆದರೆ, ಅವರ ಬಳಿ ಏನೂ ಇರಲಿಲ್ಲ ಎಂದು ಕೆಲ ಕ್ಷಣದಲ್ಲೇ ತಮ್ಮ ಹೇಳಿಕೆ ಬದಲಿಸಿದರು. ಇದರಿಂದ ಗೊಂದಲಕ್ಕೊಳಗಾದ ಅರಣ್ಯ ಇಲಾಖೆ ಅ ಧಿಕಾರಿಗಳು ತುಂಗಾ ನಗರ ಪೊಲೀಸರಿಗೆ ಮಾಹಿತಿ ನೀಡಿದರು.
ಭಾನುವಾರವಾದ್ದರಿಂದ ಜನ ಸಂಚಾರ ವಿರಳವಾಗಿದ್ದು, ಮಾಹಿತಿ ನೀಡಿದ ವ್ಯಕ್ತಿ ಹೊರತುಪಡಿಸಿದರೆ ಉಳಿದವರ್ಯಾರೂ ಸಹ ಯುವಕರನ್ನು ನೋಡಿಲ್ಲ. ಹೀಗಾಗಿ, ಇದು ವದಂತಿಯೋ ಅಥವಾ ನಿಜವೋ ಎಂಬುದರ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನಕ್ಸಲರಾಗಿದ್ದರೆ ಅವರು ಜೀನ್ಸ್ ಪ್ಯಾಂಟ್ ಹಾಕಿರುತ್ತಿರಲಿಲ್ಲ ಎಂಬುದು ಕೆಲವರ ತರ್ಕ. ಆದರೆ, ಈ ಸುದ್ದಿಯಿಂದ ಮಲೆನಾಡಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ನಡೆಯುತ್ತಿದೆ ಎಂಬ ಶಂಕೆ ಮೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ