ಲೋಡ್ ಶೆಡ್ಡಿಂಗ್ ಮಾಡದಂತೆ ಸಿಎಂ ಸೂಚನೆ
Team Udayavani, Oct 25, 2018, 6:00 AM IST
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡದಂತೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.
ವಿದ್ಯುತ್ ಸಮಸ್ಯೆ ಇದ್ದರೂ ಲೋಡ್ ಶೆಡ್ಡಿಂಗ್ ಮಾಡದೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕೆಂದು ಕೆಪಿಟಿಸಿಎಲ್ ಅಧಿಕಾರಿಗಳು ಹಾಗೂ ಎಲ್ಲ ವಿದ್ಯುತ್ ಕಂಪನಿಗಳಿಗೆ ನಿರ್ದೇಶಿಸಿದ್ದಾರೆ.
ಕೇಂದ್ರ ಸರ್ಕಾರ ಒಪ್ಪಂದದ ಪ್ರಕಾರ ರಾಜ್ಯಕ್ಕೆ ಕೊಡಬೇಕಿದ್ದ ಕಲ್ಲಿದ್ದಲು ಪೂರೈಕೆ ಆಗದಿರುವುದರಿಂದ ರಾಯಚೂರು ಥರ್ಮಲ್ ಘಟಕದಲ್ಲಿ ವಿದ್ಯುತ್ ಉತ್ಪಾದನೆ ಕುಂಠಿತವಾಗಿದೆ. ಕೇಂದ್ರದ ವಿದ್ಯುತ್ ಗ್ರಿಡ್ನಿಂದ ಸಹ ರಾಜ್ಯಕ್ಕೆ ಸಮ ಪ್ರಮಾಣದಲ್ಲಿ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಆದರೂ, ಸೋಲಾರ್ ಮತ್ತು ಜಲ ವಿದ್ಯುತ್ ಆಧರಿಸಿ ಲೋಡ್ ಶೆಡ್ಡಿಂಗ್ ಇಲ್ಲದೆ ರಾಜ್ಯದಲ್ಲಿ ವಿದ್ಯುತ್ ಸರಬರಾಜು ಮಾಡಬೇಕು ಎಂದು ಆದೇಶಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.