ಹೊಟ್ಟೆ ನೋವಿನಿಂದ ಬಳಲಿದ ಸಿಎಂ ; ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು
Team Udayavani, Oct 24, 2018, 3:53 PM IST
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ಹೊಟ್ಟೆನೋವಿನಿಂದ ಬಳಲಿದ್ದು , ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.
ಸಿಎಂ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಿ ಸಾಮಾನ್ಯ ಆರೋಗ್ಯ ಪರೀಕ್ಷೆ ಗಳನ್ನು ಮಾಡಲಾಗಿದೆ.
ವೈದ್ಯರು ಒಂದು ದಿನಗಳ ಕಾಲ ವಿಶ್ರಾಂತಿ ಪಡೆಯಲು ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.