ಅಪಪ್ರಚಾರಕ್ಕೆ ಕಿವಿಗೊಡಬೇಡಿ:ಮುನಿಯಪ್ಪ


Team Udayavani, Apr 11, 2019, 11:09 AM IST

kh-m

ಕೋಲಾರ: ನನ್ನ ಮಿತಿಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದೇನೆ, ಚುನಾವಣೆ ಸಂದರ್ಭದಲ್ಲಿ ಅಪಪ್ರಚಾರ, ಆರೋಪಗಳು ಸಹಜವಾಗಿದ್ದು, ಮೈತ್ರಿ ಸರ್ಕಾರದ ಅಂಗ ಪಕ್ಷಗಳಾದ ಕಾಂಗ್ರೆಸ್‌, ಜೆಡಿಎಸ್‌ ಕಾರ್ಯಕರ್ತರು ಇದಕ್ಕೆ ಕಿವಿಗೊಡಬಾರದು ಎಂದು ಮೈತ್ರಿ ಅಭ್ಯರ್ಥಿ ಸಂಸದ ಕೆ.ಎಚ್‌.ಮುನಿಯಪ್ಪ ಮನವಿ ಮಾಡಿದರು.

ತಾಲೂಕಿನ ವೇಮಗಲ್‌ನಲ್ಲಿ ಯುವ ಕಾಂಗ್ರೆಸ್‌ ಘಟಕದಿಂದ ಆಯೋಜಿಸಿದ್ದ ಲೋಕಸಭೆ ಚುನಾವಣೆಯ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕೆಲವು ಕೆಲಸವಿಲ್ಲದ ವ್ಯಕ್ತಿಗಳು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ, ಇಂತಹವರ ಗಾಳಿ ಮಾತುಗಳನ್ನು ಯಾರು ಕೇಳಬೇಡಿ, ನಾನು ಜಿಲ್ಲೆಯ ಅಭಿವೃದ್ಧಿಯನ್ನು ಎಂದೂ ಕಡೆಗಣಿಸಿಲ್ಲ. 7 ಬಾರಿ ಸಂಸದನಾಗಿ ನನ್ನ ಮೀತಿಯಲ್ಲಿ ಆದ ಕೆಲಸ ಮಾಡಿದ್ದೇನೆ. ಅಭಿವೃದ್ಧಿ ಕೆಲಸ ಮಾಡಿಯೇ ಈಗ ಮತ್ತೆ ಮತ ಕೇಳುತ್ತಿದ್ದೇನೆ. ಏನಾದರೂ ಸಮಸ್ಯೆ ಇದ್ದರೆ ನನಗೆ ಹೇಳಿದರೆ ಕೂಡಲೇ ಬಗೆಹರಿಸುತ್ತೇನೆ. ಅದು ಬಿಟ್ಟು ಇಲ್ಲ ಸಲ್ಲದ ಆರೋಪ ಮಾಡುವುದನ್ನು ಬಿಡಿ ಎಂದು ಎಚ್ಚರಿಕೆ ನೀಡಿದರು.

ಆತಂಕ ಪಡಬೇಕಾಗುತ್ತೆ: ರಾಜ್ಯದ ಮೈಸೂರು, ಚಾಮರಾಜನಗರ, ತುಮಕೂರು, ಮಂಡ್ಯದಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಬಹಳ ಒಗ್ಗಟ್ಟಿನಿಂದ ಅಭ್ಯರ್ಥಿಗಳ ಪರ ಕೆಲಸ ಮಾಡುತ್ತಿದ್ದಾರೆ. ದೇಶದಲ್ಲಿ ಕೋಮುವಾದಿಗಳ ಶಕ್ತಿ ನಿರ್ಮೂಲನೆ ಮಾಡಲು ಜಾತ್ಯತೀತ ಪಕ್ಷಗಳು ಒಗ್ಗೂಡಿವೆ. ಕಾನೂನು, ಸಂವಿಧಾನವನ್ನು ಸುಟ್ಟು ಹಾಕಬೇಕು, ಬದಲಾವಣೆ ಮಾಡಬೇಕು ಎಂದು ಬಿಜೆಪಿಯವರು ಹೇಳಿದ್ದಾರೆ. ಅವರ ಕೈಗೆ ಅಧಿಕಾರ ಕೊಟ್ಟರೆ ಆತಂಕ ಪಡಬೇಕಾಗುತ್ತಿದೆ ಎಂದು ಹೇಳಿದರು.

ಸಾಮಾನ್ಯ ರೈತರ ಅರ್ಜಿ ಸ್ವೀಕಾರವಾಗಿಲ್ಲ: ದೇಶದಲ್ಲಿ ಶಾಂತಿ ಕಾಪಾಡಲು ಬಿಜೆಪಿ ಕೈಯಲ್ಲಾಗಲಿಲ್ಲ, ದೇಶದಲ್ಲಿ ಅತಿ ಹೆಚ್ಚು ಅಟ್ರಾಸಿಟಿ ಪ್ರಕರಣಗಳು ದಾಖಲಾದವು. ಕೋಮುಗಲಭೆಗಳನ್ನು ಸೃಷ್ಟಿ ಮಾಡಿದರು. ರೈತರ, ಬಡವರ ಸಾಲ ಮನ್ನಾ ಮಾಡದ ಮೋದಿ, ಬಂಡವಾಳ ಶಾಹಿಗಳ ಸಾಲ ಮನ್ನಾ ಮಾಡುತ್ತಾರೆ. ಮೋದಿಗೆ ರೈತರ ಪರ ಕಾಳಜಿಯಿಲ್ಲ. ಹಿಂದೆ ಯುಪಿಎ ಸರ್ಕಾರ 45 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿತು. ಪ್ರಧಾನಿ ನರೇಂದ್ರ ಮೋದಿಗೆ ಕೇಳಿದಾಗ ಯಾವುದೇ ಸ್ಪಂದನೆ ನೀಡಲಿಲ್ಲ. ಈಗ ಅವರು ಮಾಡಿರುವ ಸಾಲ ಮನ್ನಾದಲ್ಲಿ ಕೇವಲ ಬಿಜೆಪಿಯವರ ಅರ್ಜಿಗಳು ಮಾತ್ರ ಇವೆ. ಸಾಮಾನ್ಯ ರೈತರ ಅರ್ಜಿಗಳು ಇಲ್ಲ ಎಂದು ಟೀಕಿಸಿದರು. ಏಳು ಬಾರಿ ಕ್ಷೇತ್ರದ ಜನರ ಆಶೀರ್ವಾದ ಸಿಕ್ಕ ಕಾರಣದಿಂದಲೇ ರಸ್ತೆ, ರೈಲ್ವೆ ಮಾರ್ಗ ಅನುಷ್ಠಾನ ಗೊಂಡಿದೆ. ತಾಲೂಕಿನ ವೇಮಗಲ್‌, ನರಸಾಪುರ ಬಳಿಗೆ ಕೈಗಾರಿಕೆಗಳು ಬಂದಿದ್ದು, 50 ಸಾವಿರಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಸಿಕ್ಕಿದೆ. ಜತೆಗೆ ಅಪೆಲ್‌ ಕಂಪನಿ ಪ್ರಗತಿಯಲ್ಲಿದ್ದು, 10 ಸಾವಿರ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದರು.

ಪ್ರಚೋದನೆ: ಮುಳಬಾಗಿಲು ಚುನಾವಣಾ ವೀಕ್ಷಕಿ ವಸಂತ ಕವಿತಾ, ಕಾಂಗ್ರೆಸ್‌ ಪಕ್ಷ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದೆ. ಕಾಂಗ್ರೆಸ್‌ ಪಕ್ಷ ಹಾಕಿದ ಭದ್ರ ಬುನಾದಿಯಿಂದ ಭಾರತ ವಿವಿಧ ರಂಗಗಳಲ್ಲಿ ಅಭಿವೃದ್ಧಿ ಸಾಧಿಸಿದೆ. ಬಿಜೆಪಿಯವರು ಅಭಿವೃದ್ಧಿ ಬಗ್ಗೆ ಮಾತನಾಡದೆ ರಾಮಮಂದಿರ, ಸಂವಿಧಾನ, ಕಾಶ್ಮೀರದ ವಿಚಾರಗಳನ್ನು ಪ್ರಸ್ತಾಪಿಸುವ ಮೂಲಕ ಜನರನ್ನು ಪ್ರಚೋದಿಸುತ್ತಿದ್ದಾರೆ ಎಂದು ಟೀಕಿಸಿದರು. ಕ್ಷೇತ್ರದಲ್ಲಿ ಏ.18ರಂದು ನಡೆಯುವ ಚುನಾವಣೆಯಲ್ಲಿ ಮತದಾರರು ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಉಳಿಸಬೇಕು. ನೀವು ಯಾರಿಗಾದರೂ ಮತ ಹಾಕಿ, ಒಟ್ಟಿನಲ್ಲಿ ತಮ್ಮ ಹಕ್ಕು ಚಲಾಯಿಸುವುದು ಮರೆಯಬೇಡಿ ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.