ಉಗ್ರರ ಗುಂಡಿಗೆ ಯೋಧ ಬಲಿ


Team Udayavani, Oct 24, 2018, 6:00 AM IST

x-17.jpg

ಸವಣೂರು: ದಸರಾ ಹಬ್ಬಕ್ಕೆ ಬಂದು ಸಂಭ್ರಮಾಚರಿಸಿ ಕನ್ಯೆಯನ್ನು ನೋಡಿ ಜನವರಿಯಲ್ಲಿ ಮದುವೆ ಮಾಡಿಕೊಳ್ಳುವುದಾಗಿ ದಿನ ನಿಗದಿ ಮಾಡಿ ಕರ್ತವ್ಯಕ್ಕೆ ಮರಳಿದ್ದ ತಾಲೂಕಿನ ಕಲಿವಾಳ ಗ್ರಾಮದ ಯೋಧ ದೇವೇಂದ್ರಪ್ಪ ಬಸವಂತಪ್ಪ ಗುಲಗುಂದಿ (28) ಉಗ್ರರ ಗುಂಡಿಗೆ ಬಲಿಯಾಗಿದ್ದಾನೆ.

2008ರಲ್ಲಿ ಸೇನೆಗೆ ಸೇರಿದ್ದ ಯೋಧ ದೇವೇಂದ್ರಪ್ಪ ದಸರಾ ಹಬ್ಬಕ್ಕೆ ಆಗಮಿಸಿ 20 ದಿನಗಳ ರಜೆ ಮುಗಿಸಿಕೊಂಡು ಅ.21ಕ್ಕೆ ಕರ್ತವ್ಯಕ್ಕೆ ಮರಳಿದ್ದ. ಅ.23ರಂದು ಉಗ್ರರ ಗುಂಡಿಗೆ ಬಲಿಯಾಗಿದ್ದಾನೆ ಎಂಬ ಮಾಹಿತಿ ಮಂಗಳವಾರ ಮುಂಜಾನೆ 9 ಗಂಟೆಗೆ ಕುಟುಂಬಸ್ಥರಿಗೆ ತಲುಪಿದೆ. ಈ ಕುರಿತು ಸೇನೆಯ ಅಧಿಕಾರಿಗಳಿಗೆ ನಿರಂತರ ಸಂಪರ್ಕದಲ್ಲಿರುವ ಕುಟುಂಬಸ್ಥರಿಂದ ಹಾಗೂ ತಾಲೂಕು
ಆಡಳಿತ ವ್ಯವಸ್ಥೆಯಿಂದ ಗ್ರಾಮದ ಸ್ವಂತ ಎರಡು ಎಕರೆ ಹೊಲದಲ್ಲಿ ಹುತಾತ್ಮ ಯೋಧನ ಅಂತ್ಯಸಂಸ್ಕಾರಕ್ಕೆ ಪೂರ್ವ ಸಿದ್ಧತೆ ಕೈಗೊಳ್ಳಲಾಗುತ್ತಿದೆ.

ಪಿಯುಸಿ ಹಾಗೂ ಐಟಿಐ ಶಿಕ್ಷಣ ಪಡೆದಿದ್ದ ದೇವೇಂದ್ರಪ್ಪ, ಕಲಿವಾಳ ಗ್ರಾಮದಲ್ಲಿ ಇರುವ ಸುಮಾರು 120 ಯೋಧರಲ್ಲಿ ಅತ್ಯಂತ ಕಣ್ಮಣಿಯಾಗಿದ್ದ. ಬಸವಂತಪ್ಪ ಹಾಗೂ ಬಸವಣ್ಣೆವ್ವ ದಂಪತಿಯ ಎರಡನೇ ಮಗನಾದ ದೇವೆಂದ್ರಪ್ಪ, ಸೇನೆ ಸೇರಿದ ನಂತರ ತಮಿಳುನಾಡಿನಲ್ಲಿ ತರಬೇತಿ ಪಡೆದು ಎರಡು ವರ್ಷಗಳ ಹಿಂದೆ ಜಮ್ಮು-  ಕಾಶ್ಮಿರದ ಉರಿ ಸೆಕ್ಟರ್‌ ಗಡಿ ಭಾಗದಲ್ಲಿ ಫೋರ್‌ ಮಡ್ರಾಸ್‌ (ಎಂಆರ್‌ಸಿ) ಸಿಪಾಯಿ ಆಗಿ ಸೇವೆ ಮುಂದುವರಿಸಿದ್ದ. ಯೋಧನ ಅಣ್ಣ ಹನುಮಂತಪ್ಪ ಹಾಗೂ ತಮ್ಮ ಶ್ರೀಕಾಂತ ಬಿಎಸ್‌ಎಫ್‌ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರೆ, ದೇವೆಂದ್ರಪ್ಪ ಆರ್ಮಿಯಲ್ಲಿದ್ದ. ಹಬ್ಬಕ್ಕಾಗಿ ತಮ್ಮ ಶ್ರೀಕಾಂತ ಸಹ ಗ್ರಾಮಕ್ಕೆ ಬಂದಿದ್ದ. ಮೂವರು ಪುತ್ರರನ್ನು ಸೇನೆಗೆ ಸೇರಿಸುವ ಮೂಲಕ ಹೆತ್ತವರು ರಾಷ್ಟ್ರಸೇವೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.