ಕೆಎಂಎಫ್ ಮೂಲಕ ಮೆಕ್ಕೆಜೋಳ ಖರೀದಿ
Team Udayavani, Oct 26, 2018, 6:55 AM IST
ಬೆಂಗಳೂರು: ಕೆಎಂಎಫ್ ಮೂಲಕ 2 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ರೈತರಿಂದ ನೇರವಾಗಿ ಖರೀದಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಖಾಸಗಿಯವರು ರೈತರಿಂದ ಪ್ರತಿ ಕ್ವಿಂಟಾಲ್ಗೆ 800 ರಿಂದ 900 ರೂ.ಗೆ ಮೆಕ್ಕೆಜೋಳ ಖರೀದಿಸುತ್ತಿದ್ದು,ಕೆಎಂಎಫ್ ಮೂಲಕ 1,300ರೂ.ಗೆ ಪ್ರತಿ ಕ್ವಿಂಟಾಲ್ ಖರೀದಿಗೆ ಸೂಚಿಸಲಾಗಿದೆ. ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ, ಮೆಕ್ಕೆಜೋಳ ಖರೀದಿಗಾಗಿ ರಾಜ್ಯ ಸರ್ಕಾರ 50 ಕೋಟಿ ರೂ. ನೀಡಿದೆ.
ಖಾಸಗಿಯವರು 800 ರಿಂದ 900 ರೂ.ಗೆ ಖರೀದಿಸುತ್ತಿದ್ದಾರೆ. ಹೀಗಾಗಿ, ಕೆಎಂಎಫ್ ನೇರವಾಗಿ ರೈತರಿಂದ 1,300 ರೂ.ಗೆ ಖರೀದಿಸಿ ಮಧ್ಯವರ್ತಿಗಳ ಹಾವಳಿಯಿಂದ ತಪ್ಪಿಸಲಾಗುವುದು. ಈ ಬಾರಿ 54 ಲಕ್ಷ ಮೆಟ್ರಿಕ್ ಟನ್ ಮೆಕ್ಕೆ ಜೋಳ ಇಳುವರಿ ನಿರೀಕ್ಷಿಸಲಾಗಿದೆ ಎಂದು ತಿಳಿಸಿದರು.
ಛತ್ತೀಸ್ಗಢದಿಂದ ಅನ್ನಭಾಗ್ಯ ಯೋಜನೆಗೆ ಅಕ್ಕಿ ಖರೀದಿಸುವ ಬದಲು ರಾಜ್ಯದ ರೈತರು ಬೆಳೆದ ಭತ್ತ ಕ್ವಿಂಟಾಲ್ಗೆ 1,200 ರೂ.ನಂತೆ ಖರೀದಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆಂದು ಹೇಳಿದರು. ಸಭೆಯಲ್ಲಿ ಸಚಿವರಾದ ಎಚ್.ಡಿ.ರೇವಣ್ಣ, ವೆಂಕಟರಾವ್ ನಾಡಗೌಡ, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಸಿಂಗ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್