ತೋಂಟದಾರ್ಯ ಮಠ: ಡಾ. ಸಿದ್ಧರಾಮ ಸ್ವಾಮೀಜಿ ಉತ್ತರಾಧಿಕಾರಿ


Team Udayavani, Oct 22, 2018, 6:00 AM IST

181021kpn50.jpg

ಗದಗ: ತೋಂಟದಾರ್ಯ ಮಠದ ಪೀಠಾಧಿಪತಿ ಡಾ| ತೋಂಟದ ಸಿದ್ಧಲಿಂಗ ಸ್ವಾಮೀಜಿಯವರು 10 ವರ್ಷಗಳ ಹಿಂದೆಯೇ ವಿಲ್‌ ಬರೆದಿಟ್ಟಿದ್ದು, ವಿಲ್‌ನಲ್ಲಿ ಬೆಳಗಾವಿ ನಾಗನೂರು ಮಠದ ಡಾ| ಸಿದ್ಧರಾಮ ಸ್ವಾಮೀಜಿಯವರನ್ನೇ ಉತ್ತರಾಧಿಕಾರಿ ಎಂದು ಹೆಸರಿಸಿದ್ದಾರೆ.

ಡಾ|ತೋಂಟದ ಸಿದ್ಧಲಿಂಗ ಶ್ರೀಗಳು ಅಕಾಲಿಕ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆ ಉದ್ಭವವಾಗಿತ್ತಾದರೂ, ಮಠದ ಆಡಳಿತ ಮಂಡಳಿ ಸದಸ್ಯರು ಭಾನುವಾರ ಬೆಳಗ್ಗೆ ಸಭೆ ಸೇರಿ ವಿಲ್‌ ಪರಿಶೀಲಿಸಿದಾಗ ಸ್ವಾಮೀಜಿಯವರು 2008ರಲ್ಲಿಯೇ ಉತ್ತರಾಧಿಕಾರಿಯನ್ನು ನೇಮಿಸಿರುವುದು ತಿಳಿದು ಬಂದಿದೆ. ಮುಂಬೈ ಪಬ್ಲಿಕ್‌ ಟ್ರಸ್ಟ್‌ ಕಾಯ್ದೆ-1950ರ ಅಡಿಯಲ್ಲಿ ಬೆಳಗಾವಿಯ ಸಹಾಯಕ ಧರ್ಮದತ್ತಿ ಆಯುಕ್ತರ ಕಚೇರಿಯಲ್ಲಿ ವಿಲ್‌ ನೋಂದಣಿ ಮಾಡಿಸಲಾಗಿದೆ (ಸಂಖ್ಯೆ ಎ-2633 ಡಿಡಬ್ಲ್ಯು ಆರ್‌). ಮಠದ 19ನೇ ಪೀಠಾಧಿಪತಿಯಾಗಿ ಡಾ|ತೋಂಟದ ಸಿದ್ಧಲಿಂಗ ಸ್ವಾಮೀಜಿಯವರು ತಮಗೆ ದತ್ತವಾದ ಅಧಿಕಾರದ ಮೇರೆಗೆ 2008ರ ಮಾರ್ಚ್‌ 10ರಂದು ತಮ್ಮ ಉತ್ತರಾಧಿಕಾರಿಯನ್ನಾಗಿ ಡಾ|ಸಿದ್ಧರಾಮ ಸ್ವಾಮೀಜಿಯವರನ್ನು ನೇಮಕ ಮಾಡಿದ್ದಾಗಿ ವಿಲ್‌ನಲ್ಲಿ ನಮೂದಿಸಿದ್ದಾರೆ.

ಆಡಳಿತ ಮಂಡಳಿ ಸದಸ್ಯರ ಸಭೆ ನಂತರ ಶಿವಮೊಗ್ಗ ಆನಂದಪುರದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿಯವರು, ವಿಲ್‌ನಲ್ಲಿ ನಮೂದಿಸಿದಂತೆ ಮಠದ ಉತ್ತರಾಧಿಕಾರಿಯನ್ನಾಗಿ ನಾಗನೂರುಮಠದ ಶ್ರೀ ಸಿದ್ಧರಾಮ ಸ್ವಾಮೀಜಿ ಅವರನ್ನು ನೇಮಕ ಮಾಡಲಾಗಿದೆ ಎಂದು ವಿವಿಧ ಮಠಾಧೀಶರು, ಗಣ್ಯರು ಹಾಗೂ ಭಕ್ತರ ಸಮ್ಮುಖದಲ್ಲಿ ಘೋಷಿಸಿದರು.

ಸಿದ್ಧಲಿಂಗ ಸ್ವಾಮೀಜಿ ಹೆಸರಲ್ಲಿ ಪ್ರಶಸ್ತಿಗೆ ಚಿಂತನೆ
ತೋಂಟದಾರ್ಯ ಮಠದ ಡಾ| ಸಿದ್ಧಲಿಂಗ ಸ್ವಾಮಿಗಳವರು ಕೋಮು ಸೌಹಾರ್ದತೆ ವಿಚಾರದಲ್ಲಿ ಬಹು ದೊಡ್ಡ ಸಾಧನೆ ತೋರುವ ಮೂಲಕ ಸಮಾಜದಲ್ಲಿ ಸಾಮರಸ್ಯಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಹೆಸರಿನಲ್ಲಿ ರಾಜ್ಯಮಟ್ಟದ ಪ್ರಶಸ್ತಿಯೊಂದನ್ನು ನೀಡುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.

ಡಾ| ತೋಂಟದ ಸಿದ್ಧಲಿಂಗ ಸ್ವಾಮೀಜಿಯವರಿಗೆ ಅಂತಿಮ ನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಮುಸೌಹಾರ್ದತೆ ನಿಟ್ಟಿನಲ್ಲಿ ಅವರ ಸೇವೆ ಸದಾ ಸ್ಮರಿಸುವ ನಿಟ್ಟಿನಲ್ಲಿ ರಾಜ್ಯಮಟ್ಟದ ಪ್ರಶಸ್ತಿಯೊಂದನ್ನು ಅವರ ಹೆಸರಲ್ಲಿ ನೀಡಲು ಗಂಭೀರ ಚಿಂತನೆ ಇದ್ದು, ಸರಕಾರದಲ್ಲಿ ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಪಂಚಭೂತಗಳಲ್ಲಿ ಲೀನ
ಹೃದಯಾಘಾತದಿಂದ ಲಿಂಗೈಕ್ಯರಾದ ತೋಂಟದಾರ್ಯ ಮಠದ 19ನೇ ಪೀಠಾಧಿ ಪತಿಯಾಗಿದ್ದ ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವ ಹಾಗೂ ಲಿಂಗಾಯತ ವಿ ಧಿ ವಿಧಾನದಂತೆ ರವಿವಾರ ಮಧ್ಯಾಹ್ನ ತೋಂಟದಾರ್ಯ ಮಠದ ಆವರಣದಲ್ಲಿ ನೆರವೇರಿತು. ನೂರಾರು ಮಠಾ ಧೀಶರು, ಸಾವಿರಾರು ಭಕ್ತರು, ಅನೇಕ ಗಣ್ಯರು ಇದಕ್ಕೆ ಸಾಕ್ಷಿಯಾದರು.
ಶನಿವಾರ ಲಿಂಗೈಕ್ಯರಾಗಿದ್ದ ಡಾ.ತೋಂಟದ ಸಿದ್ದಲಿಂಗ ಸ್ವಾಮೀಜಿಯವರ ಪಾರ್ಥೀವ ಶರೀರವನ್ನು ರವಿವಾರ ಮಧ್ಯಾಹ್ನದವರೆಗೂ ಭಕ್ತರ ದರ್ಶನಕ್ಕೆ ಇರಿಸಲಾಗಿತ್ತು. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಸಭಾಪತಿ ಬಸವರಾಜ ಹೊರಟ್ಟಿ, ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಜನಪ್ರತಿನಿಧಿ ಗಳು ಸ್ವಾಮೀಜಿಯವರ ಅಂತಿಮ ದರ್ಶನ ಪಡೆದರು. ಅನೇಕ ಗಣ್ಯರು, ಮಠಾಧೀಶರು ನುಡಿ ನಮನ ಸಲ್ಲಿಸಿದರು.

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.