ಅಕ್ರಮವನ್ನೇ ಮಾಡಿರೋ ರಾಮುಲುಗೆ ಸೆಕ್ಷನ್‌ 420 ಬಗ್ಗೆ ಮಾತ್ರ ಗೊತ್ತು


Team Udayavani, Oct 24, 2018, 6:00 AM IST

x-21.jpg

ಸಂಡೂರು/ಹಂಪಿ: ಉಪಚುನಾವಣೆಯ ಹೈವೋಲ್ಟೆಜ್‌ ಕ್ಷೇತ್ರ ಬಳ್ಳಾರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಶಾಸಕ ಬಿ.ಶ್ರೀರಾಮುಲು ಅವರ ವಾಕ್ಸಮರ ಮತ್ತಷ್ಟು ಜೋರಾಗಿದೆ. ತಮ್ಮ ಪಕ್ಷದ ಅಭ್ಯರ್ಥಿ ಪರ ಮಂಗಳವಾರ ಪ್ರಚಾರ ನಡೆಸಿದ
ಇಬ್ಬರೂ ಪರಸ್ಪರ ವಾಗ್ಧಾಳಿ ಮುಂದುವರಿಸಿದರು. ಸಂಡೂರಿನಲ್ಲಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಮುಲು, ರೆಡ್ಡಿ ಅವರಿಗೆ 371(ಜೆ) ಬಗ್ಗೆ ಗೊತ್ತಿಲ್ಲ, ಗೊತ್ತಿದ್ದರೆ ನನ್ನೊಂದಿಗೆ ಚರ್ಚೆಗೆ ಬರಲಿ. ಕೇವಲ ಅಕ್ರಮಗಳನ್ನೇ ಮಾಡಿರುವ ರೆಡ್ಡಿ ಹಾಗೂ ರಾಮುಲುಗೆ ಸೆಕ್ಷನ್‌ 420 ಬಗ್ಗೆ ಚೆನ್ನಾಗಿ ಗೊತ್ತಿದೆ ಎಂದು ವ್ಯಂಗ್ಯವಾಡಿದರು. 

ರಿಪಬ್ಲಿಕ್‌ ಆಫ್‌ ಬಳ್ಳಾರಿ ಆಗಲು ರೆಡ್ಡಿ ಸಹೋದರರು ಹಾಗೂ ಶ್ರೀರಾಮುಲು ಕಾರಣ. ಅಕ್ರಮ ಗಣಿಗಾರಿಕೆಯ ತನಿಖೆ ನಡೆಸಿ ವರದಿ ನೀಡಿದ್ದ ಮಾಜಿ ಲೋಕಾಯುಕ್ತ ಸಂತೋಷ ಹೆಗ್ಡೆಯವರೇ ಈ ಬಗ್ಗೆ ಉಲ್ಲೇಖೀಸಿದ್ದರು. ಒಂದು ಕಾಲದಲ್ಲಿ ಇಡೀ ಜಿಲ್ಲೆಯನ್ನು ರೆಡ್ಡಿ ಟೀಂ ತಮ್ಮ ಕಪಿಮುಷ್ಟಿಯಲ್ಲಿಟ್ಟುಕೊಂಡಿತ್ತು. ಮೊದಲು ಇಡೀ ಬಳ್ಳಾರಿಯಲ್ಲಿ ಭಯದ ವಾತಾವರಣ ಇತ್ತು. ರೆಡ್ಡಿ ಬ್ರದರ್ಸ್‌ ಎಲ್ಲ ಕಡೆ ಗೂಂಡಾಗಳನ್ನು ಬಿಟ್ಟಿದ್ದರು. ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಇಲ್ಲಿಗೆ ಬರದಂತೆ ನನಗೇ ಬೇಲಿ ಹಾಕಿ ರಸ್ತೆ ತಡೆದಿದ್ದರು. ಬಳ್ಳಾರಿಗೆ ಬಂದಾಗ ಜಾಗ ಕೂಡ ಸಿಗದಂತೆ ಮಾಡಿದ್ದರು. ಮಾಜಿ ಸಚಿವ ಜನಾರ್ದನ ರೆಡ್ಡಿ ನಿರ್ಮಿಸಿಕೊಂಡಿರುವ ಮನೆಯ ಬಳಿ ಎಷ್ಟು ಅಮಾಯಕರ ಮನೆಗಳು ಬಲಿಯಾಗಿವೆಯೋ? ರೆಡ್ಡಿ ಬ್ರದರ್ಸ್‌ ಹಾಗೂ ರಾಮುಲು ಇಡೀ ಜಿಲ್ಲೆಯಲ್ಲಿ ಸರ್ವಾಧಿಕಾರಿಗಳಂತೆ
ವರ್ತಿಸುತ್ತಿದ್ದರು ಎಂದು ಜರಿದರು. ರಾಮುಲು ಸಂಸತ್‌ನಲ್ಲಿ ಒಮ್ಮೆಯೂ ಬಾಯಿ ಬಿಟ್ಟಿಲ್ಲ ಎಂದು ಹೇಳಿದ್ದೆ. ಆದರೆ, ನಾನು ಇಂತಿಷ್ಟು ಬಾರಿ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ. ಆದರೆ, ಅವರು ಎಲ್ಲಿ ಬಾಯಿ ಬಿಟ್ಟಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಪುನರುತ್ಛರಿಸಿದರು.

ಜಾತಿ ಬಣ್ಣ ಹಚ್ಚಬೇಡಿ, ಮಿಸ್ಟರ್‌ ರಾಮುಲು: ನಾನು ಟೀಕೆ ಮಾಡಿದರೆ ಇಡೀ ಕುರುಬರೆಲ್ಲರೂ ಟೀಕೆ ಮಾಡಿದಂತಾಗುತ್ತಾ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ರಾಜಕೀಯದ ಟೀಕೆಗೆ ಜಾತಿಯ ಬಣ್ಣ ಹಚ್ಚಬಾರದು. ಜಾತಿ ಬಗ್ಗೆ ಮಾತನಾಡುವ ರಾಮುಲು ವಾಲ್ಮೀಕಿ
ಸಮುದಾಯಕ್ಕೆ ಕೊಟ್ಟ ಕೊಡುಗೆ ಏನು ಎಂಬುದನ್ನು ಹೇಳಲಿ. ಶಾಸಕರ ಭವನದ ಎದುರು ವಾಲ್ಮೀಕಿ ಪ್ರತಿಮೆಯನ್ನು ರಾಮುಲು ಸ್ಥಾಪನೆ ಮಾಡಿದ್ದಾರಾ? ಬರೀ ಜಾತಿ ಹೆಸರು ಹೇಳಿಕೊಂಡು ರಾಜಕೀಯ ಮಾಡೋದು ಬಿಡು ಮಿಸ್ಟರ್‌ ರಾಮುಲು ಎಂದು ಕಿಡಿಕಾರಿದರು.

ಜನರಿಂದ ಕೇಳಿ ತಿಳಿದುಕೊಳ್ಳಿ: ಶ್ರೀರಾಮುಲು ಹಂಪಿ: 371(ಜೆ) ಬಗ್ಗೆ ರಾಮುಲು ಎಷ್ಟು ಹೋರಾಟ ಮಾಡಿದ್ದಾರೆ ಎಂಬುದನ್ನು ಸಿದ್ದರಾಮಯ್ಯನವರು ನನ್ನ ಬಳಿ ಕೇಳ್ಳೋದು ಬೇಕಿಲ್ಲ. ಜನರಿಗೆ ಗೊತ್ತಿದೆ. ಅವರಿಂದಲೇ ಕೇಳಿ ತಿಳಿದುಕೊಳ್ಳಲಿ ಎಂದು ಬಿಜೆಪಿ ಮುಖಂಡ ಶ್ರೀರಾಮುಲು ತಿರುಗೇಟು ನೀಡಿದರು. ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಅವರು, 371(ಜೆ) ಬಗ್ಗೆ ದಾಖಲಾತಿಗಳನ್ನು ತೆಗೆದು ನೋಡಿದರೆ ಎಷ್ಟು ಹೋರಾಟಗಳನ್ನು ಮಾಡಿದ್ದೇವೆ ಎಂಬುದು ಅವರಿಗೆ ತಿಳಿಯಲಿದೆ.

ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿ ಯಾದ ಬಳಿಕ ರಾಜ್ಯದ ಎಲ್ಲ ಭಾಗದ ಜನರಿಗೆ ಪರಿಚಯವಾಗಿದ್ದಾರೆ. ಅದಕ್ಕೂ ಮುನ್ನ ಅವರು ಯಾರಿಗೂ ಗೊತ್ತಿರಲಿಲ್ಲ. ಹಾಗಾಗಿ 371(ಜೆ) ಬಗ್ಗೆ ರಾಮುಲು ಎಷ್ಟು ಹೋರಾಟ ಮಾಡಿದ್ದಾರೆ ಎಂಬುದನ್ನು ನನ್ನ ಬಳಿ ಕೇಳ್ಳೋದು ಬೇಕಿಲ್ಲ. ಜನರಿಗೆ ಗೊತ್ತಿದೆ. ಅವರಿಂದಲೇ ಕೇಳಿ ತಿಳಿದುಕೊಳ್ಳಲಿ ಎಂದರು. ಶ್ರೀರಾಮುಲು ಅವರು ಕೇವಲ ಗಡ್ಡ ಬಿಟ್ಟು, ಉದ್ಭವ ಮೂರ್ತಿ ಇದ್ದಂತೆ. ಇಂತವರನ್ನು ಇಲ್ಲಿಯ ಜನ ಗೆಲ್ಲಿಸಿ ಸಂಸತ್‌ಗೆ ಕಳುಹಿಸಿದ್ದಾರೆ ಎಂದೆಲ್ಲ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ನಾನು ಸಂಸತ್‌ ಸದಸ್ಯನಾದ ಬಳಿಕ ಸುಮಾರು 572 ಪ್ರಶ್ನೆ ಕೇಳಿದ್ದೇನೆ. 20 ಚರ್ಚೆಗಳಲ್ಲಿ ಭಾಗವಹಿಸಿದ್ದೇನೆ. ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ  ಕೇವಲ 12 ಚರ್ಚೆಗಳಲ್ಲಿ ಭಾಗವಹಿಸಿದ್ದು, ಒಂದು ಪ್ರಶ್ನೆಯನ್ನೂ  ಕೇಳಿಲ್ಲ ಎಂದರು. ನಾವು ವಾಲ್ಮೀಕಿ ಸಮುದಾಯದವರು. ಬೇಟೆಯನ್ನು ನಂಬಿಕೊಂಡು ಬಂದವರು. ಸಿದ್ದರಾಮಯ್ಯ ನಮ್ಮ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ ಎಂದರು.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.