ಡಿಕೆಶಿ ಶೋ ಬಿಟ್ಟು ಕೆಲಸ ಮಾಡಲಿ
Team Udayavani, Oct 22, 2018, 6:00 AM IST
ಕೂಡ್ಲಿಗಿ: ಜಾರಕಿಹೊಳಿ ಬ್ರದರ್ಸ್ ಹಾಗೂ ಸಚಿವ ಡಿ.ಕೆ. ಶಿವಕುಮಾರ್ ನಡುವಿನ ಮುನಿಸು ಮುಗಿದ ಅಧ್ಯಾಯ ಎಂದುಕೊಳ್ಳುತ್ತಿರುವ ಬೆನ್ನಲ್ಲೇ ಸಚಿವ ರಮೇಶ್ ಜಾರಕಿಹೊಳಿ ಮತ್ತೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಬಳ್ಳಾರಿ ಜಿಲ್ಲೆ ಕೂಡ್ಲಿಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ “”ಜಲಸಂಪನ್ಮೂಲ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಅವರು ಶೋ ಮಾಡುವುದನ್ನು ಬಿಟ್ಟು, ಮಾಡಬೇಕಾದ ಕೆಲಸ ಮಾಡಲಿ” ಎಂದಿದ್ದಾರೆ.
ಬಳ್ಳಾರಿ ಉಪಚುನಾವಣೆಯಲ್ಲಿ ಶಾಸಕ ನಾಗೇಂದ್ರ ಸಹೋದರ ವೆಂಕಟೇಶ್ ಪ್ರಸಾದ್ಗೆ ಪಕ್ಷದ ಟಿಕೆಟ್ ನೀಡುವಂತೆ ಒತ್ತಾಯಿಸಲಾಗಿತ್ತು. ಆದರೆ, ಟಿಕೆಟ್ ಕೈತಪ್ಪಲು ಸಿಎಂ ಕುಮಾರಸ್ವಾಮಿ ಕಾರಣರಲ್ಲ. ಯಾರ ಕುತಂತ್ರದಿಂದ ಕೈ ತಪ್ಪಿತೋ ಗೊತ್ತಿಲ್ಲ. ಆದರೂ ಸಹ ಪಕ್ಷ ನನಗೆ ಸೂಚಿಸಿದ ಜವಾಬ್ದಾರಿ ನಿಭಾಯಿಸುವೆ. ಹೀಗೆಯೇ ಡಿ.ಕೆ. ಶಿವಕುಮಾರ್ ಸಹ ಶೋ ಮಾಡೋದನ್ನು ಬಿಟ್ಟು ಅವರಿಗೆ ವಹಿಸಿದ ಕೆಲಸ ಮಾಡಲಿ ಎಂದರು.
ಈಗ ಹೇಳಿಕೆ ನೀಡಿದ್ದು ಸರಿಯಲ್ಲ: ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಕ್ಯಾಬಿನೆಟ್ ಚರ್ಚೆ ವೇಳೆ ಆಕ್ಷೇಪಿಸದ ಡಿ.ಕೆ.ಶಿವಕುಮಾರ್, ಇದೀಗ ಬಹಿರಂಗವಾಗಿ ಹೇಳಿಕೆ ನೀಡಿದ್ದು ಸಮಂಜಸವಲ್ಲ. ಮಾಜಿ ಸಿಎಂ ಸಿದ್ದರಾಮಯ್ಯರ ಮೇಲೆ ಗೂಬೆ ಕೂರಿಸಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಲಿಂಗಾಯತ ಸ್ವತಂತ್ರ ಧರ್ಮದ ವಿಚಾರಕ್ಕೆ ಸಂಬಂಧಿಸಿ ಮಾತನಾಡಿ ನಂತರ ಕ್ಷಮೆಯಾಚಿಸಿದ್ದು ಅವರ ವೈಯಕ್ತಿಕ. ಆದರೂ, ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಗಳಿದ್ದಲ್ಲಿ ಕ್ಯಾಬಿನೆಟ್ನಲ್ಲಿ ಚರ್ಚೆ ನಡೆಯುತ್ತಿದ್ದಾಗ ಹೇಳಬಹುದಿತ್ತು. ಅವರ ಹಿಂಬಾಲಕರಾದ ಲಕ್ಷ್ಮೀ ಹೆಬ್ಟಾಳ್ಕರ್ ಅವರು ಸಹ ಪ್ರತ್ಯೇಕ ಧರ್ಮದ ಬಗ್ಗೆ ಮಾತನಾಡುವಾಗ ಡಿ.ಕೆ. ಶಿವಕುಮಾರ್ ಎಲ್ಲಿಗೆ
ಹೋಗಿದ್ದರು? ಪ್ರತಿ ಸಭೆಯಲ್ಲೂ ಧರ್ಮದ ವಿಚಾರವಾಗಿ ಮಾತನಾಡುವಾಗ ಹೆಬ್ಟಾಳ್ಕರ್ ತಡೆ ಯಲು ಏಕೆ ಪ್ರಯತ್ನಿಸಲಿಲ್ಲ ಎಂದು ಪ್ರಶ್ನಿಸಿದರು.ಮಾಜಿ ಸಚಿವ ಎಂ.ಬಿ. ಪಾಟೀಲ್ ಡಿಕೆಶಿ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದು ಅವರಿಗೆ ನಮ್ಮಸಂಪೂರ್ಣ ಬೆಂಬಲವಿದೆ ಎಂದರು.
ಪಕ್ಷದ ಸಭೆಯ ಮಾಹಿತಿ ಇಲ್ಲ: ನನಗೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ನೀಡಿದ್ದಾರೆ. ಆ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದ ಅವರು ಹೊಸಪೇಟೆಯಲ್ಲಿ ಭಾನುವಾರ ಸಂಜೆ ನಡೆದ ಕಾಂಗ್ರೆಸ್ ಸಭೆಯ ಬಗ್ಗೆ ನನಗೆ ಮಾಹಿತಿ ಇಲ್ಲ. ಹಾಗಾಗಿ ಆ ಸಭೆಗೆ ನಾನು ಹೋಗಿಲ್ಲ. ಪಕ್ಷದ ಹೈಕಮಾಂಡ್ ನೀಡಿದ ಕೆಲಸವನ್ನು ನಿಭಾಯಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
MUST WATCH
ಹೊಸ ಸೇರ್ಪಡೆ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್