“ಕೈ’ಗೆ ಕೋಟೆ ಕಟ್ಟುವ ತವಕ, ರಾಮುಲುಗೆ ಅಸ್ತಿತ್ವದ ಸವಾಲು


Team Udayavani, Nov 1, 2018, 10:15 AM IST

b-50.jpg

ಬಳ್ಳಾರಿ: ಹೈವೋಲ್ಟೆಜ್‌ ಚುನಾವಣೆ ಎಂದೇ ಬಿಂಬಿಸಲಾಗುತ್ತಿರುವ ಬಳ್ಳಾರಿ ಲೋಕಸಭೆ ಉಪಚುನಾವಣೆ ಅಲ್ಪಾವಧಿಗೆ ಆಗಿದ್ದರೂ ಸಾರ್ವತ್ರಿಕ ಚುನಾವಣೆಗಿಂತಲೂ ಹೆಚ್ಚು ರಂಗೇರಿದೆ. ಇದನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿರುವ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ಏರ್ಪಟ್ಟಿದ್ದು, ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಜಿದ್ದಾಜಿದ್ದಿನ ಹೋರಾಟದಲ್ಲಿ ತೊಡಗಿವೆ. ರಾಜ್ಯದಲ್ಲಿ ನಡೆಯುತ್ತಿರುವ ಮೂರು ಲೋಕಸಭೆ ಕ್ಷೇತ್ರಗಳ ಉಪಚುನಾವಣೆ ಪೈಕಿ ಎರಡು ಕ್ಷೇತ್ರಗಳನ್ನು ಮಿತ್ರಪಕ್ಷ ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ಕಾಂಗ್ರೆಸ್‌, ಗಣಿನಾಡು ಬಳ್ಳಾರಿಯಲ್ಲಿ ಮಾತ್ರ ತನ್ನ ಅಭ್ಯರ್ಥಿ ವಿ.ಎಸ್‌. ಉಗ್ರಪ್ಪ ಅವರನ್ನು ಕಣಕ್ಕಿಳಿಸಿದೆ. ಹಾಗಾಗಿ, ಮಾಜಿ ಸಿಎಂ ಸಿದ್ದರಾಮಯ್ಯ, ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್‌ ಈ ಚುನಾವಣೆ ಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದಾರೆ. ಇನ್ನು, ತಮ್ಮ ರಾಜೀನಾಮೆಯಿಂದ ಎದುರಾದ ಚುನಾವಣೆ ಆಗಿದ್ದರಿಂದ ಹಾಗೂ ಸಹೋದರಿ ಜೆ.ಶಾಂತಾ ಅವರೇ ಸ್ಪರ್ಧಿಸಿರುವುದರಿಂದ ಶಾಸಕ ಬಿ.ಶ್ರೀರಾಮುಲು ಅವರೂ ವೈಯಕ್ತಿಕ ವಾಗಿ ಪ್ರತಿಷ್ಠೆಯನ್ನಾಗಿ ಸ್ವೀಕರಿಸಿದ್ದಾರೆ. ಇಲ್ಲಿ ಯಾರೇ ಗೆದ್ದರೂ ಅಂತರ ತೀರ ಕಡಿಮೆ ಯಾಗಿರಲಿದೆ ಎಂಬುದು ಜನಾಭಿಪ್ರಾಯ.

ವೆಂಕೋಬಿ ಸಂಗನಕಲ್ಲು 

6 ಕಾಂಗ್ರೆಸ್‌ ಶಾಸಕರ ಬಲ: ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಈ ಪೈಕಿ ಆರರಲ್ಲಿ ಕಾಂಗ್ರೆಸ್‌ ಶಾಸಕರಿದ್ದಾರೆ. ಹೀಗಾಗಿ, ಕಾಂಗ್ರೆಸ್‌ ಮುಖಂಡರು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಬಳ್ಳಾರಿಯನ್ನು ಮತ್ತೆ ಪಕ್ಷದ ಭದ್ರಕೋಟೆಯಾಗಿಸಲು ಶತಾಯ ಗತಾಯ ಯತ್ನಿಸುತ್ತಿದ್ದಾರೆ. ಇನ್ನು, ಕಳೆದ ಮೂರು ಅವಧಿಗೆ ಲೋಕಸಭೆ ಚುನಾವಣೆಯಲ್ಲಿ ಜಯ ಗಳಿಸಿದ್ದ ಬಿಜೆಪಿ, 2008ರ ವಿಧಾನಸಭೆ ಚುನಾವಣೆಯಲ್ಲಿ ಎಂಟು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಳ್ಳಾರಿಯನ್ನು ಪಕ್ಷದ ಭದ್ರಕೋಟೆಯನ್ನಾಗಿಸಿತ್ತು. ಆದರೆ, 2013ರ ಚುನಾವಣೆಯಲ್ಲಿ ಶ್ರೀರಾಮುಲು ಅವರದ್ದೇ ಆದ ಬಿಎಸ್ಸಾರ್‌ ಪಕ್ಷದ ಸವಾಲಿನಿಂದಾಗಿ ಕೇವಲ ಒಂದು ಕ್ಷೇತ್ರದಲ್ಲಿ ಗೆದ್ದಿದ್ದ ಬಿಜೆಪಿ, 2018ರ ಚುನಾವಣೆಯಲ್ಲಿ ಮೂರರಲ್ಲಿ ಜಯ ಗಳಿಸಿತ್ತು. ಪ್ರತಿ ಚುನಾವಣೆಯಲ್ಲೂ “ಶಕ್ತಿ’
ಕಳೆದುಕೊಳ್ಳುತ್ತಿರುವ ಬಿಜೆಪಿಗೆ ಈ ಲೋಕಸಭೆ ಕ್ಷೇತ್ರವೂ ಕೈ ತಪ್ಪಿದರೆ ಶ್ರೀರಾಮುಲು ಅವರಿಗೆ ಅಸ್ತಿತ್ವದ ಪ್ರಶ್ನೆ ಎದುರಾಗುವ ಸಾಧ್ಯತೆಯಿದೆ. ಹೀಗಾಗಿ, ಸಹೋದರಿ ಜೆ.ಶಾಂತಾ ಅವರನ್ನು ಗೆಲ್ಲಿಸಿಕೊಳ್ಳಬೇಕಾದ ಅನಿವಾರ್ಯತೆ ಅವರಿಗೆ ಎದುರಾಗಿದೆ.

ವೈಯಕ್ತಿಕ ವಿಚಾರಗಳೇ ಅಸ್ತ್ರ: ಉಪಚುನಾವಣೆಯಲ್ಲಿ ಜಿಲ್ಲೆಯ ಅಭಿವೃದ್ಧಿಗಿಂತ ವೈಯಕ್ತಿಕ ವಿಚಾರಗಳೇ ಪ್ರಚಾರದ ಪ್ರಮುಖ ಅಸ್ತ್ರಗಳಾಗಿವೆ. ಶ್ರೀರಾಮುಲು ರಾಜೀನಾಮೆಯಿಂದ ಎದುರಾದ ಮೂರು ಉಪಚುನಾವಣೆ, ಸಹೋದರಿಯನ್ನೇ ಕಣಕ್ಕಿಳಿಸಿದ್ದು, 10 ವರ್ಷ ಸಂಸದರಾಗಿದ್ದ ಸಹೋದರ-ಸಹೋದರಿಯರು ಸಂಸತ್‌ನಲ್ಲಿ ಜಿಲ್ಲೆಯ ಬಗ್ಗೆ ಒಮ್ಮೆಯೂ ಧ್ವನಿಯೆತ್ತಿಲ್ಲ ಎಂಬುದು ಕಾಂಗ್ರೆಸ್‌ನ ಪ್ರಚಾರದ ಪ್ರಮುಖ ಅಸ್ತ್ರಗಳು. ಕಾಂಗ್ರೆಸ್‌ ಅಭ್ಯರ್ಥಿ ವಿ.ಎಸ್‌. ಉಗ್ರಪ್ಪ ಸ್ಥಳೀಯರಲ್ಲ. 1980ರ ದಶಕದಲ್ಲಿ ಎಲ್‌.ಜಿ.ಹಾವನೂರು ಅವರನ್ನು ಸೋಲಿಸಿದ್ದ ಉಗ್ರಪ್ಪ ಇದೀಗ ಶಾಂತಾ ಅವರನ್ನು ಸೋಲಿಸಲು ಬಳ್ಳಾರಿಗೆ ಬಂದಿದ್ದಾರೆ ಎಂಬುದು ಸೇರಿ ಕಾಂಗ್ರೆಸ್‌ನವರ ಪ್ರತಿಯೊಂದು ಆರೋಪಗಳನ್ನು ಜಾತಿ ಮತ್ತು ಸಮುದಾಯಕ್ಕೆ  ಬಿಂಬಿಸಿಕೊಳ್ಳುತ್ತಿರುವುದು ಬಿಜೆಪಿಯ ಪ್ರಚಾರದ ಪ್ರಮುಖ ವಿಷಯ.

ನಿರ್ಣಾಯಕ ಅಂಶ
ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 17,08,266 ಮತದಾರರಿದ್ದಾರೆ. ಇದರಲ್ಲಿ ಬಹುಸಂಖ್ಯಾತ ಹಾಗೂ ಪ್ರಬಲವಾದ ಪರಿಶಿಷ್ಟ ಸಮುದಾಯ, ವೀರಶೈವ ಲಿಂಗಾಯತ ಮತಗಳು ನಿರ್ಣಾಯಕ ಪಾತ್ರ ವಹಿಸಲಿವೆ. ಈ ಕ್ಷೇತ್ರ ಪರಿಶಿಷ್ಟ ಪಂಗಡಕ್ಕೆ  ಮೀಸಲಾಗಿದ್ದರಿಂದ ಆ ಸಮುದಾಯದ ಮತಗಳು ಹಂಚಿ ಹೋಗುವ ಸಾಧ್ಯತೆಯಿದೆ. ಕಾಂಗ್ರೆಸ್‌ನ ಸಾಂಪ್ರದಾಯಿಕ ಎನ್ನಲಾಗುವ ಮುಸ್ಲಿಂ, ಪರಿಶಿಷ್ಟ ಜಾತಿ, ಕುರುಬ ಮತಗಳು ಕಳೆದ ವಿಧಾನಸಭೆ ಚುನಾವಣೆಯಂತೆ ಈ ಬಾರಿಯೂ ಆ ಪಕ್ಷದತ್ತ ವಾಲುವ ಸಾಧ್ಯತೆಯಿದೆ. ವೀರಶೈವ ಲಿಂಗಾಯತರು ಬಿಜೆಪಿಯತ್ತ ಒಲವು ತೋರಬಹುದೆಂದು ಅಂದಾಜಿಸಲಾಗಿದೆ. ಇನ್ನುಳಿದ ಎಲ್ಲ ಸಮುದಾಯಗಳ ಮತಗಳ ಮೇಲೆ ಎರಡೂ ಪಕ್ಷಗಳೂ ಕಣ್ಣಿಟ್ಟಿವೆ.

ಅಭ್ಯರ್ಥಿಗಳು 
ಬಿಜೆಪಿ: ಜೆ.ಶಾಂತಾ
ಕಾಂಗ್ರೆಸ್‌: ವಿ.ಎಸ್‌.ಉಗ್ರಪ್ಪ 
ಪಕ್ಷೇತರ: ಡಾ| ಟಿ.ಆರ್‌.ಶ್ರೀನಿವಾಸ್‌, ಪಂಪಾಪತಿ 

ಪ್ರತಿ ಹಳ್ಳಿಗೂ ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದೇನೆ. ಚುನಾವಣೆ ಯಲ್ಲಿ ಜಿಲ್ಲೆಯ ಮಗಳು ನಿಂತಿದ್ದಾರೆ ಎಂಬುದನ್ನು 
ಅರಿತು ನನ್ನ ಪರ ಮತದಾನ ಮಾಡಿ, ಆಶೀರ್ವಾದ ಮಾಡಲಿದ್ದಾರೆ. 
 
● ಜೆ.ಶಾಂತಾ, ಬಿಜೆಪಿ ಅಭ್ಯರ್ಥಿ.

ಬಳ್ಳಾರಿ ಲೋಕಸಭಾ ಕ್ಷೇತ್ರಾದ್ಯಂತ ಪ್ರವಾಸ ಕೈಗೊಂಡಿದ್ದೇನೆ. ಎಲ್ಲೆಡೆ ಉತ್ತಮ ಸ್ಪಂದನೆ ದೊರೆತಿದೆ. ಜನರು ಆಶೀರ್ವಾದ ಮಾಡಲಿದ್ದು, ಗೆಲ್ಲುವುದು ಖಚಿತ.
● ಉಗ್ರಪ್ಪ, ಕಾಂಗ್ರೆಸ್‌ ಅಭ್ಯರ್ಥಿ

ಟಾಪ್ ನ್ಯೂಸ್

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.