ರಾಜ್ಯ ಸರಕಾರಿ ಶಿಕ್ಷಕರು, ಉಪನ್ಯಾಸಕರ ಮೂಲ ವೇತನದಲ್ಲಿ ಬಡ್ತಿ ವಿಲೀನ
Team Udayavani, Oct 22, 2018, 12:11 PM IST
ಬೆಂಗಳೂರು : ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಸೆಮಿ ಫೈನಲ್ ಎನ್ನುವ ರೀತಿಯಲ್ಲಿ ಇದೀಗ ಎದುರಾಗಿರುವ ಮೂರು ಲೋಕಸಭಾ ಮತ್ತು ಎರಡು ವಿಧಾನಸಭಾ ಉಪ ಚುನಾವಣೆಗಳ ಹೊಸ್ತಿಲಲ್ಲಿ ನಿಂತಿರುವ ಜೆಡಿಎಸ್ – ಕಾಂಗ್ರೆಸ್ ದೋಸ್ತಿ ಸರಕಾರ, ಇದೀಗ ರಾಜ್ಯದಲ್ಲಿನ ಸರಕಾರಿ ಅನುದಾನಿತ ಪ್ರೌಢಶಾಲಾ ಶಿಕ್ಷಕರು ಮತ್ತು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಮತ್ತು ಪ್ರಾಂಶುಪಾಲರಿಗೆ ಗುಡ್ ನ್ಯೂಸ್ ಕೊಟ್ಟಿದೆ.
ಅದೆಂದರೆ 2016ರ ಜೂನ್ 1ರಿಂದ ಜಾರಿಗೆ ಬರುವಂತೆ ಮಾಡಿದ್ದ ಒಂದು ಹೆಚ್ಚುವರಿ ವಿಶೇಷ ವೇತನ ಬಡ್ತಿಯನ್ನು ಮೂಲ ವೇತನದೊಂದಿಗೆ ವಿಲಯನಗೊಳಿಸಿ ನ.1ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.
2016ರ ಜೂನ್ 1ರಿಂದ ಜಾರಿಗೆ ಬರುವಂತೆ ಮಂಜೂರು ಮಾಡಲಾಗಿದ್ದ ಹೆಚ್ಚುವರಿ ವೇತನ ಬಡ್ತಿಯನ್ನು ಆರನೇ ವೇತನ ಆಯೋಗವನ್ನು ಜಾರಿ ಮಾಡುವ ವೇಳೆ ಪರ್ಸನಲ್ ಪೇ ಎಂದು ಪ್ರತ್ಯೇಕಿಸಲಾಗಿತ್ತು. ಸರಕಾರದ ಈ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕತವಾಗಿತ್ತು.
ಅಂತೂ ಕೊನೆಗೂ ಸರಕಾರ ಶಿಕ್ಷಕರು ಮತ್ತು ಉಪನ್ಯಾಸಕರ ಬೇಡಿಕೆಗೆ ಮಣಿದು ರಾಜ್ಯೋತ್ಸದ ಕೊಡುಗೆ ಎಂಬಂತೆ ಈಗ ಹೆಚ್ಚುವರಿ ವಿಶೇಷತನ ವೇತನ ಬಡ್ಡಿಯನ್ನು ಮೂಲ ವೇತನದೊಂದಿಗೆ ವಿಲಯನಗೊಳಿಸುವ ಆದೇಶವನ್ನು ಹೊರಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ