ಸಮ್ಮಿಶ್ರ ಸರ್ಕಾರದಲ್ಲಿ ಆಶ್ರಯ ಮನೆಗೆ ಮೀನಮೇಷ


Team Udayavani, Oct 27, 2018, 6:00 AM IST

20.jpg

ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು ಐದು ತಿಂಗಳಾದರೂ ಒಟ್ಟಾರೆ ವಸತಿ ಯೋಜನೆಯಡಿ ಮನೆಗಳನ್ನು ನೀಡುವ ಬಗ್ಗೆ ಸರ್ಕಾರ ಇನ್ನೂ ಮೀನಮೇಷ ಎಣಿಸುತ್ತಿದೆ. ಆರ್ಥಿಕ ವರ್ಷ ಆರಂಭವಾಗಿ ಆರು ತಿಂಗಳು
ಕಳೆದಿದ್ದರೂ ಹೊಸ ಸರ್ಕಾರ ಬಂದ ಐದು ತಿಂಗಳಾದರೂ ವಿಧನಾಸಭಾ ಕ್ಷೇತ್ರವಾರು ಪಂಚಾಯಿತಿಗಳಿಗೆ ಈ ವರ್ಷದ ಮನೆಗಳ ಟಾರ್ಗೆಟ್‌ ಪಟ್ಟಿ ನೀಡಿಲ್ಲ.

ಪ್ರತಿ ವರ್ಷ ಆಗಸ್ಟ್‌, ಸೆಪ್ಟೆಂಬರ್‌ನಲ್ಲಿಯೇ ರಾಜ್ಯ ಸರ್ಕಾರ ಯಾವ ಯೋಜನೆಯಲ್ಲಿ ಯಾವ ವಿಧಾನಸಭಾ ಕ್ಷೇತ್ರಗಳಿಗೆ ಎಷ್ಟು ಮನೆಗಳನ್ನು ನೀಡಲಾಗುತ್ತದೆ ಎಂದು ಶಾಸಕರಿಗೆ ಮನೆಗಳ ಹಂಚಿಕೆ ವಿವರ ಕಳುಹಿಸಿಕೊಡುತ್ತದೆ. ಶಾಸಕರು ತಮ್ಮ ಕ್ಷೇತ್ರಕ್ಕೆ ನಿಗದಿಯಾಗಿರುವ ಮನೆಗಳನ್ನು ಪಂಚಾಯಿತಿವಾರು ಹಂಚಿಕೆ ಮಾಡಲು ಫ‌ಲಾನುಭವಿಗಳ ಆಯ್ಕೆಗೆ ಪಂಚಾಯಿತಿಗಳಿಗೆ ಸೂಚಿಸುತ್ತಾರೆ. ಅದರಂತೆ ಗ್ರಾಮ ಪಂಚಾಯಿತಿಯಿಂದ ಗ್ರಾಮಸಭೆಗಳನ್ನು ಮಾಡಿ, ಫ‌ಲಾನುಭವಿಗಳನ್ನು ಆಯ್ಕೆ ಮಾಡಿ, ರಾಜ್ಯ ಸರ್ಕಾರಕ್ಕೆ ಪಟ್ಟಿ ಕಳುಹಿಸುತ್ತಾರೆ. ಆ ನಂತರ ಸರ್ಕಾರ ಅನುಮತಿ ನೀಡಿ, ಮನೆ ನಿರ್ಮಾಣಕ್ಕೆ ಅನುಮತಿ ನೀಡುತ್ತದೆ. ಸರ್ಕಾರ ಟಾರ್ಗೆಟ್‌ ನೀಡಿದ ನಂತರ ಫ‌ಲಾನುಭವಿಗಳ ಆಯ್ಕೆ ಮಾಡಿ, ರಾಜೀವ್‌ ಗಾಂಧಿ ವಸತಿ ನಿಗಮಕ್ಕೆ ಕಳುಹಿಸಿ ಅನುಮೋದನೆ
ಪಡೆಯಲು ಕನಿಷ್ಠ ಮೂರರಿಂದ ನಾಲ್ಕು ತಿಂಗಳು ಸಮಯ ಬೇಕಾಗುತ್ತದೆ. ಈ ವರ್ಷದ ಟಾರ್ಗೆಟ್‌ನ್ನು ರಾಜ್ಯ ಸರ್ಕಾರ
ಅಕ್ಟೋಬರ್‌ ತಿಂಗಳಾಂತ್ಯಕ್ಕೆ ನೀಡಿದರೂ, ಫ‌ಲಾನುಭವಿಗಳಿಗೆ ಆದೇಶ ದೊರೆತು ಮನೆ ನಿರ್ಮಾಣ ಆರಂಭಿಸಲು ಈ ವರ್ಷ ಮುಗಿದು ಹೋಗುತ್ತದೆ. ವಸತಿ ಇಲಾಖೆ ಮೂಲಗಳ ಪ್ರಕಾರ ಹಣಕಾಸು ಇಲಾಖೆ ಎಲ್ಲದಕ್ಕೂ ಸಾಲ ಮನ್ನಾ ಕಾರಣ ಹೇಳಿ ಮೂಂದೂಡುತ್ತಿದೆ ಎಂದು ತಿಳಿದು ಬಂದಿದೆ. 

ರಾಜೀವ್‌ ಗಾಂಧಿ ವಸತಿ ನಿಗಮದಿಂದ ಬಸವ ವಸತಿ ಯೋಜನೆ, ಇಂದಿರಾ ಆವಾಸ್‌ ಹಾಗೂ ರಾಜ್ಯ ಸರ್ಕಾರದ ಡಾ. ಅಂಬೇಡ್ಕರ್‌ ವಸತಿ ಯೋಜನೆಗಳ ಮೂಲಕ ಮನೆಗಳನ್ನು ನೀಡಲಾಗುತ್ತದೆ. ನಗರದಲ್ಲಿ  ವಾಜಪೇಯಿ ನಗರ ವಸತಿ ಯೋಜನೆ, ದೇವರಾಜ
ಅರಸು ವಸತಿ ಯೋಜನೆ, ಪ್ರಧಾನಮಂತ್ರಿ ಆವಾಸ್‌ ಯೋಜನೆಗಳ ಮೂಲಕ ಫ‌ಲಾನುಭವಿಗಳನ್ನು ಆಯ್ಕೆ ಮಾಡಿ ಮನೆಗಳ ವಿತರಣೆ ಮಾಡಲಾಗುತ್ತದೆ. ಮೂಲಗಳ ಪ್ರಕಾರ ಹಿಂದಿನ ಸರ್ಕಾರದ ಯೋಜನೆಗಳ ನಿಗದಿಯಂತೆ 17-18 ನೇ ಸಾಲಿನ ಆಶ್ರಯ ಮನೆಗಳನ್ನು ಮಾರ್ಚ್‌ನಲ್ಲಿ ಬಿಡುಗಡೆ ಮಾಡಲಾಗಿದ್ದು, ಫ‌ಲಾನುಭವಿಗಳ ಮನೆ ನಿರ್ಮಾಣಕ್ಕೆ ಅನುಮತಿ ದೊರೆತಿದ್ದರೂ, ಸಂಪೂರ್ಣ ಹಣ ಬಿಡುಗಡೆಯಾಗದೇ ಆ ಮನೆಗಳ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ ಎಂದು ತಿಳಿದು ಬಂದಿದೆ.

4 ಲಕ್ಷ ಮನೆಗಳ ನಿರ್ಮಾಣ ಗುರಿ: ಸಮ್ಮಿಶ್ರ ಸರ್ಕಾರ ಐದು ವರ್ಷದಲ್ಲಿ 20 ಲಕ್ಷ ಮನೆಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಿದೆ. ಪ್ರತಿ ವರ್ಷ ಕನಿಷ್ಠ 4 ಲಕ್ಷ ಮನೆಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಗ್ರಾಮೀಣ ಪ್ರದೇಶಕ್ಕೆ 2.5 ಲಕ್ಷ ಮನೆ ಹಾಗೂ ನಗರ ಪ್ರದೇಶಕ್ಕೆ 1.5 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಆದರೆ, ಗ್ರಾಮೀಣ ಪ್ರದೇಶದಲ್ಲಿ ಫ‌ಲಾನುಭವಿಗಳ ಆಯ್ಕೆಗೆ ಆದಾಯ ಮಿತಿಯನ್ನು 32 ಸಾವಿರದಿಂದ 87 ಸಾವಿರ ಅಥವಾ ಬಿಪಿಎಲ್‌ ಕಾರ್ಡ್‌ಗೆ ಇರುವ ಮಿತಿ 1.20 ಲಕ್ಷ ರೂ.ಗೆ ಹೆಚ್ಚಳ ಮಾಡಲು ವಸತಿ ಇಲಾಖೆ ಹಣಕಾಸು ಇಲಾಖೆಗೆ ಮನವಿ ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದೆ.

ಈ ವರ್ಷದಲ್ಲಿ 4 ಲಕ್ಷ ಆಶ್ರಯ ಮನೆ ನೀಡಲು ಸರ್ಕಾರ ತೀರ್ಮಾನಿಸಿದೆ. ಸಿಎಂ ಜತೆ ಸಭೆ ನಡೆಸಲಾಗಿದೆ. ಗ್ರಾಮೀಣ
ಫ‌ಲಾನುಭವಿಗಳ ಆದಾಯದ ಮಿತಿ ಹೆಚ್ಚಳ ಮಾಡುವ ಕುರಿತು ಆರ್ಥಿಕ ಇಲಾಖೆಗೆ ಮನವಿ ಮಾಡಿಕೊಂಡಿದ್ದರಿಂದ ವಿಳಂಬವಾಗಿದೆ.
ಆರ್ಥಿಕ ಮಿತಿ ಹೆಚ್ಚಳವಾಗುವ ಸಾಧ್ಯತೆಯಿದೆ. ಹಣಕಾಸು ಇಲಾಖೆ ಒಪ್ಪಿಗೆ ದೊರೆತ ತಕ್ಷಣ ಮನೆಗಳ ಟಾರ್ಗೆಟ್‌ ನೀಡಲಾಗುವುದು.

● ಯು.ಟಿ. ಖಾದರ್ ವಸತಿ ಸಚಿವ

ಹಿಂದಿನ ಸರ್ಕಾರದಲ್ಲಿ ಮಂಜೂರಾದ ಮನೆಗಳ ನಿರ್ಮಾಣ ಆರಂಭವಾಗಿದೆ. ಆದರೆ, ಕಳೆದ ವರ್ಷದ ಮನೆಗಳಿಗೆ ಹಣ ಇನ್ನೂ ಬಿಡುಗಡೆಯಾಗಿಲ್ಲ. ಈ ವರ್ಷದಲ್ಲಿ ಎಷ್ಟು ಮನೆಗಳನ್ನು ನಿರ್ಮಾಣ ಮಾಡಬೇಕೆಂದು ಸರ್ಕಾರ ಗುರಿ ನಿಗದಿ ಮಾಡಿಲ್ಲ. ಹೀಗಾಗಿ ಈ ವರ್ಷ ಆಶ್ರಯ ಮನೆಗಳು ಯಾವಾಗ ಬರುತ್ತವೆ ಎನ್ನುವ ಬಗ್ಗೆ ಇನ್ನೂ ಮಾಹಿತಿಯಿಲ್ಲ. 
● ಸುನೀಲ್‌ ಕುಮಾರ್‌, ಬಿಜೆಪಿ ಶಾಸಕ

● ಶಂಕರ ಪಾಗೋಜಿ

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.