ಅಧಿಕಾರಕ್ಕಾಗಿ ಯಡಿಯೂರಪ್ಪ ಮಾಡಿದ್ದೆಲ್ಲ ಗೊತ್ತು


Team Udayavani, Oct 31, 2018, 6:00 AM IST

z-32.jpg

ಕುಂದಾಪುರ/ಶಿವಮೊಗ್ಗ: ಅಧಿಕಾರಕ್ಕಾಗಿ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಯಡಿಯೂರಪ್ಪ ಆರೋಪಿಸುತ್ತಾರೆ. ಒಂದು ಸಮಯದಲ್ಲಿ ಅಧಿಕಾರಕ್ಕಾಗಿ ಯಡಿಯೂರಪ್ಪ ದೇವೇಗೌಡರ ಮನೆಗೆ ಬಂದಿದ್ರು. ವಿಧಾನಸೌಧದಲ್ಲಿ 10 ನಿಮಿಷ ಮಾತಾಡಬೇಕು ಟೈಮ್‌ ಕೊಡಿ ಅಂತ ಚೀಟಿ ಕಳುಹಿಸಿದ್ರು. ಡಿಸಿಎಂ ಅಲ್ಲ ಸಚಿವ ಸ್ಥಾನ ಕೊಡಿ, ಬಿಜೆಪಿ ಬಿಟ್ಟು ಬರುವೆ ಅಂತ ಇವರೇ ಹೇಳಿದ್ದರು ಇದನ್ನೆಲ್ಲ ನೆನಪಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಶಿವಮೊಗ್ಗದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಟೀಕಾಪ್ರಹಾರ ನಡೆಸಿದರು. ಮೈತ್ರಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿಯವರು ಇಂದು ಅಥವಾ ನಾಳೆ ಸರಕಾರ ಉರುಳುತ್ತೆ ಎಂದು ಹೇಳುತ್ತಲೇ
ಬಂದಿದ್ದಾರೆ. ಈಗ ದೀಪಾವಳಿಗೆ ಸರ್ಕಾರ ಬೀಳುತ್ತದೆ ಎನ್ನಲು ಶುರು ಮಾಡಿದ್ದಾರೆ. ಇದನ್ನೆಲ್ಲ ಹೇಳಲು ಬಿಜೆಪಿಯವರು ಜ್ಯೋತಿಷಿಗಳಾ ಎಂದು ಕುಮಾರಸ್ವಾಮಿ ಟಾಂಗ್‌ ನೀಡಿದರು. ರಾಹು, ಕೇತುಗಳ ಬಗ್ಗೆ ಮಾತನಾಡುವ ಬಿಜೆಪಿ ನಾಯಕರು ಹಿಂದೆ ನಿಮ್ಮ ನಿಮ್ಮಲ್ಲಿಯೇ ಕೆಸರೆರಚಾಟ ಮಾಡಿಕೊಂಡ್ರಲ್ಲಾ ಅದು ಏನು? ಅಧಿಕಾರಕ್ಕೆ ಬಂದು 24 ಗಂಟೆಯಲ್ಲಿ ಸಿದ್ದರಾಮಯ್ಯರನ್ನು ಜೈಲಿಗೆ ಕಳುಹಿಸುತ್ತೀನಿ ಅಂತ ಹೇಳಿದ್ದ ನಿಮಗೆ ಈಗ ಸಿದ್ದರಾಮಯ್ಯನವರ ಬಗ್ಗೆ ಅನುಕಂಪ ಬಂತಾ? ಬಿಎಸ್‌ವೈ ಅವರು ತಮ್ಮ ವಿರುದ್ಧದ ಹಗರಣಗಳನ್ನೆಲ್ಲ ಮುಚ್ಚಿ ಹಾಕಿಕೊಳ್ಳಲು ಏನೇನು ಮಾಡಿದ್ರು ಅನ್ನೋದು ನನಗೆ ಗೊತ್ತು. ಇವರಿಗೆ ನೈತಿಕತೆಯೇ ಇಲ್ಲ ಎಂದು ಹೇಳಿದರು. ವರ್ಗಾವಣೆ ದಂಧೆ ಬಗ್ಗೆ ನನ್ನ ವಿರುದ್ಧ ಆರೋಪ ಮಾಡ್ತಿದ್ದೀರಿ. ವರ್ಗಾವಣೆಯಲ್ಲಿ ಹಣ ಮಾಡಿದ್ದೇವೆ ಅಂತಿರಲ್ಲ. ಈಶ್ವರಪ್ಪ ಕುಟುಂಬದವರಿಗೆ ವರ್ಗಾವಣೆ ಮಾಡಿದ್ದಕ್ಕೆ ಎಷ್ಟು ಕೊಟ್ರಾ ಅಂತ ಅವರೇ ಹೇಳಬೇಕು ಎಂದರು. ವಾಲ್ಮೀಕಿ ಜಯಂತಿಗೆ ಅನಾರೋಗ್ಯದ ಕಾರಣ ಗೈರಾದೆ ಹೊರತು ಬೇರಾವ ಉದ್ದೇಶ ಇಲ್ಲ ಎಂದರು.

ಗ್ಲಿಸರಿನ್‌ ಹಾಕ್ಕೊಂಡು ಅಳಲ್ಲ: “ನಾನು ಭಾವನಾಜೀವಿ. ಕೆಲ ಸಂದರ್ಭದಲ್ಲಿ ಜನರ ಕಷ್ಟ ನೋಡಿ ಮನಸ್ಸಿಗೆ ನೋವಾಗುತ್ತದೆ. ಸಹಜವಾಗಿ ಕಣ್ಣೀರು ಬರುತ್ತದೆ. ಬಿಜೆಪಿಯವರು ಇದನ್ನೂ ಟೀಕಿಸುತ್ತಾರೆ. ನಾನೇನು ಕಣ್ಣಿಗೆ ಗ್ಲಿಸರಿನ್‌ ಹಚ್ಚಿಕೊಂಡಿಲ್ಲ. ದಿನವೂ ಅಳುವುದಿಲ್ಲ. ಇದನ್ನು ಅರ್ಥ ಮಾಡಿಕೊಳ್ಳದೆ ಟೀಕಿಸಿದರೆ ನಾನೇನು ಹೇಳಲಾಗದು’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ
ಪ್ರತಿಪಾದಿಸಿದ್ದಾರೆ. ಇದಕ್ಕೂ ಮೊದಲು ಕುಂದಾಪುರ ಬಳಿಯ ತ್ರಾಸಿಯಲ್ಲಿ ಮಾತನಾಡಿ, ಬಿಜೆಪಿ ವಿರುದ್ಧ ಹರಿಹಾಯ್ದರು. ಹಿಂದುತ್ವದ ರಕ್ಷಣೆಯಲ್ಲಿ ಹಿಂದುವಾದ ನಾನು ಬಿಜೆಪಿಗಿಂತ ಒಂದು ಹೆಜ್ಜೆ ಮುಂದಿದ್ದೇನೆ. ಕರಾವಳಿಯಲ್ಲಿ ಹಿಂದುತ್ವ, ಧರ್ಮದ ಹೆಸರಿನಲ್ಲಿ ಸಂಘರ್ಷ ಹುಟ್ಟು ಹಾಕಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.