ಕಾಂಗೆ‹ಸ್‌ “ಖೆಡ್ಡಾ’ಗೆ ಬಿದ್ದರೆ ಬಿಜೆಪಿ ಅಭ್ಯರ್ಥಿ?


Team Udayavani, Nov 2, 2018, 12:30 PM IST

chandra.jpg

ಬೆಂಗಳೂರು: ರಾಮನಗರ ಉಪಚುನಾವಣೆ ಮತದಾನಕ್ಕೆ 48 ಗಂಟೆ ಬಾಕಿ ಇರುವಾಗ ಪಕ್ಷದ ಅಧಿಕೃತ ಅಭ್ಯರ್ಥಿ
ಸ್ಪರ್ಧೆಯಿಂದ ಹಿಂದೆ ಸರಿದು ಜೆಡಿಎಸ್‌ ಅಭ್ಯರ್ಥಿ ಬೆಂಬಲಿಸಿದ್ದರಿಂದ ಬಿಜೆಪಿಗೆ ಮರ್ಮಾಘಾತವಾಗಿದೆ. ಈ
ಕ್ಷಿಪ್ರ ಬೆಳವಣಿಗೆಯನ್ನು ಕಾಂಗ್ರೆಸ್‌ ತೋಡಿದ “ಖೆಡ್ಡಾ’ಕ್ಕೆ ಬಿಜೆಪಿ ಬಿದ್ದಿದೆ ಎಂಬುದಾಗಿ ವಿಶ್ಲೇಷಿಸಲಾಗುತ್ತಿದೆ.

ಕಾಂಗ್ರೆಸ್‌ನ ವಿಧಾನ ಪರಿಷತ್‌ ಸದಸ್ಯರ ಪುತ್ರನನ್ನೇ ಸೆಳೆದು ಅಚ್ಚರಿಯ ಫ‌ಲಿತಾಂಶ ನೀಡುವ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ಅಧಿಕೃತ ಅಭ್ಯರ್ಥಿಯೇ “ಕೈ’ ಕೊಡುವಂತೆ ಮಾಡುವಲ್ಲಿ ಕಾಂಗ್ರೆಸ್‌ ಯಶಸ್ವಿಯಾಗಿದ್ದು, ಕಮಲ ಪಾಳೆಯ ಲೆಕ್ಕಾಚಾರಗಳೆಲ್ಲಾ ತಲೆಕೆಳಗಾಗಿಸಿದೆ. ಅಧಿಕೃತ ಅಭ್ಯರ್ಥಿ ಸ್ಪಧೆಯಿಂದ ಹಿಂದೆ ಸರಿದಿರುವುದರಿಂದ ಯಾರಿಗೆ ಮತದಾನ ಮಾಡಬೇಕು ಎಂಬ ಗೊಂದಲ ಕಾರ್ಯಕರ್ತರು, ಬೆಂಬಲಿಗರನ್ನು ಕಾಡುತ್ತಿದೆ.

ಸಿಎಂ ಎಚ್‌.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ಎದುರಾದ ರಾಮನಗರ ವಿಧಾನಸಭೆ ಉಪಚುನಾವಣೆಯಲ್ಲಿ
ಗೆಲ್ಲುವ ಮೂಲಕ ಮೈತ್ರಿ ಪಕ್ಷಕ್ಕೆ ಜನಬೆಂಬಲವಿದೆ ಎಂಬುದನ್ನು ಸಾಬೀತು ಪಡಿಸುವುದು ಜೆಡಿಎಸ್‌ಗೆ ಅನಿವಾರ್ಯವಾಗಿತ್ತು. ಇನ್ನೊಂದೆಡೆ ಕಾಂಗ್ರೆಸ್‌ನ ಪ್ರಭಾವಿ ನಾಯಕ ಡಿ.ಕೆ. ಶಿವಕುಮಾರ್‌ ಉಸ್ತುವಾರಿಯಾಗಿರುವ ಜಿಲ್ಲೆಯಲ್ಲಿ ಪಕ್ಷದ ಹಿಡಿತ ಸಾಧಿಸುವುದು ಅಷ್ಟೇ ಮುಖ್ಯವಾಗಿತ್ತು. ಅಂತಿಮವಾಗಿ ಕುಮಾರಸ್ವಾಮಿ ಪತ್ನಿ ಅನಿತಾ
ಕುಮಾರಸ್ವಾಮಿಯವರನ್ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಮೈತ್ರಿ ಸರ್ಕಾರ ನಿರ್ಧರಿಸಿತ್ತು. ಹಾಗಿದ್ದರೂ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಒಮ್ಮತ ಮೂಡದಿರುವುದು ಹಲವು ಬಾರಿ ಬಹಿರಂಗವಾಗಿತ್ತು. ಈ ಒಡಕಿನ ಲಾಭ ಪಡೆಯುವ ಲೆಕ್ಕಾಚಾರ ನಡೆಸಿದ್ದ ಬಿಜೆಪಿ ವಿಧಾನ ಪರಿಷತ್‌ ಸದಸ್ಯರಾದ ಕಾಂಗ್ರೆಸ್‌ನ ಸಿ.ಎಂ. ಲಿಂಗಪ್ಪ ಪುತ್ರ ಎಲ್‌. ಚಂದ್ರಶೇಖರ್‌ರನ್ನು ಪಕ್ಷಕ್ಕೆ ಸೆಳೆದು ಕಣಕ್ಕಿಳಿಸುವಲ್ಲಿ ಯಶಸ್ವಿಯಾಗಿತ್ತು.

ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಅದೇ ಸಮುದಾಯದ ಕಾಂಗ್ರೆಸ್‌ ಕಟ್ಟಾಳುವಿನ ಪುತ್ರನನ್ನೇ ಸ್ಪರ್ಧೆಗಿಳಿಸಿ
ತಿರುಗೇಟು ನೀಡಲು ಬಿಜೆಪಿ ಸಜ್ಜಾಗಿತ್ತು. ಹಾಗೆಂದೇ ಒಕ್ಕಲಿಗ ಸಮುದಾಯದ ನಾಯಕರಾದ ಕೇಂದ್ರ ಸಚಿವ
ಡಿ.ವಿ.ಸದಾನಂದಗೌಡ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌, ಮುಖಂಡ ಮುನಿರಾಜುಗೌಡರನ್ನು ಚುನಾವಣಾ
ಉಸ್ತುವಾರಿಯನ್ನಾಗಿ ನೇಮಿಸಿ ಮತದಾರರನ್ನು ಸೆಳೆಯಲು ಮುಂದಾಗಿತ್ತು. ಆದರೆ ರಾತ್ರಿ ಬೆಳಗಾಗುವುದರಲ್ಲಿ   ಬಿಜೆಪಿ ಅಭ್ಯರ್ಥಿ ಕಾಂಗ್ರೆಸ್‌ ಸಂಸದ ಡಿ.ಕೆ.ಸುರೇಶ್‌ ಅವರ ಮಗ್ಗುಲಲ್ಲಿ ಕುಳಿತು ಜೆಡಿಎಸ್‌ ಬೆಂಬಲಿಸುವುದಾಗಿ ಘೋಷಿಸಿರುವುದು,ಬಿಜೆಪಿಗೆ ಮಹಾ ಆಘಾತ ನೀಡಿದಂತಾಗಿದೆ.

ಬಿಜೆಪಿಗೆ “ಖೆಡ್ಡಾ’ ತೋಡಿತೇ ಕಾಂಗ್ರೆಸ್‌?: ಕಾಂಗ್ರೆಸ್‌ ನಾಯಕ ಸಿ.ಎಂ.ಲಿಂಗಪ್ಪ ಅವರ ಪುತ್ರನನ್ನು ಅ.10ರಂದು
ಬಿಜೆಪಿಗೆ ಬರ ಮಾಡಿಕೊಳ್ಳಲಾಯಿತು. ಆ ಮೂಲಕ ಕಾಂಗ್ರೆಸ್‌ ಹಾಗೂ ಮೈತ್ರಿ ಸರ್ಕಾರಕ್ಕೆ ತಿರುಗೇಟು ನೀಡಲು ಪ್ರತಿತಂತ್ರ ಹೆಣೆದಿರುವುದಾಗಿ ಬಿಜೆಪಿ ಬೀಗಿತ್ತು. ಆಗ ಸಿ.ಎಂ. ಲಿಂಗಪ್ಪಪುತ್ರನ ಬಗ್ಗೆ ಒಂದಷ್ಟು ಆಕ್ರೋಶದ ಮಾತುಗಳನ್ನಾಡಿದ್ದು ಬಿಟ್ಟರೆ ಸಚಿವ ಡಿ.ಕೆ.ಶಿವಕುಮಾರ್‌, ಸಂಸದ ಡಿ.ಕೆ.ಸುರೇಶ್‌ ಆಕ್ರೋಶ ಇಲ್ಲವೇ ಅಸಮಾಧಾನದ ಮಾತುಗಳನ್ನಾಡಿರಲಿಲ್ಲ. ಅಲ್ಲದೇ ಪ್ರಚಾರದ ವೇಳೆಯೂ ಎಲ್ಲಿಯೂ ಚಂದ್ರಶೇಖರ್‌ ವಿರುದ್ಧ
ಕಾಂಗ್ರೆಸ್‌, ಜೆಡಿಎಸ್‌ ನಾಯಕರು ವಾಗ್ಧಾಳಿ ನಡೆಸಿದ್ದು ಕಂಡುಬರಲಿಲ್ಲ.

ಎರಡೂ ಪಕ್ಷಗಳ ಮುಖಂಡರು, ಕಾರ್ಯಕರ್ತರನ್ನು ಒಗ್ಗೂಡಿಸಿ ಮೈತ್ರಿ ಸರ್ಕಾರದ ಅಭ್ಯರ್ಥಿಯನ್ನೇ ಬೆಂಬಲಿಸುವಂತೆ ಮನವೊಲಿಸುತ್ತಿದ್ದ ಕಾಂಗ್ರೆಸ್‌ ಅಂತಿಮವಾಗಿ ಬಿಜೆಪಿ ಅಭ್ಯರ್ಥಿಯನ್ನೇ ಮರಳಿ ಪಕ್ಷಕ್ಕೆ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಈ ಎಲ್ಲ ಬೆಳವಣಿಗೆ ಡಿ.ಕೆ. ಸಹೋದರರ ಪೂರ್ವಯೋಜಿತ ತಂತ್ರ ಎಂದೇ ಬಣ್ಣಿಸಲಾಗುತ್ತಿದೆ. ಕಾಂಗ್ರೆಸ್‌ ನಾಯಕರೇ ಚಂದ್ರಶೇಖರ್‌ರನ್ನು ಬಿಜೆಪಿಯತ್ತ ಹೋಗುವಂತೆ ಮಾಡಿ ಬಳಿಕ
ಅಭ್ಯರ್ಥಿಯಾಗಿ ಕಣಕ್ಕಿಳಿದು ಅಂತಿಮ ಕ್ಷಣದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿಯುವ “ಮಾಸ್ಟರ್‌ ಪ್ಲಾನ್‌’ ರೂಪುಗೊಂಡಿತ್ತೇ ಎಂಬ ಬಗ್ಗೆ ಚರ್ಚೆ ನಡೆದಿದೆ. ಒಟ್ಟಿನಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಪ್ರಾಬಲ್ಯವಿರುವ ಹಳೆ ಮೈಸೂರು ಭಾಗದ ರಾಮನಗರದಲ್ಲಿ ಪ್ರಬಲ ಸ್ಪರ್ಧೆಯೊಡ್ಡುವ ಬಿಜೆಪಿಯ ಹುಮ್ಮಸ್ಸು ಮತದಾನಕ್ಕೂ ಮುನ್ನವೇ ಕಮರಿದೆ. ಈ ಬೆಳವಣಿಗೆ ರಾಮನಗರ ಜಿಲ್ಲೆ ಮಾತ್ರವಲ್ಲದೆ ರಾಜ್ಯ ಬಿಜೆಪಿಯಲ್ಲೂ ತಲ್ಲಣ ಸೃಷ್ಟಿಸಿದೆ.

ಬೆದರಿಕೆ ತಂತ್ರ
ಇನ್ನೊಂದೆಡೆ ಮೈತ್ರಿ ಸರ್ಕಾರದ ಪ್ರಮುಖರೇ ಚಂದ್ರಶೇಖರ್‌ಗೆ ಬೆದರಿಕೆಯೊಡ್ಡಿ ಸ್ಪರ್ಧೆಯಿಂದ
ಹಿಂದೆ ಸರಿಯುವಂತೆ ಮಾಡಿರುವ ಸಾಧ್ಯತೆ ತಳ್ಳಿಹಾಕುವಂತಿಲ್ಲ. ಚಂದ್ರಶೇಖರ್‌ ವಿರುದ್ಧ ಕೆಲ ಪ್ರಕರಣಗಳಿದ್ದು,
ಅವುಗಳನ್ನಾಧರಿಸಿ ತೊಂದರೆಗೆ ಸಿಲುಕಿಸುವುದಾಗಿ ಬೆದರಿಸಿ ಪಕ್ಷ ತೊರೆಯುವಂತೆ ಒತ್ತಡ ಹೇರಿರಬಹುದು ಎಂಬ ಮಾತುಗಳು ಕೇಳಿಬಂದಿವೆ.

ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.