ಉಪ ಚುನಾವಣೆ ಎಫೆಕ್ಟ್: ಶಕ್ತಿ ಕೇಂದ್ರ ಖಾಲಿ ಖಾಲಿ
Team Udayavani, Oct 27, 2018, 6:00 AM IST
ಬೆಂಗಳೂರು: ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಶಕ್ತಿಕೇಂದ್ರ ವಿಧಾನಸೌಧ- ವಿಕಾಸಸೌಧ ಭಣಗುಡುತ್ತಿದೆ. ಆಡಳಿತಾರೂಢ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರ್ಕಾರದ ಸಚಿವರಿಗೆ ಬಳ್ಳಾರಿ, ಶಿವಮೊಗ್ಗ ಕ್ಷೇತ್ರಗಳಲ್ಲಿ ಉಸ್ತುವಾರಿ ವಹಿಸಿರುವುದರಿಂದ ಯಾವೊಬ್ಬ ಸಚಿವರೂ ವಿಧಾನಸೌಧದತ್ತ ತಲೆ ಹಾಕುತ್ತಿಲ್ಲ.
ವಿಧಾನಸೌಧ-ವಿಕಾಸಸೌಧಕ್ಕೆ ಸಚಿವರನ್ನು ಹುಡುಕಿಕೊಂಡು ಬರುವ ಸಾರ್ವಜನಿಕರಿಗೆ “ಸಾಹೇಬರು’ ಇಲ್ಲ. ಎಲೆಕ್ಷನ್ ಆದ ಮೇಲೆ ಸಿಕ್ತಾರೆ ಎಂಬ ಉತ್ತರ ಸಿಗುತ್ತಿದೆ. ಸಚಿವರು ಉಪ ಚುನಾವಣಾ ಪ್ರಚಾರಕ್ಕೆ ಹೋಗಿರುವುದರಿಂದ ಇಲಾಖಾ ಕಾರ್ಯದರ್ಶಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ಕಚೇರಿಗಳತ್ತ ಬರುವುದು ಕಡಿಮೆ. ಹೀಗಾಗಿ, ಉಪ ಚುನಾವಣೆಯಿಂದಾಗಿ ಕೆಲಸ ಕಾರ್ಯಗಳು ಸ್ಥಗಿತಗೊಂಡಂತಾಗಿದೆ.
ಸಂಪುಟದ ಎಲ್ಲ ಸಚಿವರಿಗೂ ಉಪ ಚುನಾವಣಾ ಉಸ್ತುವಾರಿ ನೀಡಿಲ್ಲ. ಆದರೂ ಕೆಲವು ಸಚಿವರು ಉಪ ಚುನಾವಣೆ ನೆಪದಲ್ಲಿ ವಿಧಾನಸೌಧಕ್ಕೆ ಬರುತ್ತಿಲ್ಲ. ಗುರುವಾರ ನಡೆದ ಸಚಿವ ಸಂಪುಟ ಸಭೆಗೂ ಹಲವು ಸಚಿವರು ಗೈರು ಹಾಜರಾಗಿದ್ದರು. ಇತ್ತೀಚೆಗಷ್ಟೇ ಯಡಿಯೂರಪ್ಪ ಅವರು ಸಚಿವರ್ಯಾರೂ ವಿಧಾನಸೌಧಕ್ಕೆ ಹೋಗುತ್ತಿಲ್ಲ. ಹೀಗಾಗಿ, ಉಪ ಚುನಾವಣೆ ಮುಗಿಯುವವರೆಗೆ ವಿಧಾನಸೌಧ ಮುಚ್ಚುಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ